ಸಂಗ್ರಹ ಚಿತ್ರ 
ರಾಜ್ಯ

ಬಿಬಿಎಂಪಿ ವಾರ್ಡ್‌ ಮರು ವಿಂಗಡಣೆಗೆ ಮತ್ತೊಮ್ಮೆ ಆಯೋಗ ರಚನೆ, ಚುನಾವಣೆ ಮತ್ತಷ್ಟು ವಿಳಂಬ!

ಬೆಂಗಳೂರಿನ ಸ್ಥಳೀಯ ಆಡಳಿತ ಸಂಸ್ಥೆ ಬೃಹತ್‌ ಬೆಂಗಳೂರು ಮಹಾನಗರ ಪಾಲಿಕೆ ವಾರ್ಡ್‌ ಮರುವಿಂಗಡಣೆಗೆ ರಾಜ್ಯ ಸರ್ಕಾರದಿಂದ ಆಯೋಗವನ್ನು ರಚಿಸಿ ಆದೇಶ ಹೊರಡಿಸಿದೆ. 12 ವಾರಗಳಲ್ಲಿ ವಾರ್ಡ್‌ ಮರುವಿಂಗಡಣಾ ವರದಿಯನ್ನು ಸಲ್ಲಿಸಲು ಸೂಚನೆ ನೀಡಲಾಗಿದೆ.

ಬೆಂಗಳೂರು: ಬೆಂಗಳೂರಿನ ಸ್ಥಳೀಯ ಆಡಳಿತ ಸಂಸ್ಥೆ ಬೃಹತ್‌ ಬೆಂಗಳೂರು ಮಹಾನಗರ ಪಾಲಿಕೆ ವಾರ್ಡ್‌ ಮರುವಿಂಗಡಣೆಗೆ ರಾಜ್ಯ ಸರ್ಕಾರದಿಂದ ಆಯೋಗವನ್ನು ರಚಿಸಿ ಆದೇಶ ಹೊರಡಿಸಿದೆ. 12 ವಾರಗಳಲ್ಲಿ ವಾರ್ಡ್‌ ಮರುವಿಂಗಡಣಾ ವರದಿಯನ್ನು ಸಲ್ಲಿಸಲು ಸೂಚನೆ ನೀಡಲಾಗಿದೆ.

2020ರ ಸೆಪ್ಟಂಬರ್‌ನಲ್ಲಿ ಬಿಬಿಎಂಪಿ ಸದಸ್ಯರ (ಕಾರ್ಪೋರೇಟರ್‌ಗಳ) ಅಧಿಕಾರ ಪೂರ್ಣಗೊಂಡಿದೆ. ಚುನಾವಣೆ ನಡೆಸುವ ದೃಷ್ಟಿಯಿಂದ 198 ವಾರ್ಡ್‌ಗಳಿಗೆ ವಾರ್ಡ್‌ ಪುನರ್‌ವಿಂಗಡಣೆ ಮಾಡಲಾಗಿತ್ತು. ನಂತರ, ಆಡಳಿತಾತ್ಮಕ ದೃಷ್ಟಿಕೋನದಿಂದ ಬಿಬಿಎಂಪಿ-2020 ಹೊಸ ಕಾಯ್ದೆಯನ್ನು ಜಾರಿಗೊಳಿಸಲಾಯಿತು. ಈ ವೇಳೆ ಬಿಬಿಎಂಪಿ ವ್ಯಾಪ್ತಿಯನ್ನು 243 ವಾರ್ಡ್‌ಗಳನ್ನಾಗಿ ಮಾಡಿ ರಚನೆ ಮಾಡಲಾಯಿತು. ನಂತರ ಚುನಾವಣೆ ದೃಷ್ಟಿಯಿಂದ ವಾರ್ಡ್‌ಗಳ ಮರುವಿಂಗಡಣೆ ಮಾಡಲಾಯಿತು. ಆದರೆ, ವಾರ್ಡ್‌ ಮರುವಿಂಗಡಣೆ ಸೂಕ್ತವಾಗಿಲ್ಲ ಎಂದು ಮಾಜಿ ಪಾಲಿಕೆ ಸದಸ್ಯರು ಕೋರ್ಟ್‌ ಮೊರೆ ಹೋಗಿದ್ದರು.

