ಸಿಎಂ ಸಿದ್ದರಾಮಯ್ಯ 
ರಾಜ್ಯ

ಅಭಿವ್ಯಕ್ತಿ ಸ್ವಾತಂತ್ರ್ಯದ ಬಗ್ಗೆ ಆತಂಕಪಡುವ ಅಗತ್ಯವಿಲ್ಲ: ಸಾಹಿತಿಗಳಿಗೆ ಸಿಎಂ ಸಿದ್ದರಾಮಯ್ಯ ಭರವಸೆ

ನಮ್ಮ ಸರ್ಕಾರದಲ್ಲಿ ಯಾರೂ ಸಹ ಅಭಿವ್ಯಕ್ತಿ ಸ್ವಾತಂತ್ರ್ಯ ಬಗ್ಗೆ ಆತಂಕ ಪಡುವ ಅಗತ್ಯ ಇಲ್ಲ. ಅಭಿವ್ಯಕ್ತಿ ಸ್ವಾತಂತ್ರ್ಯಕ್ಕೆ ಧಕ್ಕೆ ಬರದಂತೆ ನಾವು ನೋಡಿಕೊಳ್ಳುತ್ತೇವೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಶನಿವಾರ ಸಾಹಿತಿಗಳಿಗೆ ಭರವಸೆ...

ಬೆಂಗಳೂರು: ನಮ್ಮ ಸರ್ಕಾರದಲ್ಲಿ ಯಾರೂ ಸಹ ಅಭಿವ್ಯಕ್ತಿ ಸ್ವಾತಂತ್ರ್ಯ ಬಗ್ಗೆ ಆತಂಕ ಪಡುವ ಅಗತ್ಯ ಇಲ್ಲ. ಅಭಿವ್ಯಕ್ತಿ ಸ್ವಾತಂತ್ರ್ಯಕ್ಕೆ ಧಕ್ಕೆ ಬರದಂತೆ ನಾವು ನೋಡಿಕೊಳ್ಳುತ್ತೇವೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಶನಿವಾರ ಸಾಹಿತಿಗಳಿಗೆ ಭರವಸೆ ನೀಡಿದ್ದಾರೆ.

ಇಂದು ಕರ್ನಾಟಕ ರಾಜ್ಯ ಬರಹಗಾರರು ಹಾಗೂ ಪ್ರಕಾಶಕರ ಸಂಘದ 20ನೇ ವಾರ್ಷಿಕೋತ್ಸವ ಹಾಗೂ ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ ಮಾತನಾಡಿದ ಸಿಎಂ, ತಮ್ಮ ಅಭಿಪ್ರಾಯ ವ್ಯಕ್ತಪಡಿಸಲು ಯಾರೂ ಹೆದರಬೇಕಿಲ್ಲ ಲೇಖಕರ ಬರವಣಿಗೆಗಳು ಸಮಾಜಮುಖಿಯಾಗಿರಬೇಕು. ಸಮಾಜ ನನಗೇನು ನೀಡಿದೆ ಎಂದು ಪ್ರಶ್ನಿಸುವ ಬದಲು ಸಮಾಜಕ್ಕೆ ನನ್ನ ಕೊಡುಗೆಯೇನು ಎಂದು ಪ್ರಶ್ನಿಸಿಕೊಳ್ಳಬೇಕು ಎಂದರು.

ಜಾತಿ ವ್ಯವಸ್ಥೆಯಿಂದ ಅನೇಕ ಜನ ಶಿಕ್ಷಣದಿಂದ ವಂಚಿತರಾಗಿದ್ದಾರೆ ಮತ್ತು ಇದು ಆರ್ಥಿಕ ಮತ್ತು ಸಾಮಾಜಿಕ ಅಸಮಾನತೆಗೆ ಕಾರಣವಾಗುತ್ತದೆ ಎಂದು ಸಿಎಂ ಒತ್ತಿ ಹೇಳಿದರು.

ಭಾರತದಲ್ಲಿ ಸಾಮಾಜಿಕ ಮತ್ತು ಆರ್ಥಿಕ ಅಸಮಾನತೆಗಳಿವೆ. ಈ ಅಸಮಾನತೆ ತೊಲಗಿದರೆ ಸಮಾಜದಲ್ಲಿ ಶಾಂತಿ, ಸೌಹಾರ್ದತೆ ನೆಲೆಸಲು ಸಾಧ್ಯ. ಇದು ನಮ್ಮ ಸಂವಿಧಾನದ ಉದ್ದೇಶವಾಗಿದ್ದು, ನಮ್ಮ ಅನೇಕ ಸಾಹಿತಿಗಳು ಇದೇ ಯೋಚನೆಯ ಹಾದಿಯಲ್ಲಿಯೇ ಕೆಲಸ ಮಾಡುತ್ತಿದ್ದಾರೆ ಎಂದರು.

ನಾನು ಸಾಹಿತಿ ಅಲ್ಲದಿದ್ದರೂ ನನಗೆ ಅನಂತಮೂರ್ತಿ, ಪೂರ್ಣಚಂದ್ರ ತೇಜಸ್ವಿ, ಮಹದೇವ ಸೇರಿದಂತೆ ಹಲವು ಸಾಹಿತಿಗಳ ಒಡನಾಟ ಇತ್ತು ಎಂದು ಮುಖ್ಯಮಂತ್ರಿ ಸ್ಮರಿಸಿದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಭಾರತ-ರಷ್ಯಾ ಆರ್ಥಿಕ ಬಾಂಧವ್ಯಕ್ಕೆ ಹೊಸ ಬಲ; ಪುಟಿನ್ ಭೇಟಿಯಾದ ಜೈಶಂಕರ್, ಪರಮಾಣು ಸಹಕಾರ ಸೇರಿ ಹಲವು ಅಂಶಗಳ ಕುರಿತು ಚರ್ಚೆ!

3 ದಿನ ಮೊದಲೇ ಮುಂಗಾರು ಅಧಿವೇಶನಕ್ಕೆ ತೆರೆ: 'ವಿರೋಧ ಪಕ್ಷಕ್ಕೆ ಹೆದರಿ ಅಧಿವೇಶನ ರದ್ದು'; ರಾಜ್ಯಪಾಲರಿಗೆ BJP ದೂರು!

Video: ಕುದಿಯುತ್ತಿದ್ದ ಬೆಲ್ಲದ ಪಾಕಕ್ಕೆ ಬಿದ್ದ ಯುವಕ; ಅಣ್ಣನ ಸಾಲ ತೀರಿಸಲು ಕೆಲಸಕ್ಕೆ ಹೋಗಿದ್ದವನ ದಾರುಣ ಅಂತ್ಯ

'ಕಿವಿಲಿ ಹೊಗೆ ಬರುವಂತಿದೆ': ಲಂಕಾ-ಭಾರತ ಟೆಸ್ಟ್ ಪಂದ್ಯದಲ್ಲಿ ಮತ್ತೊಂದು ವಿವಾದ, ಗ್ಲೌಸ್ ಕಿತ್ತೆಸೆದ ಬ್ಯಾಟರ್, ಆಗಿದ್ದೇನು?

ಬಿಜೆಪಿ MLC ಎನ್. ರವಿಕುಮಾರ್‌ ವಿರುದ್ಧ ಜಾಮೀನು ರಹಿತ ಬಂಧನ ವಾರಂಟ್