ರಾಜ್ಯ

ವಾಸ್ತು ನಂಬಿಕೆಗೆ ಡೋಂಟ್ ಕೇರ್: ಮುಖ್ಯಮಂತ್ರಿ ಕಚೇರಿಯ ದಕ್ಷಿಣ ದ್ವಾರ ತೆರೆಸಿದ ಸಿದ್ದರಾಮಯ್ಯ

Srinivas Rao BV

ಬೆಂಗಳೂರು: ವಾಸ್ತು ಸರಿಯಿಲ್ಲ ಎನ್ನುವ ಕಾರಣದಿಂದ ಬಂದ್ ಮಾಡಲಾಗಿದ್ದ ವಿಧಾನಸೌಧದ ಮುಖ್ಯಮಂತ್ರಿ ಕಚೇರಿಯ ದಕ್ಷಿಣ ದ್ವಾರವನ್ನು ಸಿಎಂ ಸಿದ್ದರಾಮಯ್ಯ ಇಂದು ತೆರೆಸಿದರು.

ಅನ್ನಭಾಗ್ಯ ಸಂಬಂಧ ಹಿರಿಯ ಅಧಿಕಾರಿಗಳೊಂದಿಗೆ ಸಭೆ ನಡೆಸಲು ವಿಧಾನಸೌಧಕ್ಕೆ ಆಗಮಿಸಿದ ಮುಖ್ಯಮಂತ್ರಿಗಳು ದಕ್ಷಿಣ ದ್ವಾರ ಬಂದ್ ಆಗಿರುವುದನ್ನು ಗಮನಿಸಿದರು. ವಾಸ್ತು ಕಾರಣದಿಂದ ಬಂದ್ ಮಾಡಲಾಗಿದೆ ಎನ್ನುವ ಉತ್ತರ ಅಧಿಕಾರಿಗಳಿಂದ ಬಂದ ಬಳಿಕ ಮುಖ್ಯಮಂತ್ರಿಗಳು ಆ ದ್ವಾರದಲ್ಲೇ ನಿಂತರು. ಸಿಬ್ಬಂದಿ ಒಳಗೆ ಹೋಗಿ ದಕ್ಷಿಣದ ದ್ವಾರವನ್ನು ತೆರೆದ ಬಳಿಕ ಅದೇ ದ್ವಾರದ ಮೂಲಕವೇ ತಮ್ಮ ಕಚೇರಿ ಪ್ರವೇಶಿಸುವ ಮೂಲಕ ದಕ್ಷಿಣ ದ್ವಾರವನ್ನು ತೆರೆಸಿದ್ದಾರೆ.     

ಆರೋಗ್ಯಕರ ಮನಸ್ಸು, ಸ್ವಚ್ಚ ಹೃದಯ, ಜನಪರ ಕಾಳಜಿ, ಒಳ್ಳೆ ಗಾಳಿ ಬೆಳಕು ಬರುವಂತಿದ್ದರೆ ಅದೇ ಉತ್ತಮ ವಾಸ್ತು ಎಂದು ಸಿಎಂ ಸಿದ್ದರಾಮಯ್ಯ ಅಧಿಕಾರಿಗಳ ಜತೆ ನಮ್ಮ ನಿಲುವನ್ನು ಹಂಚಿಕೊಂಡರು.

SCROLL FOR NEXT