ಈ ಸಂಬಂಧ ವಿಚಾರಣೆ ನಡೆಸಿದ ಹೈಕೋರ್ಟ್‌, ತಪ್ಪುಗಳನ್ನು ಸರಿಪಡಿಸಿ 12 ವಾರಗಳಲ್ಲಿ ಹೊಸದಾಗಿ ವಾರ್ಡ್‌ಗಳ ಮರುವಿಂಗಡಣೆ ಮಾಡುವಂತೆ ಆದೇಶ ಹೊರಡಿಸಿತ್ತು. ಈ ಹಿನ್ನೆಲೆಯಲ್ಲಿ ರಾಜ್ಯ ಕಾಂಗ್ರೆಸ್‌ ಸರ್ಕಾರವು ಇದೀಗ ಮತ್ತೊಮ್ಮೆ (ಮೂರನೇ ಬಾರಿಗೆ) ಬಿಬಿಎಂಪಿ ವಾರ್ಡ್‌ಗಳ ಮರುವಿಂಗಡಣೆಗೆ ಆಯೋಗವನ್ನು ರಚಿಸಿ ಆದೇಶ ಹೊರಡಿಸಿದೆ.

ಹೈಕೋರ್ಟ್​ ಸೂಚನೆಯಂತೆ ವಾರ್ಡ್​ ಪುನರ್​ ವಿಂಗಡನೆಯ ಹಳೆ ಅಧಿಸೂಚನೆಯನ್ನ ಕೈಬಿಟ್ಟ ರಾಜ್ಯ ಸರ್ಕಾರ, ಹೊಸದಾಗಿ ವಾರ್ಡ್​ಗಳ ಡಿಲಿಮಿಟೇಶನ್​ಗೆ ಆಯೋಗ ರಚಿಸಿ ಆದೇಶ ಹೊರಡಿಸಿದೆ.

ಹೈಕೋರ್ಟ್​ ಆದೇಶದಂತೆ 12 ವಾರಗಳಲ್ಲಿ ವಾರ್ಡ್​ಗಳ ಪುನರ್​ ವಿಂಡಗನೆ ಮಾಡಲು ನೂತನ ಆಯೋಗಕ್ಕೆ ಸೂಚನೆ ನೀಡಿದೆ.

ಸರ್ಕಾರ ರಚಿಸಿದ ಪುನರ್ ಆಯೋಗದಲ್ಲಿ  ಬಿಬಿಎಂಪಿ ಮುಖ್ಯ ಆಯುಕ್ತ ರು ಅಧ್ಯಕ್ಷರಾಗಿದ್ದಾರೆ. ಜೊತೆಗೆ, ಬಿಡಿಎ ಆಯುಕ್ತರು, ಬೆಂಗಳೂರು ಜಿಲ್ಲಾಧಿಕಾರಿ ಮತ್ತು ಬಿಬಿಎಂಪಿ ಕಂದಾಯ ವಿಭಾಗದ ಆಯುಕ್ತರನ್ನು ಸದಸ್ಯರನ್ನಾಗಿ ಮಾಡಲಾಗಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ರಾಜೀನಾಮೆ ಬಗ್ಗೆ ಖುದ್ದು ಸುಳಿವು ನೀಡಿದ CM ಸಿದ್ದರಾಮಯ್ಯ; ಸಾಮಾಜಿಕ ಮಾಧ್ಯಮದಲ್ಲಿ ಮಹತ್ವದ ಪೋಸ್ಟ್​!

ಹೈಕಮಾಂಡ್ ಅದೇಶ ಪಾಲನೆ: ಗುರುವಾರ ಬೆಳಗ್ಗೆ 10.30ಕ್ಕೆ ರಾಜ್ಯಪಾಲರ ಭೇಟಿಗೆ ಸಮಯ ಕೇಳಿದ ಸಿಎಂ ಸಿದ್ದರಾಮಯ್ಯ; Video

ಗಡಿಯಲ್ಲಿ ಕಟ್ಟುನಿಟ್ಟಿನ ಕ್ರಮ: 15 ಕಿ.ಮೀ. ಒಳಗಿನ ಅಕ್ರಮ ನಿರ್ಮಾಣ ಕೆಡವಲು ಅಮಿತ್ ಶಾ ಸೂಚನೆ

SIR ಪ್ರಕ್ರಿಯೆಗೆ ಸುಪ್ರೀಂ ಕೋರ್ಟ್ ಗ್ರೀನ್ ಸಿಗ್ನಲ್; ಮುಕ್ತ ಹಾಗೂ ನ್ಯಾಯಸಮ್ಮತ ಚುನಾವಣೆಗೆ ಅಗತ್ಯ ಎಂದ ನ್ಯಾಯಪೀಠ..!

ಸಿಎಂ ಸಿದ್ದರಾಮಯ್ಯ ಪದತ್ಯಾಗ; ರಾಜ್ಯ ಹಿಂದುಳಿದ ವರ್ಗಗಳ ಆಯೋಗದ ಮಹತ್ವದ ಸಭೆ

SCROLL FOR NEXT