ಸಿಎಂ ಸಿದ್ದರಾಮಯ್ಯ 
ರಾಜ್ಯ

ಅಭಿವ್ಯಕ್ತಿ ಸ್ವಾತಂತ್ರ್ಯದ ಬಗ್ಗೆ ಆತಂಕಪಡುವ ಅಗತ್ಯವಿಲ್ಲ: ಸಾಹಿತಿಗಳಿಗೆ ಸಿಎಂ ಸಿದ್ದರಾಮಯ್ಯ ಭರವಸೆ

ನಮ್ಮ ಸರ್ಕಾರದಲ್ಲಿ ಯಾರೂ ಸಹ ಅಭಿವ್ಯಕ್ತಿ ಸ್ವಾತಂತ್ರ್ಯ ಬಗ್ಗೆ ಆತಂಕ ಪಡುವ ಅಗತ್ಯ ಇಲ್ಲ. ಅಭಿವ್ಯಕ್ತಿ ಸ್ವಾತಂತ್ರ್ಯಕ್ಕೆ ಧಕ್ಕೆ ಬರದಂತೆ ನಾವು ನೋಡಿಕೊಳ್ಳುತ್ತೇವೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಶನಿವಾರ ಸಾಹಿತಿಗಳಿಗೆ ಭರವಸೆ...

ಬೆಂಗಳೂರು: ನಮ್ಮ ಸರ್ಕಾರದಲ್ಲಿ ಯಾರೂ ಸಹ ಅಭಿವ್ಯಕ್ತಿ ಸ್ವಾತಂತ್ರ್ಯ ಬಗ್ಗೆ ಆತಂಕ ಪಡುವ ಅಗತ್ಯ ಇಲ್ಲ. ಅಭಿವ್ಯಕ್ತಿ ಸ್ವಾತಂತ್ರ್ಯಕ್ಕೆ ಧಕ್ಕೆ ಬರದಂತೆ ನಾವು ನೋಡಿಕೊಳ್ಳುತ್ತೇವೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಶನಿವಾರ ಸಾಹಿತಿಗಳಿಗೆ ಭರವಸೆ ನೀಡಿದ್ದಾರೆ.

ಇಂದು ಕರ್ನಾಟಕ ರಾಜ್ಯ ಬರಹಗಾರರು ಹಾಗೂ ಪ್ರಕಾಶಕರ ಸಂಘದ 20ನೇ ವಾರ್ಷಿಕೋತ್ಸವ ಹಾಗೂ ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ ಮಾತನಾಡಿದ ಸಿಎಂ, ತಮ್ಮ ಅಭಿಪ್ರಾಯ ವ್ಯಕ್ತಪಡಿಸಲು ಯಾರೂ ಹೆದರಬೇಕಿಲ್ಲ ಲೇಖಕರ ಬರವಣಿಗೆಗಳು ಸಮಾಜಮುಖಿಯಾಗಿರಬೇಕು. ಸಮಾಜ ನನಗೇನು ನೀಡಿದೆ ಎಂದು ಪ್ರಶ್ನಿಸುವ ಬದಲು ಸಮಾಜಕ್ಕೆ ನನ್ನ ಕೊಡುಗೆಯೇನು ಎಂದು ಪ್ರಶ್ನಿಸಿಕೊಳ್ಳಬೇಕು ಎಂದರು.

ಜಾತಿ ವ್ಯವಸ್ಥೆಯಿಂದ ಅನೇಕ ಜನ ಶಿಕ್ಷಣದಿಂದ ವಂಚಿತರಾಗಿದ್ದಾರೆ ಮತ್ತು ಇದು ಆರ್ಥಿಕ ಮತ್ತು ಸಾಮಾಜಿಕ ಅಸಮಾನತೆಗೆ ಕಾರಣವಾಗುತ್ತದೆ ಎಂದು ಸಿಎಂ ಒತ್ತಿ ಹೇಳಿದರು.

ಭಾರತದಲ್ಲಿ ಸಾಮಾಜಿಕ ಮತ್ತು ಆರ್ಥಿಕ ಅಸಮಾನತೆಗಳಿವೆ. ಈ ಅಸಮಾನತೆ ತೊಲಗಿದರೆ ಸಮಾಜದಲ್ಲಿ ಶಾಂತಿ, ಸೌಹಾರ್ದತೆ ನೆಲೆಸಲು ಸಾಧ್ಯ. ಇದು ನಮ್ಮ ಸಂವಿಧಾನದ ಉದ್ದೇಶವಾಗಿದ್ದು, ನಮ್ಮ ಅನೇಕ ಸಾಹಿತಿಗಳು ಇದೇ ಯೋಚನೆಯ ಹಾದಿಯಲ್ಲಿಯೇ ಕೆಲಸ ಮಾಡುತ್ತಿದ್ದಾರೆ ಎಂದರು.

ನಾನು ಸಾಹಿತಿ ಅಲ್ಲದಿದ್ದರೂ ನನಗೆ ಅನಂತಮೂರ್ತಿ, ಪೂರ್ಣಚಂದ್ರ ತೇಜಸ್ವಿ, ಮಹದೇವ ಸೇರಿದಂತೆ ಹಲವು ಸಾಹಿತಿಗಳ ಒಡನಾಟ ಇತ್ತು ಎಂದು ಮುಖ್ಯಮಂತ್ರಿ ಸ್ಮರಿಸಿದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಅಮೆರಿಕ ನಿಯೋಜಿತ ರಾಯಭಾರಿ ಸೆರ್ಗಿಯೊ ಗೋರ್- ಮೋದಿ, ಜೈಶಂಕರ್ ಭೇಟಿ; Tariff ಒತ್ತಡದ ನಡುವೆ ಭಾರತ-ಅಮೆರಿಕ ಸಂಬಂಧ ಸುಧಾರಣೆಯ ಸೂಚನೆ?

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

ಅಬ್ಬಬ್ಬಾ ರೋಮಾಂಚನ: ಅದ್ಭುತ ಸೃಷ್ಟಿಸಿದ ರಿಷಬ್ ಶೆಟ್ಟಿಗೆ ರಾಷ್ಟ್ರಪ್ರಶಸ್ತಿ ಕೊಡಲೇಬೇಕು - ತಮಿಳು ನಿರ್ದೇಶಕ ಅಟ್ಲೀ

Pakistan: ಇಸ್ರೇಲ್ ವಿರೋಧಿ ಪ್ರತಿಭಟನಾ ಜಾಥಾ, ಪೋಲೀಸರ ಗುಂಡೇಟಿಗೆ 11 ಮಂದಿ ಬಲಿ! Video

ಉತ್ತರ ಪ್ರದೇಶಕ್ಕೆ ಭೇಟಿ ನೀಡಿದ ತಾಲಿಬಾನ್ ಸಚಿವನಿಗೆ ಅದ್ಧೂರಿ ಸ್ವಾಗತ, ಸರ್ಕಾರದ ಭದ್ರತೆ; ಯೋಗಿಗೆ ನಾಚಿಕೆಯಾಗಬೇಕು- SP ಸಂಸದ ಶಫೀಕರ್

SCROLL FOR NEXT