ದಿನೇಶ್ ಗುಂಡೂರಾವ್ 
ರಾಜ್ಯ

ಹಾರ, ಹೂಗುಚ್ಛಗಳಿಗೆ ಬದಲು ಪುಸ್ತಕ ನೀಡುವಂತೆ ಆರೋಗ್ಯ ಇಲಾಖೆ ಸುತ್ತೋಲೆ

ಆರೋಗ್ಯ ಮತ್ತು ಕುಟುಂಬ ಕಲ್ಯಾಣ ನಿರ್ದೇಶನಾಲಯವು ತನ್ನ ಇಲಾಖೆಗಳು ಆಯೋಜಿಸುವ ಯಾವುದೇ ಕಾರ್ಯಕ್ರಮಗಳಲ್ಲಿ ಹಾರ ಅಥವಾ ಹೂಗುಚ್ಛಗಳನ್ನು ಬಳಸದಂತೆ ಅಧಿಕಾರಿಗಳಿಗೆ ಸೂಚಿಸಿ ಸುತ್ತೋಲೆ ಹೊರಡಿಸಿದೆ. ಬದಲಿಗೆ ಅವರು ಪುಸ್ತಕಗಳನ್ನು ಉಡುಗೊರೆಯಾಗಿ ನೀಡಬಹುದು ಎಂದಿದೆ.

ಬೆಂಗಳೂರು: ಆರೋಗ್ಯ ಮತ್ತು ಕುಟುಂಬ ಕಲ್ಯಾಣ ನಿರ್ದೇಶನಾಲಯವು ತನ್ನ ಇಲಾಖೆಗಳು ಆಯೋಜಿಸುವ ಯಾವುದೇ ಕಾರ್ಯಕ್ರಮಗಳಲ್ಲಿ ಹಾರ ಅಥವಾ ಹೂಗುಚ್ಛಗಳನ್ನು ಬಳಸದಂತೆ ಅಧಿಕಾರಿಗಳಿಗೆ ಸೂಚಿಸಿ ಸುತ್ತೋಲೆ ಹೊರಡಿಸಿದೆ. ಬದಲಿಗೆ ಅವರು ಪುಸ್ತಕಗಳನ್ನು ಉಡುಗೊರೆಯಾಗಿ ನೀಡಬಹುದು ಎಂದಿದೆ.

ಈ ನಿರ್ದೇಶನವು ಆರೋಗ್ಯ ಇಲಾಖೆ, ಆಯುಷ್, ಕರ್ನಾಟಕ ರಾಜ್ಯ ವೈದ್ಯಕೀಯ ಸರಬರಾಜು ನಿಗಮ ಲಿಮಿಟೆಡ್ ಮತ್ತು ಇತರರಿಗೆ ಅನ್ವಯಿಸುತ್ತದೆ. ಆರೋಗ್ಯ ಇಲಾಖೆಗೆ ಸಂಬಂಧಿಸಿದ ಕಾರ್ಯಕ್ರಮಗಳನ್ನು ಆಯೋಜಿಸುವ ಸಾರ್ವಜನಿಕರಿಗಾಗಿ ಸಹ ಇದು ಉದ್ದೇಶಿಸಲಾಗಿದೆ.

ಮೊದಲಿಗೆ ಕರ್ನಾಟಕದ ನೂತನ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ವಿವಿಧ ಕಾರ್ಯಕ್ರಮಗಳಲ್ಲಿ ಗೌರವಾರ್ಥವಾಗಿ ಜನರು ನೀಡುವ ಹೂವುಗಳು ಅಥವಾ ಶಾಲುಗಳಿಗಿಂತ ಪುಸ್ತಕಗಳಿಗೆ ಆದ್ಯತೆ ನೀಡುವುದಾಗಿ ಮೇ 21 ರಂದು ಹೇಳಿದ್ದರು.

ಇದೇ ಹಾದಿಯನ್ನು ಅನುಸರಿಸಿದ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಅವರೂ, ಇನ್ಮುಂದೆ ಸನ್ಮಾನದ ಸಂದರ್ಭದಲ್ಲಿ ಹಾರ, ತುರಾಯಿ, ಶಾಲುಗಳನ್ನು ನೀಡುವ ಬದಲು ಪುಸ್ತಕಗಳನ್ನು ನೀಡಿ ಎಂದು ಮನವಿ ಮಾಡಿದ್ದಾರೆ.

ಈ ಬೆನ್ನಲ್ಲೇ ಆರೋಗ್ಯ ಇಲಾಖೆ ಕೂಡ ಹಾರ, ಹೂಗುಚ್ಛಗಳನ್ನು ನೀಡುವ ಬದಲು ಪುಸ್ತಕಗಳನ್ನು ನೀಡುವಂತೆ ಮನವಿ ಮಾಡಿ ಸುತ್ತೋಲೆ ಹೊರಡಿಸಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

'ಸದನದಲ್ಲಿ ಹುಲಿ, ಹೈಕಮಾಂಡ್‌ ಮುಂದೆ ಇಲಿ'.. 'ಅಧಿಕಾರದಲ್ಲಿ ಉಳಿಯಲು DK Shivakumar ಕ್ಷಮೆಯಾಚನೆ': BJP-JDS ಟೀಕಾ ಪ್ರಹಾರ!

RSS ಅನ್ನು ಯಾರೂ "ಸಮರ್ಥಿಸಿಕೊಳ್ಳಬಾರದು": ಡಿಕೆಶಿ ಕ್ಷಮೆಯಾಚನೆ ಸ್ವಾಗತಿಸಿದ ಬಿ.ಕೆ ಹರಿಪ್ರಸಾದ್

Indian Stock Market: ಸತತ ಕುಸಿತ, ಬರೊಬ್ಬರಿ ಶೇ.1ರಷ್ಟು ಕುಸಿದ Sensex, Nifty 50, ರೂಪಾಯಿ ಮೌಲ್ಯ ಇಳಿಕೆ!

'ನನ್ನ ಕುರ್ಚಿ'ಗೆ ಪ್ರಧಾನಿ ಮೋದಿ ಗೌರವ ನೀಡಬೇಕು: ಪಶ್ಚಿಮ ಬಂಗಾಳ ಸಿಎಂ ಮಮತಾ ಬ್ಯಾನರ್ಜಿ ಕಿಡಿ!

Indian Navy ಗೆ ಮತ್ತಷ್ಟು ಬಲ: INS Udaygiri, INS Himgiri ಯುದ್ಧನೌಕೆಗಳು ಸೇರ್ಪಡೆ! Video

SCROLL FOR NEXT