ಸಚಿವ ಈಶ್ವರ್ ಖಂಡ್ರೆ 
ರಾಜ್ಯ

ಕುಡಿಯುವ ನೀರಿನ ಸಮಸ್ಯೆ ಶೀಘ್ರಗತಿಯಲ್ಲಿ ಬಗೆಹರಿಸಿ: ಅಧಿಕಾರಿಗಳಿಗೆ ಸಚಿವ ಈಶ್ವರ್ ಖಂಡ್ರೆ ಸೂಚನೆ

ಕುಡಿಯುವ ನೀರಿನ ಸಮಸ್ಯೆಯನ್ನು ಗಂಭೀರವಾಗಿ ಪರಿಗಣಿಸಿ, ಶೀಘ್ರಗತಿಯಲ್ಲಿ ಬಗೆಹರಿಸುವಂತೆ ಅಧಿಕಾರಿಗಳಿಗೆ ಸಚಿವ ಈಶ್ವರ ಖಂಡ್ರೆ ಅವರು ಗುರುವಾರ ಸೂಚನೆ ನೀಡಿದರು.

ಬೀದರ್: ಕುಡಿಯುವ ನೀರಿನ ಸಮಸ್ಯೆಯನ್ನು ಗಂಭೀರವಾಗಿ ಪರಿಗಣಿಸಿ, ಶೀಘ್ರಗತಿಯಲ್ಲಿ ಬಗೆಹರಿಸುವಂತೆ ಅಧಿಕಾರಿಗಳಿಗೆ ಸಚಿವ ಈಶ್ವರ ಖಂಡ್ರೆ ಅವರು ಗುರುವಾರ ಸೂಚನೆ ನೀಡಿದರು.

ನಿನ್ನೆಯಷ್ಟೇ ಸಚಿವರು ಕಲುಷಿತ ನೀರು ಸೇವಿಸಿ 20 ಮಂದಿ ಅಸ್ವಸ್ಥಗೊಂಡಿದ್ದ ಕಮಲನಗರ ತಾಲೂಕಿನ ಕರ್ಕ್ಯಾಲ್ ಗ್ರಾಮಕ್ಕೆ ಭೇಟಿ ನೀಡಿದರು.

ಗ್ರಾಮ ಭೇಟಿ ಬಳಿಕ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಅಧಿಕಾರಿಗಳೊಂದಿಗೆ ಸಭೆ ನಡೆಸಿದರು. ಈ ವೇಳೆ ಶುದ್ಧ ಕುಡಿಯುವ ನೀರು ಒದಗಿಸಲು ಆದ್ಯತೆ ನೀಡುವುದು ಸರಕಾರದ ಕರ್ತವ್ಯ. ಈ ಬಾರಿ ಮಳೆ ಇನ್ನು ಆರಂಭವಾಗದ ಕಾರಣ ಕುಡಿಯುವ ನೀರಿನ ಸಮಸ್ಯೆ ಎದುರಾಗುತ್ತಿದೆ. ಸಮಸ್ಯೆಯನ್ನು ಕೂಡಲೇ ಪರಿಹರಿಸಲು ಕ್ರಮ ಕೈಗೊಳ್ಳುವಂತೆ ಅಧಿಕಾರಿಗಳಿಗೆ ಸೂಚಿಸಿದರು.

ಬೀದರ್ ಉದ್ಯಾನ ನಗರಿ ಮಾಡಲು ಬಯಸಿದ್ದೇನೆ. ಜುಲೈ 1 ರಂದು ‘ವನಮಹೋತ್ಸವ’ ಆಚರಿಸಲು ನಿರ್ಧರಿಸಲಾಗಿದೆ. ಈ ಸಂದರ್ಭದಲ್ಲಿ ಸುಮಾರು 2 ರಿಂದ 3 ಲಕ್ಷ ಮರಗಳನ್ನು ನೆಡಲಾಗುತ್ತದ ಎಂದು ಹೇಳಿದರು.

ಜಿಲ್ಲಾಧಿಕಾರಿ ಗೋವಿಂದರೆಡ್ಡಿ ಮಾತನಾಡಿ, ಔರಾದ್ ತಾಲೂಕಿನ ನಾಲ್ಕು ತಾಂಡಾಗಳಿಗೆ ಟ್ಯಾಂಕರ್ ಮೂಲಕ ಕುಡಿಯುವ ನೀರು ಪೂರೈಸುತ್ತಿದ್ದು, 51 ಗ್ರಾಮಗಳನ್ನು ಬರಪೀಡಿತ ಎಂದು ಪಟ್ಟಿ ಮಾಡಲಾಗಿದೆ ಎಂದು ತಿಳಿಸಿದರು.

ಸಭೆಯಲ್ಲಿ ಎಸ್ಪಿ ಚನ್ನಬಸವಣ್ಣ ಎಸ್.ಲಂಗೋಟಿ, ಎಂಎಲ್ಸಿ ಅರವಿಂದಕುಮಾರ ಅರಳಿ ಹಾಗೂ ಎಲ್ಲಾ ಇಲಾಖೆಗಳ ಅಧಿಕಾರಿಗಳು ಉಪಸ್ಥಿತರಿದ್ದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ನನ್ನ-ಕಾಂಗ್ರೆಸ್ ಮಧ್ಯೆ ಭಕ್ತ-ಭಗವಂತನ ಸಂಬಂಧ ಇದೆ; RSS ಗೀತೆ ಹಾಡಿದ್ದಕ್ಕೆ ನೋವಾಗಿದ್ದರೆ ಕ್ಷಮೆ ಕೇಳುತ್ತೇನೆ: ಡಿ.ಕೆ ಶಿವಕುಮಾರ್; Video

Tariff ಬೆನ್ನಲ್ಲೇ ಅಮೆರಿಕ ಅಧ್ಯಕ್ಷರಿಗೆ ಯುದ್ಧೋನ್ಮಾದ: "ಯುದ್ಧ ಇಲಾಖೆ" ಬಗ್ಗೆ ಟ್ರಂಪ್ ಒಲವು!

ಭಾರತದ ಮೇಲೆ ಶೇ. 50 ರಷ್ಟು ಸುಂಕ ನಾಳೆ ಜಾರಿ, ಅಮೆರಿಕ ಕರಡು ಸೂಚನೆ; ಔಷಧ, ಎಲೆಕ್ಟ್ರಾನಿಕ್ಸ್‌ ವಸ್ತುಗಳಿಗೆ ವಿನಾಯಿತಿ

Ragigudda Metro ನಿಲ್ದಾಣದಲ್ಲಿ ತಪ್ಪಿದ ದುರಂತ, ಆಯತಪ್ಪಿ ಹಳಿ ಮೇಲೆ ಬಿದ್ದ ಸಿಬ್ಬಂದಿ!... ಮುಂದೇನಾಯ್ತು? Video

ಸೌರಭ್ ಭಾರದ್ವಾಜ್ ಮನೆ ಮೇಲೆ ಇಡಿ ದಾಳಿ; ಮೋದಿ ನಕಲಿ ಪದವಿ ಕುರಿತ ಗಮನ ಬೇರೆಡೆ ಸೆಳೆಯಲು ಯತ್ನ ಎಂದ AAP

SCROLL FOR NEXT