ಸಂಗ್ರಹ ಚಿತ್ರ 
ರಾಜ್ಯ

ಬಂಡೀಪುರ: ಸಾಕು ನಾಯಿ ಕೊಂದಿತೆಂದು ವಿಷಪ್ರಾಶನ ಮಾಡಿಸಿ ಚಿರತೆಯ ಹತ್ಯೆ

ಸಾಕು ನಾಯಿಯ ಕೊಂದು ಹಾಕಿತೆಂದು ಚಿರತೆಗೆ ವಿಷಪ್ರಾಶನ ಮಾಡಿಸಿ ಹತ್ಯೆ ಮಾಡಿರುವ ಘಟನೆಯೊಂದು ಚಾಮರಾಜನಗರ ಜಿಲ್ಲೆಯ ಬಂಡೀಪುರ ಸಮೀಪದ ಕೂಟನೂರು ಗ್ರಾಮದಲ್ಲಿ ಶುಕ್ರವಾರ ವರದಿಯಾಗಿದೆ.

ಬೆಂಗಳೂರು: ಸಾಕು ನಾಯಿಯ ಕೊಂದು ಹಾಕಿತೆಂದು ಚಿರತೆಗೆ ವಿಷಪ್ರಾಶನ ಮಾಡಿಸಿ ಹತ್ಯೆ ಮಾಡಿರುವ ಘಟನೆಯೊಂದು ಚಾಮರಾಜನಗರ ಜಿಲ್ಲೆಯ ಬಂಡೀಪುರ ಸಮೀಪದ ಕೂಟನೂರು ಗ್ರಾಮದಲ್ಲಿ ಶುಕ್ರವಾರ ವರದಿಯಾಗಿದೆ.

ಈ ಸಂಬಂಧ ಅರಣ್ಯಾಧಿಕಾರಿಗಳು ಆರೋಪಿಯನ್ನು ಬಂಧನಕ್ಕೊಳಪಡಿಸಿದ್ದಾರೆ. ಆರೋಪಿಯನ್ನು ಕೃಷಿ ಕಾರ್ಮಿಕ ರಮೇಶ್ ಎಂದು ಗುರ್ತಿಸಲಾಗಿದೆ. ಆರೋಪಿಯನ್ನು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ.

ಜಮೀನು ಮಾಲೀಕ ಜಿ.ಆರ್.ಗೋವಿಂದ ರಾಜು ಎಂಬುವರಿಗೆ ಸೇರಿದ ಕೃಷಿ ಭೂಮಿಯಲ್ಲಿ ಅರಣ್ಯಾಧಿಕಾರಿಗಳು ಚಿರತೆಯ ಶವವನ್ನು ಪತ್ತೆ ಮಾಡಿದ್ದಾರೆ.

ರಮೇಶ್ ಅವರು ಸಾಕಿದ್ದ ನಾಯಿಯನ್ನು ನಾಲ್ಕು ದಿನಗಳ ಹಿಂದೆ ಮೂರು ವರ್ಷದ ಹೆಣ್ಣು ಚಿರತೆ ಕೊಂದು ಹಾಕಿತ್ತು. ಇದರಿಂದ ಕುಪಿತಗೊಂಡ ರಮೇಶ್, ಚಿರತೆ ಭಾಗಶಃ ತಿಂದು ಬಿಟ್ಟಿದ್ದ ನಾಯಿಯ ಮೃತದೇಹಕ್ಕೆ ಕೀಟನಾಶಕವನ್ನು ಸಿಂಪಡಿಸಿದ್ದ. ಇದರಂತೆ ಚಿರತೆ ಮತ್ತೆ ಬಂದು ಮೃತದೇಹವನ್ನು ತಿಂದಿದೆ. ಈ ವೇಳೆ ವಿಷಪ್ರಾಶನದಿಂದ ಮೃತಪಟ್ಟಿದೆ ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಭಾರತ-ರಷ್ಯಾ ಆರ್ಥಿಕ ಬಾಂಧವ್ಯಕ್ಕೆ ಹೊಸ ಬಲ; ಪುಟಿನ್ ಭೇಟಿಯಾದ ಜೈಶಂಕರ್, ಪರಮಾಣು ಸಹಕಾರ ಸೇರಿ ಹಲವು ಅಂಶಗಳ ಕುರಿತು ಚರ್ಚೆ!

3 ದಿನ ಮೊದಲೇ ಮುಂಗಾರು ಅಧಿವೇಶನಕ್ಕೆ ತೆರೆ: 'ವಿರೋಧ ಪಕ್ಷಕ್ಕೆ ಹೆದರಿ ಅಧಿವೇಶನ ರದ್ದು'; ರಾಜ್ಯಪಾಲರಿಗೆ BJP ದೂರು!

Video: ಕುದಿಯುತ್ತಿದ್ದ ಬೆಲ್ಲದ ಪಾಕಕ್ಕೆ ಬಿದ್ದ ಯುವಕ; ಅಣ್ಣನ ಸಾಲ ತೀರಿಸಲು ಕೆಲಸಕ್ಕೆ ಹೋಗಿದ್ದವನ ದಾರುಣ ಅಂತ್ಯ

'ಕಿವಿಲಿ ಹೊಗೆ ಬರುವಂತಿದೆ': ಲಂಕಾ-ಭಾರತ ಟೆಸ್ಟ್ ಪಂದ್ಯದಲ್ಲಿ ಮತ್ತೊಂದು ವಿವಾದ, ಗ್ಲೌಸ್ ಕಿತ್ತೆಸೆದ ಬ್ಯಾಟರ್, ಆಗಿದ್ದೇನು?

ಬಿಜೆಪಿ MLC ಎನ್. ರವಿಕುಮಾರ್‌ ವಿರುದ್ಧ ಜಾಮೀನು ರಹಿತ ಬಂಧನ ವಾರಂಟ್