ರಾಜ್ಯ

ಶ್ರೀರಂಗಪಟ್ಟಣ: ಪತ್ನಿ, ಇಬ್ಬರು ಮಕ್ಕಳನ್ನು ಹತ್ಯೆ ಮಾಡಿದ್ದ ವ್ಯಕ್ತಿಯ ಬಂಧನ

Nagaraja AB

ಶ್ರೀರಂಗಪಟ್ಟಣ: ಪತ್ನಿ ಹಾಗೂ ಇಬ್ಬರು ಮಕ್ಕಳನ್ನು ಕೊಂದ ವ್ಯಕ್ತಿಯನ್ನು ಶ್ರೀರಂಗಪಟ್ಟಣ ಗ್ರಾಮಾಂತರ ಪೊಲೀಸರು ಭಾನುವಾರ ಬಂಧಿಸಿದ್ದು, ಜೈಲಿಗೆ ಕಳುಹಿಸಿದ್ದಾರೆ.

ಗುರುವಾರ ಮುಂಜಾನೆ ಮರಳಾಗಾಲ ಗ್ರಾಮದಲ್ಲಿ ವಿರೂಪಾಕ್ಷಪ್ಪ ಎಂಬುವರಿಗೆ ಸೇರಿದ ತೋಟದ ಮನೆಯಲ್ಲಿ ಪತ್ನಿ ಲಕ್ಷ್ಮಿಗೆ ಚೂರಿಯಿಂದ ಇರಿದು, ತನ್ನ ಮಕ್ಕಳಾದ ದರ್ಶನ್ ಮತ್ತು ಅಮೂಲ್ಯ ಅವರ ಕತ್ತು ಸೀಳಿ ಕೊಲೆಗೈದಿದ್ದ ಆರೋಪಿ ಶ್ರೀಕಾಂತ್ ನನ್ನು ಬಂಧಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. 

ಹತ್ಯೆ ನಂತರ ಆರೋಪಿ ಸ್ಥಳದಿಂದ ಪರಾರಿಯಾಗಿದ್ದ. ಲಕ್ಷ್ಮಿ ತಂದೆ ಮೋಹನ್ ಕುಮಾರ್ ನೀಡಿದ ದೂರಿನ ಆಧಾರದ ಮೇಲೆ ಐಪಿಸಿ ಸೆಕ್ಷನ್ 302 (ಕೊಲೆ) ಮತ್ತು 307 (ಕೊಲೆ ಅಪರಾಧ) ಅಡಿಯಲ್ಲಿ ಪ್ರಕರಣ ದಾಖಲಿಸಿಕೊಂಡ ಪೊಲೀಸರು ಜೂನ್ 24 ರಂದು ಕಲಬುರಗಿ ಜಿಲ್ಲೆಯ ದೇವಲ ಗಾಣಗಾಪುರ ಗ್ರಾಮದಲ್ಲಿ ಹಂತಕನನ್ನು ಬಂಧಿಸಿದ್ದಾರೆ.

 ಆತನನ್ನು ನ್ಯಾಯಾಲಯಕ್ಕೆ ಹಾಜರುಪಡಿಸಿದ ನಂತರ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ. 

SCROLL FOR NEXT