ಸಾಂದರ್ಭಿಕ ಚಿತ್ರ 
ರಾಜ್ಯ

ಬೆಂಗಳೂರು: ಕೋರಮಂಗಲದಲ್ಲಿ 29 ವರ್ಷದ ಬೈಕ್ ಸವಾರನ ಮೇಲೆ ಹರಿದ ಟ್ರಕ್, ಸ್ಥಳದಲ್ಲೇ ಸಾವು

ಬೆಂಗಳೂರಿನಲ್ಲಿ ದ್ವಿಚಕ್ರ ವಾಹನ ಸವಾರನ ಮೇಲೆ ಕ್ಯಾಂಟರ್ ಟ್ರಕ್ ಹರಿದಿದ್ದು, ಅವರು ಸ್ಥಳದಲ್ಲೇ ಸಾವಿಗೀಡಾಗಿದ್ದಾರೆ.

ಬೆಂಗಳೂರು: ಆಗ್ನೇಯ ಬೆಂಗಳೂರಿನಲ್ಲಿ ದ್ವಿಚಕ್ರ ವಾಹನ ಸವಾರನ ಮೇಲೆ ಕ್ಯಾಂಟರ್ ಟ್ರಕ್ ಹರಿದಿದ್ದು, ಅವರು ಸ್ಥಳದಲ್ಲೇ ಸಾವಿಗೀಡಾಗಿದ್ದಾರೆ.

ಮೃತರನ್ನು 29 ವರ್ಷದ ಅಶೋಕ್ ಕುಮಾರ್ ಎಂದು ಗುರುತಿಸಲಾಗಿದ್ದು, ಅವರು ಕೋರಮಂಗಲದ 1ಎ ಬ್ಲಾಕ್‌ನ 8ನೇ ಮುಖ್ಯರಸ್ತೆಯಲ್ಲಿ ರಾತ್ರಿ 9.30ರ ವೇಳೆಗೆ ತೆರಳುತ್ತಿದ್ದಾಗ ಶಾಲೆಯ ಬಳಿ ಟ್ರಕ್ ದ್ವಿಚಕ್ರ ವಾಹನಕ್ಕೆ ಡಿಕ್ಕಿ ಹೊಡೆದಿದೆ.

ಡಿಕ್ಕಿಯ ರಭಸಕ್ಕೆ ಬೈಕ್ ಸವಾರ ಕೆಳಗೆ ಬಿದ್ದಿದ್ದು, ಕ್ಯಾಂಟರ್ ಹಿಂಬದಿಯ ಚಕ್ರಗಳು ಅವರ ಮೇಲೆ ಹರಿದಿದ್ದರಿಂದ ಅಶೋಕ್ ಅಲ್ಲಿಯೇ ಕೊನೆಯುಸಿರೆಳೆದಿದ್ದಾರೆ. 

ಕೋರಮಂಗಲದ ಕಾರ್ ಶೋ ರೂಂನಲ್ಲಿ ಅಕೌಂಟೆಂಟ್ ಆಗಿ ಕೆಲಸ ಮಾಡುತ್ತಿದ್ದ ಅಶೋಕ್ ಅವರು ಬೊಮ್ಮನಹಳ್ಳಿಯಲ್ಲಿ ವಾಸಿಸುತ್ತಿದ್ದರು. ಅವರಿಗೆ ಪತ್ನಿ ಮತ್ತು ಆರು ತಿಂಗಳ ಮಗುವಿದೆ. 

ಕ್ಯಾಂಟರ್ ಚಾಲಕನನ್ನು ಆಡುಗೋಡಿ ಸಂಚಾರ ಪೊಲೀಸರು ಗುರುತಿಸಿದ್ದು, ಆತನ ಬಂಧನಕ್ಕೆ ಶೋಧ ಕಾರ್ಯ ಕೈಗೊಂಡಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

Tilak Varma Masterclass: 5 ವಿಕೆಟ್ ಗಳಿಂದ ಪಾಕ್ ಬಗ್ಗುಬಡಿದ ಭಾರತ, Asia Cup 2025 ಚಾಂಪಿಯನ್!

Asia Cup 2025 Final: ಮ್ಯಾಚ್ ಫಿನಿಶರ್ ಯಾರು ಗೊತ್ತಾ?ಈ VIDEO ನೋಡಿ..

Asia cup 2025: ಹ್ಯಾರಿಸ್ ರೌಫ್ ಗೆ ತಿರುಗೇಟು ನೀಡಿದ ಬೂಮ್ರಾ! Video ವೈರಲ್

Asia CUP 2025: ಅದು ಬೇಕಿತ್ತಾ? ಶಾಟ್ ಹೊಡೆಯಲು ಹೋಗಿ ಬೇಗನೆ ಔಟಾದ 'ಅಭಿಷೇಕ್ ಶರ್ಮಾ' ವಿರುದ್ಧ ಕೆರಳಿದ ಗವಾಸ್ಕರ್! Video

Wangchuk’s wife: ಸೇನೆಗೆ ಶೆಲ್ಟರ್ ನಿರ್ಮಿಸಿ, ಚೀನಾ ವಸ್ತುಗಳನ್ನು ಬಹಿಷ್ಕರಿಸಿದ ಆತ ಹೇಗೆ ದೇಶ ವಿರೋಧಿ ಆಗ್ತಾನೆ? ವಾಂಗ್‌ಚುಕ್ ಪತ್ನಿ

SCROLL FOR NEXT