ಡ್ರಗ್ಸ್ ವಿರೋಧಿ ದಿನ ಆಚರಣೆ 
ರಾಜ್ಯ

ಅಂತಾರಾಷ್ಟ್ರೀಯ ಮಾದಕ ವಸ್ತುಗಳ ಸೇವನೆ ಹಾಗೂ ಕಳ್ಳಸಾಗಾಣಿಕೆ ವಿರೋಧಿ ದಿನ ಆಚರಣೆ: ವಾಕಥಾನ್ ನಲ್ಲಿ ಪಾಲ್ಗೊಂಡ ಡಿಸಿಎಂ

ಮಾದಕ ವಸ್ತುಗಳ ದುರ್ಬಳಕೆ ಮತ್ತು ಅಕ್ರಮ ಕಳ್ಳಸಾಗಣೆ ವಿರುದ್ಧದ ಅಂತಾರಾಷ್ಟ್ರೀಯ ದಿನವನ್ನು ವಿಶ್ವ ಮಾದಕ ವಸ್ತು ಬಳಕೆ ವಿರೋಧಿ ದಿನ ಎಂದು ಕರೆಯಲಾಗುತ್ತದೆ. ಇದನ್ನು ಪ್ರತಿ ವರ್ಷ ಜೂನ್ 26 ರಂದು ಮಾದಕ ವ್ಯಸನ ಮುಕ್ತ ಜಗತ್ತನ್ನು ನಿರ್ಮಿಸಲು ಕ್ರಮ ಮತ್ತು ಸಹಕಾರವನ್ನು ಬಲಪಡಿಸಲು ಆಚರಿಲಾಗುತ್ತದೆ.

ಬೆಂಗಳೂರು: ಮಾದಕ ವಸ್ತುಗಳ ದುರ್ಬಳಕೆ ಮತ್ತು ಅಕ್ರಮ ಕಳ್ಳಸಾಗಣೆ ವಿರುದ್ಧದ ಅಂತಾರಾಷ್ಟ್ರೀಯ ದಿನವನ್ನು ವಿಶ್ವ ಮಾದಕ ವಸ್ತು ಬಳಕೆ ವಿರೋಧಿ ದಿನ ಎಂದು ಕರೆಯಲಾಗುತ್ತದೆ. (International Day against Drug abuse and illicit trafficking).

ಇದನ್ನು ಪ್ರತಿ ವರ್ಷ ಜೂನ್ 26 ರಂದು ಮಾದಕ ವ್ಯಸನ ಮುಕ್ತ ಜಗತ್ತನ್ನು ನಿರ್ಮಿಸಲು ಕ್ರಮ ಮತ್ತು ಸಹಕಾರವನ್ನು ಬಲಪಡಿಸಲು ಆಚರಿಲಾಗುತ್ತದೆ. ಪ್ರತಿ ವರ್ಷ ಪ್ರಪಂಚದಾದ್ಯಂತದ ವಿವಿಧ ಸಂಸ್ಥೆಗಳು ವಿಶ್ವ ಮಾದಕವಸ್ತು ದಿನವನ್ನು ಆಚರಿಸುತ್ತವೆ. ಜೊತೆಗೆ ಸಮಾಜಕ್ಕೆ ನಿಷೇಧಿತ ಮಾದಕವಸ್ತುಗಳು ಉಂಟುಮಾಡುವ ಪ್ರಮುಖ ಸಮಸ್ಯೆಯ ಬಗ್ಗೆ ಜಾಗೃತಿ ಮೂಡಿಸುತ್ತವೆ.

1987 ಡಿಸೆಂಬರ್‌ 7ರಂದು ವಿಶ್ವಸಂಸ್ಥೆಯ ಸಾಮಾನ್ಯ ಸಭೆಯಲ್ಲಿ ಜೂನ್‌ 26 ಅನ್ನು ಅಂತಾರಾಷ್ಟ್ರೀಯ ಮಾದಕ ವಸ್ತುಗಳ ದುರುಪಯೋಗ ಮತ್ತು ಕಾನೂನು ಬಾಹಿರ ಸಾಗಾಟ ವಿರೋಧಿ ದಿನ ಎಂದು ಘೋಷಿಸಲಾಯಿತು.

ವಿಶ್ವದಾದ್ಯಂತ ಈ ದುಶ್ಚಟಗಳಿಗೆ ಇತ್ತೀಚಿನ ವರ್ಷಗಳಲ್ಲಿ ಮಕ್ಕಳು ಮತ್ತು ಯುವಕರು ಹೆಚ್ಚು ಬಲಿಯಾಗುತ್ತಿದ್ದಾರೆ. ಮಾದಕ ವಸ್ತುಗಳ ಮಾರಾಟ ಹಾಗೂ ಸಾಗಾಣೆ ಕಾನೂನ ಬಾಹಿರ ಎಂದು ಗೊತ್ತಿದ್ದರೂ ಇದರ ದಂಧೆ ಎಗ್ಗಿಲ್ಲದೆ ನಡೆಯುತ್ತಿದೆ. ಡ್ರಗ್‌ ಮಾಫಿಯಾ ಹತೋಟಿಗೆ ತರಲು ವಿಶ್ವದೆಲ್ಲೆಡೆ ಕಾನೂನು ಪ್ರಯತ್ನಗಳು ನಡೆಯುತ್ತಿವೆ. ಆದರೆ ಇದನ್ನು ಬುಡ ಸಮೇತ ಕಿತ್ತು ಹಾಕಲು ಸಾಧ್ಯವಾಗಿಲ್ಲ. 

