ಸಂಗ್ರಹ ಚಿತ್ರ 
ರಾಜ್ಯ

ಬೆಂಗಳೂರು: 4ನೇ ತರಗತಿ ವಿದ್ಯಾರ್ಥಿಗೆ 43 ಬಾರಿ ಥಳಿಸಿದ ಶಿಕ್ಷಕಿ ವಿರುದ್ಧ ಎಫ್ಐಆರ್ ದಾಖಲು!

ವೈಟ್‌ಫೀಲ್ಡ್‌ನ ಕಾಡುಗೋಡಿಯ ಖಾಸಗಿ ಶಾಲೆಯೊಂದರ 4ನೇ ತರಗತಿ ವಿದ್ಯಾರ್ಥಿಗೆ 43 ಬಾರಿ ಥಳಿಸಿ ಗಾಯಗೊಳಿಸಿದ ಶಿಕ್ಷಕಿ ವಿರುದ್ಧ ಎಫ್ಐಆರ್ ದಾಖಲಾಗಿದೆ.

ಬೆಂಗಳೂರು: ವೈಟ್‌ಫೀಲ್ಡ್‌ನ ಕಾಡುಗೋಡಿಯ ಖಾಸಗಿ ಶಾಲೆಯೊಂದರ 4ನೇ ತರಗತಿ ವಿದ್ಯಾರ್ಥಿಗೆ 43 ಬಾರಿ ಥಳಿಸಿ ಗಾಯಗೊಳಿಸಿದ ಶಿಕ್ಷಕಿ ವಿರುದ್ಧ ಎಫ್ಐಆರ್ ದಾಖಲಾಗಿದೆ.

ಶಿಕ್ಷಕಿಯ ಥಳಿತದಿಂದ ವಿದ್ಯಾರ್ಥಿಯ ಮುಖ ಮತ್ತು ದೇಹದ ಮೇಲೆ ನೀಲಿ ಬಣ್ಣದ ಗುರುತುಗಳಾಗಿದ್ದು, ಈ ಸಂಬಂಧ ಬಾಲಕನ ಪೋಷಕರು ನೀಡಿದ ದೂರಿನ ಆಧಾರದ ಮೇಲೆ ಪೊಲೀಸರು ಶಿಕ್ಷಕಿ ವಿರುದ್ಧ ಪ್ರಕರಣ ದಾಖಲಿಸಿಕೊಂಡಿದ್ದಾರೆ.

ಮಕ್ಕಳ ಆರೈಕೆ ಮತ್ತು ರಕ್ಷಣೆ ಕಾಯಿದೆ, 2015 ರ ಅಡಿಯಲ್ಲಿ ಶಿಕ್ಷಕಿಯ ವಿರುದ್ಧ ಪ್ರಕರಣ ದಾಖಲಿಸಲಾಗಿದ್ದು, ತನಿಖೆ ನಡೆಸಲಾಗುತ್ತಿದೆ ಎಂದು ಪೊಲೀಸ್ ಅಧಿಕಾರಿಗಳು ಹೇಳಿದ್ದಾರೆ.

ಬಾಲಕನ ತಂಗಿ ಕೂಡ ಅದೇ ಶಾಲೆಯಲ್ಲಿ ಓದುತ್ತಿದ್ದಾಳೆ. ಘಟನೆಗೂ ಎರಡು ದಿನಗಳ ಹಿಂದೆ ಪೋಷಕರಿಗೆ ದೂರವಾಣಿ ಕರೆ ಮಾಡಿರುವ ಶಿಕ್ಷಕರು ಹೋಮ್ ವರ್ಕ್ ಮಾಡಿಲ್ಲ ಎಂದು ಹೇಳಿದ್ದಾರೆ. ಈ ವೇಳೆ ಪೋಷಕರು ಡೈರಿಯಲ್ಲಿ ಬರೆದು ಕಳುಹಿಸುವಂತೆ ತಿಳಿಸಿದ್ದಾರೆ. ಈ ವಿಚಾರವಾಗಿ ಪೋಷಕರು ಹಾಗೂ ಶಿಕ್ಷಕಿಯ ನಡುವೆ ವೈಮನಸ್ಸು ಶುರುವಾಗಿದೆ. ಪೋಷಕರು ಹಾಗೂ ಶಿಕ್ಷಕಿಯ ನಡುವಿವ ವೈಮನಸ್ಸು ಬಾಲಕನ ಮೇಲೆ ಪರಿಣಾಮ ಬೀರುವಂತೆ ಮಾಡಿದೆ.

