ಅಮಾನತು 
ರಾಜ್ಯ

ಅಕ್ರಮವಾಗಿ ಮರಗಳನ್ನು ಕಡಿದ ಆರೋಪ: ವಿರಾಜಪೇಟೆ ವಿಭಾಗದ ಡಿಸಿಎಫ್ ಆಗಿದ್ದ ಚಕ್ರಪಾಣಿ ಅಮಾನತು

ಕೋಟ್ಯಂತರ ರೂಪಾಯಿ ಮೌಲ್ಯದ ಸಾಗುವಾನಿ ಮರಗಳನ್ನು ಅಕ್ರಮವಾಗಿ ಕಡಿದ ಆರೋಪದ ಮೇಲೆ ವಿರಾಜಪೇಟೆ ಉಪ ವಿಭಾಗದ ಉಪ ಅರಣ್ಯ ಸಂರಕ್ಷಣಾಧಿಕಾರಿಯಾಗಿದ್ದ (ಡಿಸಿಎಫ್), ಸದ್ಯ ಬೆಂಗಳೂರು ನಗರ ವಿಭಾಗದಲ್ಲಿ ಕರ್ತವ್ಯ ಸಲ್ಲಿಸುತ್ತಿರುವ ವೈ ಚಕ್ರಪಾಣಿ ಅವರನ್ನು ರಾಜ್ಯ ಸರ್ಕಾರ ಅಮಾನತುಗೊಳಿ ಆದೇಶ ಹೊರಡಿಸಿದೆ.

ಬೆಂಗಳೂರು: ಕೋಟ್ಯಂತರ ರೂಪಾಯಿ ಮೌಲ್ಯದ ಸಾಗುವಾನಿ ಮರಗಳನ್ನು ಅಕ್ರಮವಾಗಿ ಕಡಿದ ಆರೋಪದ ಮೇಲೆ ವಿರಾಜಪೇಟೆ ಉಪ ವಿಭಾಗದ ಉಪ ಅರಣ್ಯ ಸಂರಕ್ಷಣಾಧಿಕಾರಿಯಾಗಿದ್ದ (ಡಿಸಿಎಫ್), ಸದ್ಯ ಬೆಂಗಳೂರು ನಗರ ವಿಭಾಗದಲ್ಲಿ ಕರ್ತವ್ಯ ಸಲ್ಲಿಸುತ್ತಿರುವ ವೈ ಚಕ್ರಪಾಣಿ ಅವರನ್ನು ರಾಜ್ಯ ಸರ್ಕಾರ ಅಮಾನತುಗೊಳಿ ಆದೇಶ ಹೊರಡಿಸಿದೆ.

ಚಕ್ರಪಾಣಿ ಈ ಹಿಂದೆ ವಿರಾಜಪೇಟೆ ವಿಭಾಗದ ಡಿಸಿಎಫ್ ಆಗಿ ಕಾರ್ಯನಿರ್ವಹಿಸುತ್ತಿದ್ದರು. ಅವರ ವಿರುದ್ಧದ ಆರೋಪಗಳ ಹೊರತಾಗಿಯೂ ಅವರನ್ನು ನೇಮಿಸಿದ್ದ ರಾಜ್ಯ ಸರ್ಕಾರದ ನಿರ್ಧಾರವನ್ನು ಪರಿಸರ ಸಂರಕ್ಷಣಾವಾದಿಗಳು, ಕಾರ್ಯಕರ್ತರು ಮತ್ತು ತಜ್ಞರು ಪ್ರಶ್ನಿಸಿದ್ದರು.

ವಿರಾಜಪೇಟೆ ತಾಲೂಕಿನ ಕುಟ್ಟ ಗ್ರಾಮದ ಸರ್ವೆ ನಂ. 76/35 ಮತ್ತು 76/1ರಲ್ಲಿ ಅಕ್ರಮವಾಗಿ ಮರಗಳನ್ನು ಕಡಿದ ಪ್ರಕರಣವನ್ನು ಉಲ್ಲೇಖಿಸಿ ಈ ಆದೇಶ ಹೊರಡಿಸಲಾಗಿದೆ. ಫೆಬ್ರುವರಿ 4, 2023 ರ ಪತ್ರದಲ್ಲಿ, ವಿವರವಾದ ತನಿಖೆಯ ನಂತರ ಅಧಿಕಾರಿಯು ಪ್ರಕರಣದಲ್ಲಿ ಭಾಗಿಯಾಗಿದ್ದಾರೆ ಎಂದು ಹೇಳಲಾಗಿದೆ ಮತ್ತು ತೇಗದ ಮರಗಳನ್ನು ನೆಡುವ ನೆಪದಲ್ಲಿ, ಆಸ್ತಿ ಮಾಲೀಕರು ಮರಗಳಿಗೆ ಕೊಡಲಿಯೇಟು ನೀಡಿದ್ದಾರೆ ಎಂದು ತಿಳಿಸಿದೆ.

