ಸಂಗ್ರಹ ಚಿತ್ರ 
ರಾಜ್ಯ

ಬಂಡೀಪುರ: ಸಾಕು ನಾಯಿ ಕೊಂದಿತೆಂದು ವಿಷಪ್ರಾಶನ ಮಾಡಿಸಿ ಚಿರತೆಯ ಹತ್ಯೆ

ಸಾಕು ನಾಯಿಯ ಕೊಂದು ಹಾಕಿತೆಂದು ಚಿರತೆಗೆ ವಿಷಪ್ರಾಶನ ಮಾಡಿಸಿ ಹತ್ಯೆ ಮಾಡಿರುವ ಘಟನೆಯೊಂದು ಚಾಮರಾಜನಗರ ಜಿಲ್ಲೆಯ ಬಂಡೀಪುರ ಸಮೀಪದ ಕೂಟನೂರು ಗ್ರಾಮದಲ್ಲಿ ಶುಕ್ರವಾರ ವರದಿಯಾಗಿದೆ.

ಬೆಂಗಳೂರು: ಸಾಕು ನಾಯಿಯ ಕೊಂದು ಹಾಕಿತೆಂದು ಚಿರತೆಗೆ ವಿಷಪ್ರಾಶನ ಮಾಡಿಸಿ ಹತ್ಯೆ ಮಾಡಿರುವ ಘಟನೆಯೊಂದು ಚಾಮರಾಜನಗರ ಜಿಲ್ಲೆಯ ಬಂಡೀಪುರ ಸಮೀಪದ ಕೂಟನೂರು ಗ್ರಾಮದಲ್ಲಿ ಶುಕ್ರವಾರ ವರದಿಯಾಗಿದೆ.

ಈ ಸಂಬಂಧ ಅರಣ್ಯಾಧಿಕಾರಿಗಳು ಆರೋಪಿಯನ್ನು ಬಂಧನಕ್ಕೊಳಪಡಿಸಿದ್ದಾರೆ. ಆರೋಪಿಯನ್ನು ಕೃಷಿ ಕಾರ್ಮಿಕ ರಮೇಶ್ ಎಂದು ಗುರ್ತಿಸಲಾಗಿದೆ. ಆರೋಪಿಯನ್ನು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ.

ಜಮೀನು ಮಾಲೀಕ ಜಿ.ಆರ್.ಗೋವಿಂದ ರಾಜು ಎಂಬುವರಿಗೆ ಸೇರಿದ ಕೃಷಿ ಭೂಮಿಯಲ್ಲಿ ಅರಣ್ಯಾಧಿಕಾರಿಗಳು ಚಿರತೆಯ ಶವವನ್ನು ಪತ್ತೆ ಮಾಡಿದ್ದಾರೆ.

ರಮೇಶ್ ಅವರು ಸಾಕಿದ್ದ ನಾಯಿಯನ್ನು ನಾಲ್ಕು ದಿನಗಳ ಹಿಂದೆ ಮೂರು ವರ್ಷದ ಹೆಣ್ಣು ಚಿರತೆ ಕೊಂದು ಹಾಕಿತ್ತು. ಇದರಿಂದ ಕುಪಿತಗೊಂಡ ರಮೇಶ್, ಚಿರತೆ ಭಾಗಶಃ ತಿಂದು ಬಿಟ್ಟಿದ್ದ ನಾಯಿಯ ಮೃತದೇಹಕ್ಕೆ ಕೀಟನಾಶಕವನ್ನು ಸಿಂಪಡಿಸಿದ್ದ. ಇದರಂತೆ ಚಿರತೆ ಮತ್ತೆ ಬಂದು ಮೃತದೇಹವನ್ನು ತಿಂದಿದೆ. ಈ ವೇಳೆ ವಿಷಪ್ರಾಶನದಿಂದ ಮೃತಪಟ್ಟಿದೆ ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

Karnataka CM News LIVE Updates | ಮುಖ್ಯಮಂತ್ರಿ ಸ್ಥಾನಕ್ಕೆ ಸಿದ್ದರಾಮಯ್ಯ ರಾಜೀನಾಮೆ; ರಾಜ್ಯಸಭಾ ಸದಸ್ಯತ್ವ ನಿರಾಕರಣೆ

ವಿದಾಯದ ಕೊನೇ ಕ್ಷಣದಲ್ಲೂ Siddaramaiah ಮಹತ್ವದ ಕ್ರಮ: ಆಪ್ತ ಕಾರ್ಯದರ್ಶಿ, ವಿಶೇಷಾಧಿಕಾರಿ ವರ್ಗಾವಣೆ

Siddaramaiah Press Meet: 'ಹೈಕಮಾಂಡ್ ಆದೇಶದ ಮೇಲೆ ರಾಜಿನಾಮೆ ನೀಡಿದ್ದೇನೆ': ಸಿದ್ದರಾಮಯ್ಯ ವಿದಾಯದ ಮಾತು

Siddaramaiah ರಾಜಿನಾಮೆ: 'ನಾನು ಆ ಪಕ್ಷದಲ್ಲಿ ಇಲ್ಲದೆ ಇರಬಹುದು, ಆದರೆ ಅವರೊಂದಿಗಿನ ಒಡನಾಟ ಮರೆಯುವಂತದ್ದಲ್ಲ': BC ಪಾಟೀಲ್ ಭಾವುಕ

ಬೆಂಗಳೂರು ಬಲು ದುಬಾರಿ: ನಮ್ ಊರಲ್ಲಿ ಬಟ್ಟೆ ಇಸ್ತ್ರಿಗೆ ಬರೀ 5 ರೂಪಾಯಿ, ಆದ್ರೆ ಇಲ್ಲಿ 20 ರೂಪಾಯಿ!: ನೊಯ್ಡಾ ನಿವಾಸಿ ಅಚ್ಚರಿ!

SCROLL FOR NEXT