ನಾನೂ ಒಬ್ಬ ಶಿಕ್ಷಕ. ಮಕ್ಕಳು ಶಿಸ್ತು ಪಾಲನೆ ಮಾಡದಿದ್ದಾಗ ಏನಾಗುತ್ತದೆ ಎಂಬುದು ನನಗೂ ತಿಳಿದಿದೆ. ಮಗುವಿನ ಮೈ ಮುಖದ ಮೇಲೆ ನೀಲಿ ಗುರುತುಗಳು ಕಂಡು ಬಂದ ಬಳಿಕ ಪ್ರಾಂಶುಪಾಲರಿಗೆ ದೂರು ನೀಡಲಾಯಿತು. ಬಳಿಕ ಸಿಸಿಟಿವಿ ದೃಶ್ಯಾವಳಿಗಳನ್ನು ಪರಿಶೀಲನೆ ನಡೆಸಿದಾಗ ಶಿಕ್ಷಕಿ 30 ನಿಮಿಷಗಳ ಕಾಲ 43 ಬಾರಿ ಹೊಡೆದಿರುವುದು ಕಂಡು ಬಂದಿತು ಎಂದು ಬಾಲಕನ ತಂದೆ ಹೇಳಿದ್ದಾರೆ.

ಶಾಲಾ ಆಡಳಿತ ಮಂಡಳಿ ಪ್ರತಿಕ್ರಿಯೆ ನೀಡಿ, ದೂರಿನ ಬಳಿಕ ಶಿಕ್ಷಕಿಯನ್ನು ಸೇವೆಯಿಂದ ವಜಾಗೊಳಿಸಲಾಗಿದೆ ಎಂದು ತಿಳಿಸಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಭಾರತ-ರಷ್ಯಾ ಆರ್ಥಿಕ ಬಾಂಧವ್ಯಕ್ಕೆ ಹೊಸ ಬಲ; ಪುಟಿನ್ ಭೇಟಿಯಾದ ಜೈಶಂಕರ್, ಪರಮಾಣು ಸಹಕಾರ ಸೇರಿ ಹಲವು ಅಂಶಗಳ ಕುರಿತು ಚರ್ಚೆ!

3 ದಿನ ಮೊದಲೇ ಮುಂಗಾರು ಅಧಿವೇಶನಕ್ಕೆ ತೆರೆ: 'ವಿರೋಧ ಪಕ್ಷಕ್ಕೆ ಹೆದರಿ ಅಧಿವೇಶನ ರದ್ದು'; ರಾಜ್ಯಪಾಲರಿಗೆ BJP ದೂರು!

Video: ಕುದಿಯುತ್ತಿದ್ದ ಬೆಲ್ಲದ ಪಾಕಕ್ಕೆ ಬಿದ್ದ ಯುವಕ; ಅಣ್ಣನ ಸಾಲ ತೀರಿಸಲು ಕೆಲಸಕ್ಕೆ ಹೋಗಿದ್ದವನ ದಾರುಣ ಅಂತ್ಯ

'ಕಿವಿಲಿ ಹೊಗೆ ಬರುವಂತಿದೆ': ಲಂಕಾ-ಭಾರತ ಟೆಸ್ಟ್ ಪಂದ್ಯದಲ್ಲಿ ಮತ್ತೊಂದು ವಿವಾದ, ಗ್ಲೌಸ್ ಕಿತ್ತೆಸೆದ ಬ್ಯಾಟರ್, ಆಗಿದ್ದೇನು?

ಬಿಜೆಪಿ MLC ಎನ್. ರವಿಕುಮಾರ್‌ ವಿರುದ್ಧ ಜಾಮೀನು ರಹಿತ ಬಂಧನ ವಾರಂಟ್