ಸಂಗ್ರಹ ಚಿತ್ರ 
ರಾಜ್ಯ

ಬಂಡೀಪುರ: ಸಾಕು ನಾಯಿ ಕೊಂದಿತೆಂದು ವಿಷಪ್ರಾಶನ ಮಾಡಿಸಿ ಚಿರತೆಯ ಹತ್ಯೆ

ಸಾಕು ನಾಯಿಯ ಕೊಂದು ಹಾಕಿತೆಂದು ಚಿರತೆಗೆ ವಿಷಪ್ರಾಶನ ಮಾಡಿಸಿ ಹತ್ಯೆ ಮಾಡಿರುವ ಘಟನೆಯೊಂದು ಚಾಮರಾಜನಗರ ಜಿಲ್ಲೆಯ ಬಂಡೀಪುರ ಸಮೀಪದ ಕೂಟನೂರು ಗ್ರಾಮದಲ್ಲಿ ಶುಕ್ರವಾರ ವರದಿಯಾಗಿದೆ.

ಬೆಂಗಳೂರು: ಸಾಕು ನಾಯಿಯ ಕೊಂದು ಹಾಕಿತೆಂದು ಚಿರತೆಗೆ ವಿಷಪ್ರಾಶನ ಮಾಡಿಸಿ ಹತ್ಯೆ ಮಾಡಿರುವ ಘಟನೆಯೊಂದು ಚಾಮರಾಜನಗರ ಜಿಲ್ಲೆಯ ಬಂಡೀಪುರ ಸಮೀಪದ ಕೂಟನೂರು ಗ್ರಾಮದಲ್ಲಿ ಶುಕ್ರವಾರ ವರದಿಯಾಗಿದೆ.

ಈ ಸಂಬಂಧ ಅರಣ್ಯಾಧಿಕಾರಿಗಳು ಆರೋಪಿಯನ್ನು ಬಂಧನಕ್ಕೊಳಪಡಿಸಿದ್ದಾರೆ. ಆರೋಪಿಯನ್ನು ಕೃಷಿ ಕಾರ್ಮಿಕ ರಮೇಶ್ ಎಂದು ಗುರ್ತಿಸಲಾಗಿದೆ. ಆರೋಪಿಯನ್ನು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ.

ಜಮೀನು ಮಾಲೀಕ ಜಿ.ಆರ್.ಗೋವಿಂದ ರಾಜು ಎಂಬುವರಿಗೆ ಸೇರಿದ ಕೃಷಿ ಭೂಮಿಯಲ್ಲಿ ಅರಣ್ಯಾಧಿಕಾರಿಗಳು ಚಿರತೆಯ ಶವವನ್ನು ಪತ್ತೆ ಮಾಡಿದ್ದಾರೆ.

ರಮೇಶ್ ಅವರು ಸಾಕಿದ್ದ ನಾಯಿಯನ್ನು ನಾಲ್ಕು ದಿನಗಳ ಹಿಂದೆ ಮೂರು ವರ್ಷದ ಹೆಣ್ಣು ಚಿರತೆ ಕೊಂದು ಹಾಕಿತ್ತು. ಇದರಿಂದ ಕುಪಿತಗೊಂಡ ರಮೇಶ್, ಚಿರತೆ ಭಾಗಶಃ ತಿಂದು ಬಿಟ್ಟಿದ್ದ ನಾಯಿಯ ಮೃತದೇಹಕ್ಕೆ ಕೀಟನಾಶಕವನ್ನು ಸಿಂಪಡಿಸಿದ್ದ. ಇದರಂತೆ ಚಿರತೆ ಮತ್ತೆ ಬಂದು ಮೃತದೇಹವನ್ನು ತಿಂದಿದೆ. ಈ ವೇಳೆ ವಿಷಪ್ರಾಶನದಿಂದ ಮೃತಪಟ್ಟಿದೆ ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಯುಕ್ರೇನ್-ರಷ್ಯಾ ಶಾಂತಿ ಒಪ್ಪಂದ ಸನಿಹ: ಸುಳಿವು ನೀಡಿದ ಯುಕ್ರೇನ್

2026 T20 ವಿಶ್ವಕಪ್: ಕೊಲಂಬೋದಲ್ಲಿ ಫೆ.15 ರಂದು ಭಾರತ- ಪಾಕ್ ಪಂದ್ಯ

ಕಾರು ಅಪಘಾತದಲ್ಲಿ ಐಎಎಸ್ ಅಧಿಕಾರಿ ಮಹಾಂತೇಶ್ ಬೀಳಗಿ ಸೇರಿ ಮೂವರು ಸಾವು: ಸಿಎಂ, ಡಿಸಿಎಂ ಸಂತಾಪ

CM ಬದಲಾವಣೆ ನಾಲ್ಕರಿಂದ ಐದು ಜನರ ನಡುವೆ ನಡೆದ "ರಹಸ್ಯ ಒಪ್ಪಂದ": ಡಿಕೆಶಿ​ ಸ್ಫೋಟಕ ಹೇಳಿಕೆ

ರಾಸಾಯನಿಕಗಳು, ಎಲೆಕ್ಟ್ರಾನಿಕ್ ಘಟಕಗಳ ಸುಲಭ ಲಭ್ಯತೆಯಿಂದ ಐಇಡಿ ಅಪಾಯ ಹೆಚ್ಚು: NSG

SCROLL FOR NEXT