ದಿನೇಶ್ ಗುಂಡೂರಾವ್ 
ರಾಜ್ಯ

ಹಾರ, ಹೂಗುಚ್ಛಗಳಿಗೆ ಬದಲು ಪುಸ್ತಕ ನೀಡುವಂತೆ ಆರೋಗ್ಯ ಇಲಾಖೆ ಸುತ್ತೋಲೆ

ಆರೋಗ್ಯ ಮತ್ತು ಕುಟುಂಬ ಕಲ್ಯಾಣ ನಿರ್ದೇಶನಾಲಯವು ತನ್ನ ಇಲಾಖೆಗಳು ಆಯೋಜಿಸುವ ಯಾವುದೇ ಕಾರ್ಯಕ್ರಮಗಳಲ್ಲಿ ಹಾರ ಅಥವಾ ಹೂಗುಚ್ಛಗಳನ್ನು ಬಳಸದಂತೆ ಅಧಿಕಾರಿಗಳಿಗೆ ಸೂಚಿಸಿ ಸುತ್ತೋಲೆ ಹೊರಡಿಸಿದೆ. ಬದಲಿಗೆ ಅವರು ಪುಸ್ತಕಗಳನ್ನು ಉಡುಗೊರೆಯಾಗಿ ನೀಡಬಹುದು ಎಂದಿದೆ.

ಬೆಂಗಳೂರು: ಆರೋಗ್ಯ ಮತ್ತು ಕುಟುಂಬ ಕಲ್ಯಾಣ ನಿರ್ದೇಶನಾಲಯವು ತನ್ನ ಇಲಾಖೆಗಳು ಆಯೋಜಿಸುವ ಯಾವುದೇ ಕಾರ್ಯಕ್ರಮಗಳಲ್ಲಿ ಹಾರ ಅಥವಾ ಹೂಗುಚ್ಛಗಳನ್ನು ಬಳಸದಂತೆ ಅಧಿಕಾರಿಗಳಿಗೆ ಸೂಚಿಸಿ ಸುತ್ತೋಲೆ ಹೊರಡಿಸಿದೆ. ಬದಲಿಗೆ ಅವರು ಪುಸ್ತಕಗಳನ್ನು ಉಡುಗೊರೆಯಾಗಿ ನೀಡಬಹುದು ಎಂದಿದೆ.

ಈ ನಿರ್ದೇಶನವು ಆರೋಗ್ಯ ಇಲಾಖೆ, ಆಯುಷ್, ಕರ್ನಾಟಕ ರಾಜ್ಯ ವೈದ್ಯಕೀಯ ಸರಬರಾಜು ನಿಗಮ ಲಿಮಿಟೆಡ್ ಮತ್ತು ಇತರರಿಗೆ ಅನ್ವಯಿಸುತ್ತದೆ. ಆರೋಗ್ಯ ಇಲಾಖೆಗೆ ಸಂಬಂಧಿಸಿದ ಕಾರ್ಯಕ್ರಮಗಳನ್ನು ಆಯೋಜಿಸುವ ಸಾರ್ವಜನಿಕರಿಗಾಗಿ ಸಹ ಇದು ಉದ್ದೇಶಿಸಲಾಗಿದೆ.

ಮೊದಲಿಗೆ ಕರ್ನಾಟಕದ ನೂತನ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ವಿವಿಧ ಕಾರ್ಯಕ್ರಮಗಳಲ್ಲಿ ಗೌರವಾರ್ಥವಾಗಿ ಜನರು ನೀಡುವ ಹೂವುಗಳು ಅಥವಾ ಶಾಲುಗಳಿಗಿಂತ ಪುಸ್ತಕಗಳಿಗೆ ಆದ್ಯತೆ ನೀಡುವುದಾಗಿ ಮೇ 21 ರಂದು ಹೇಳಿದ್ದರು.

ಇದೇ ಹಾದಿಯನ್ನು ಅನುಸರಿಸಿದ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಅವರೂ, ಇನ್ಮುಂದೆ ಸನ್ಮಾನದ ಸಂದರ್ಭದಲ್ಲಿ ಹಾರ, ತುರಾಯಿ, ಶಾಲುಗಳನ್ನು ನೀಡುವ ಬದಲು ಪುಸ್ತಕಗಳನ್ನು ನೀಡಿ ಎಂದು ಮನವಿ ಮಾಡಿದ್ದಾರೆ.

ಈ ಬೆನ್ನಲ್ಲೇ ಆರೋಗ್ಯ ಇಲಾಖೆ ಕೂಡ ಹಾರ, ಹೂಗುಚ್ಛಗಳನ್ನು ನೀಡುವ ಬದಲು ಪುಸ್ತಕಗಳನ್ನು ನೀಡುವಂತೆ ಮನವಿ ಮಾಡಿ ಸುತ್ತೋಲೆ ಹೊರಡಿಸಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

'ವೆನೆಜುವೆಲಾ ಪರಿಸ್ಥಿತಿ ನಿಮಗೂ ಬರಬಹುದು.. ತಡ ಮಾಡದೇ ನಮ್ ಜೊತೆ ಒಪ್ಪಂದ ಮಾಡ್ಕೊಳ್ಳಿ': ಕ್ಯೂಬಾಗೂ Donald Trump ಎಚ್ಚರಿಕೆ!

ಕೊಹ್ಲಿ ಅರ್ಧಶತಕ: ನ್ಯೂಜಿಲ್ಯಾಂಡ್ ವಿರುದ್ಧದ ಮೊದಲ ಏಕದಿನ ಪಂದ್ಯದಲ್ಲಿ ಭಾರತಕ್ಕೆ ರೋಚಕ ಜಯ!

ತ್ರಿಪುರದಲ್ಲಿ ಎರಡು ಸಮುದಾಯಗಳ ನಡುವೆ ಘರ್ಷಣೆ: ಉನಕೋಟಿಯಲ್ಲಿ ಮಸೀದಿ-ಮುಸ್ಲಿಂ ಅಂಗಡಿಗಳಿಗೆ ಬೆಂಕಿ

ಒಂದು ವಾರದ ಚಿಕಿತ್ಸೆ ಬಳಿಕ ಆಸ್ಪತ್ರೆಯಿಂದ ಸೋನಿಯಾ ಗಾಂಧಿ ಡಿಸ್ಚಾರ್ಜ್!

Tubelight in his head: ಹಿಮಂತಾ ಬಿಸ್ವಾ ಶರ್ಮಾ ವಿರುದ್ಧ AIMIM ಮುಖ್ಯಸ್ಥ ಓವೈಸಿ ಕಿಡಿ! ಏನಿದು ವಿವಾದ?

SCROLL FOR NEXT