ನಾಗರಹೊಳೆ ಹುಲಿ ಸಂರಕ್ಷಿತ ಪ್ರದೇಶ ಮತ್ತು ಕೇರಳದ ವಯನಾಡು ವನ್ಯಜೀವಿ ಅಭಯಾರಣ್ಯದಿಂದ 10 ಮೀಟರ್ ದೂರದಲ್ಲಿರುವ ಸರ್ಕಾರಿ ಭೂಮಿಯನ್ನು ಅತಿಕ್ರಮಿಸಿದ ಪ್ರದೇಶದಲ್ಲಿದ್ದ ಬೃಹತ್ ಗಾತ್ರದ 66 ಮರಗಳನ್ನು ಕಡಿಯಲು ಅನುಮತಿ ಕೋರಿದ ದಾಖಲೆಯನ್ನು ಸೃಷ್ಟಿಸಲಾಗಿತ್ತು. ಬೋಗಸ್ ವರದಿ ಆಧರಿಸಿ, ಸ್ಥಳ ಪರಿಶೀಲಿಸದೆ ಮರಗಳನ್ನು ಕಡಿಯಲು ಚಕ್ರಪಾಣಿ ಅನುಮತಿ ನೀಡಿದ್ದರು ಎಂದು ಆರೋಪಿಸಲಾಗಿದೆ.

ಈ ಆರೋಪಕ್ಕೆ ಸಂಬಂಧಿಸಿದಂತೆ ಹೆಚ್ಚುವರಿ ಪ್ರಧಾನ ಮುಖ್ಯ ಅರಣ್ಯ ಸಂರಕ್ಷಣಾಧಿಕಾರಿ (ಜಾಗೃತ ದಳ) ವಿಚಾರಣೆ ನಡೆಸಿ ವರದಿ ಸಲ್ಲಿಸಿದ್ದರು. ಜಮೀನು ಮಾಲೀಕರಿಂದ ನಕಲಿ ಸಹಿ ಮಾಡಲಾಗಿದೆ ಎಂಬ ಅಂಶವೂ ಗಮನಕ್ಕೆ ಬಂದಿದೆ. ಸರ್ಕಾರದ ಮುದ್ರೆ, ಸಹಿಯನ್ನೂ ನಕಲಿ ಮಾಡಲಾಗಿದೆ ಎಂದು ಆದೇಶದಲ್ಲಿ ಸೂಚಿಸಲಾಗಿದೆ. 
 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಮಳೆ, 15,500 ಅಡಿ ಎತ್ತರದಲ್ಲಿ ಸೇನಾ ಕಾರ್ಯಾಚರಣೆ; ಪಾಕ್‌ ಉಗ್ರನ ಬೇಟೆ, 3 ಪ್ರಮುಖ ದಾಳಿಗಳಲ್ಲಿ ಶಾಮೀಲಾಗಿದ್ದ Yasir ಹತ

‘SIR ಹೆಸರಿನಲ್ಲಿ ಮುಸ್ಲಿಮರನ್ನು ಬಾಂಗ್ಲಾದೇಶ ನುಸುಳುಕೋರರೆಂದು ಬಿಂಬಿಸಬೇಡಿ’: ಮಾಜಿ ಮುಖ್ಯ ಚುನಾವಣಾ ಆಯುಕ್ತ S Y Quraishi

'ಅಸಹ್ಯಕರ' ಕೋರ್ಟ್‌ನ ಆತ್ಮಸಾಕ್ಷಿಗೆ ನೋವುಂಟಾಗಿದೆ: ಮೋದಿ ಪೋಸ್ಟರ್ ಪ್ರದರ್ಶಿಸಿದ್ದ ಬಂಗಾಳಿ ನಟಿಗೆ ಹೈಕೋರ್ಟ್‌ ತರಾಟೆ!

'ಜನರ ಬಳಿಗೇ ಸರ್ಕಾರ, ದೊರೆ ಎನ್ನಬೇಡಿ, ಸೇವಕ ಎನ್ನಿ': ಕರ್ನಾಟಕದಲ್ಲಿ ‘ಪ್ರಜಾಸೇವಾ ಅಭಿಯಾನ’ಕ್ಕೆ CM ಡಿಕೆ ಶಿವಕುಮಾರ್ ಚಾಲನೆ

ರಾಜ್ಯದ ಶಿಕ್ಷಕರಿಗೆ ಗುಡ್ ನ್ಯೂಸ್: ಇನ್ಮುಂದೆ ತಮ್ಮ ಹೆಸರಿಗೆ ಮೊದಲು 'Tr' ಬಳಸುವ ಅವಕಾಶ!