ವಾಕಥಾನ್ ಗೆ ಡಿಸಿಎಂ ಚಾಲನೆ: ಅಂತಾರಾಷ್ಟ್ರೀಯ ಮಾದಕ ವಸ್ತುಗಳ ಸೇವನೆ ಹಾಗೂ ಕಳ್ಳಸಾಗಾಣಿಕೆ ವಿರೋಧಿ ದಿನದ ಅಂಗವಾಗಿ ಇಂದು ವಿಧಾನಸೌಧ ಮುಂದೆ ಡಿಸಿಎಂ ಡಿ ಕೆ ಶಿವಕುಮಾರ್ ಚಾಲನೆ ನೀಡಿದರು. ನಂತರ ವಿಧಾನಸೌಧದಿಂದ ಕಂಠೀರವ ಸ್ಟೇಡಿಯಂವರೆಗೂ ಮಕ್ಕಳೊಂದಿಗೆ ಪಾದಯಾತ್ರೆಯಲ್ಲಿ ಪಾಲ್ಗೊಂಡರು. ಉತ್ತಮ ಸಮಾಜಕ್ಕೆ ಯುವ ಶಕ್ತಿಯೇ ಆಧಾರ ಸ್ತಂಭ. ಆದರೆ ಡ್ರಗ್ಸ್ ಚಟದಿಂದಾಗಿ ಯುವಶಕ್ತಿಯು ತಪ್ಪು ದಾರಿ ಹಿಡಿಯುತ್ತಿದೆ. ಯುವಕರಲ್ಲಿ ಜಾಗೃತಿ ಮೂಡಿಸುವ ಇಂತಹ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಮಕ್ಕಳೊಂದಿಗೆ ಹೆಜ್ಜೆ ಹಾಕುವುದು ನನಗೆ ತುಂಬಾ ಖುಷಿ ನೀಡಿದೆ ಎಂದು ನೆರೆದಿದ್ದ ಮಕ್ಕಳಿಗೆ, ಜನಸಮೂಹ, ಯುವಜನತೆಗೆ ಶಿವಕುಮಾರ್ ಸಂದೇಶ ನೀಡಿದರು.

ಅಮಿತ್ ಶಾ ಸಂದೇಶ: ಮಾದಕ ದ್ರವ್ಯ ದುರ್ಬಳಕೆ ಮತ್ತು ಅಕ್ರಮ ಸಾಗಾಣಿಕೆ ವಿರುದ್ಧ ಅಂತಾರಾಷ್ಟ್ರೀಯ ದಿನದಂದು, ಮಾದಕ ದ್ರವ್ಯ ಪಿಡುಗಿನ ವಿರುದ್ಧ ದಿಟ್ಟತನದ ಹೋರಾಟವನ್ನು ನಡೆಸಿದ ಎಲ್ಲಾ ಮಾದಕ ದ್ರವ್ಯ ವಿರೋಧಿ ಯೋಧರಿಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಶುಭಾಶಯ ತಿಳಿಸಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಯುಕ್ರೇನ್-ರಷ್ಯಾ ಶಾಂತಿ ಒಪ್ಪಂದ ಸನಿಹ: ಸುಳಿವು ನೀಡಿದ ಯುಕ್ರೇನ್

2026 T20 ವಿಶ್ವಕಪ್: ಕೊಲಂಬೋದಲ್ಲಿ ಫೆ.15 ರಂದು ಭಾರತ- ಪಾಕ್ ಪಂದ್ಯ

ಕಾರು ಅಪಘಾತದಲ್ಲಿ ಐಎಎಸ್ ಅಧಿಕಾರಿ ಮಹಾಂತೇಶ್ ಬೀಳಗಿ ಸೇರಿ ಮೂವರು ಸಾವು: ಸಿಎಂ, ಡಿಸಿಎಂ ಸಂತಾಪ

CM ಬದಲಾವಣೆ ನಾಲ್ಕರಿಂದ ಐದು ಜನರ ನಡುವೆ ನಡೆದ "ರಹಸ್ಯ ಒಪ್ಪಂದ": ಡಿಕೆಶಿ​ ಸ್ಫೋಟಕ ಹೇಳಿಕೆ

ರಾಸಾಯನಿಕಗಳು, ಎಲೆಕ್ಟ್ರಾನಿಕ್ ಘಟಕಗಳ ಸುಲಭ ಲಭ್ಯತೆಯಿಂದ ಐಇಡಿ ಅಪಾಯ ಹೆಚ್ಚು: NSG

SCROLL FOR NEXT