ಸಂತ್ರಸ್ಥೆ ಶಾಂತಾ 
ರಾಜ್ಯ

2019ರ ಪ್ರವಾಹ: ಆತ್ಮಹತ್ಯೆಗೆ ಅನುಮತಿ ಕೋರಿ ದ್ರೌಪದಿ ಮುರ್ಮುಗೆ ನಿರಾಶ್ರಿತ ಮಹಿಳೆ ಪತ್ರ

ಕೊಡಗಿನ ಪ್ರವಾಹ ಸಂತ್ರಸ್ತ ಮಹಿಳೆ ತನಗೆ ಮನೆ ನಿರ್ಮಿಸಿಕೊಡಿ ಅಥವಾ ಆತ್ಮಹತ್ಯೆಗೆ ಅವಕಾಶ ಮಾಡಿಕೊಡಿ ಎಂದು ಸರ್ಕಾರವನ್ನು ಒತ್ತಾಯಿಸಿದ್ದಾರೆ. ಶಾಂತಾ ಎಂಬ ಮಹಿಳೆ ನೆಲ್ಲಿಹುದಿಕೇರಿಯಲ್ಲಿ ವಾಸವಿದ್ದು, ತೀವ್ರ ಸಂಕಷ್ಟದಲ್ಲಿದ್ದಾರೆ.

ಮಡಿಕೇರಿ: ಕೊಡಗಿನ ಪ್ರವಾಹ ಸಂತ್ರಸ್ತ ಮಹಿಳೆ ತನಗೆ ಮನೆ ನಿರ್ಮಿಸಿಕೊಡಿ ಅಥವಾ ಆತ್ಮಹತ್ಯೆಗೆ ಅವಕಾಶ ಮಾಡಿಕೊಡಿ ಎಂದು ಸರ್ಕಾರವನ್ನು ಒತ್ತಾಯಿಸಿದ್ದಾರೆ. ಶಾಂತಾ ಎಂಬ ಮಹಿಳೆ ನೆಲ್ಲಿಹುದಿಕೇರಿಯಲ್ಲಿ ವಾಸವಿದ್ದು, ತೀವ್ರ ಸಂಕಷ್ಟದಲ್ಲಿದ್ದಾರೆ.

ಅವರು ಇತ್ತೀಚೆಗೆ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರಿಗೆ ಪತ್ರ ಬರೆದು ತಮ್ಮ ದುಸ್ಥಿತಿಯನ್ನು ವಿವರಿಸಿದ್ದಾರೆ. ಕಾವೇರಿ ನದಿ ಒಡೆದು 2019ರ ಪ್ರವಾಹದಲ್ಲಿ ತನ್ನ ಮನೆ ಸೇರಿದಂತೆ ಹಲವಾರು ಮನೆಗಳು ಕೊಚ್ಚಿಹೋಗಿವೆ ಎಂದು ಶಾಂತಾ ಹೇಳಿದ್ದಾರೆ.

ನೆಲ್ಲಿಹುದಿಕೇರಿ, ಸಿದ್ದಾಪುರ, ಕರಡಿಗೋಡು, ಗುಹ್ಯ ಮತ್ತು ಸುತ್ತಮುತ್ತಲಿನ ತಗ್ಗು ಪ್ರದೇಶಗಳು ಪ್ರವಾಹಕ್ಕೆ ಸಿಲುಕಿವೆ ಎಂದು ಅವರು ಹೇಳಿದರು.

ಯಡಿಯೂರಪ್ಪ ನೇತೃತ್ವದ ಸರ್ಕಾರ ಪ್ರವಾಹ ಸಂತ್ರಸ್ತರಿಗೆ ಹೊಸ ಮನೆಗಳ ಭರವಸೆ ನೀಡಿತ್ತು. ಪ್ರವಾಹ ಸಂತ್ರಸ್ತರಿಗೆ ಹೊಸ ಮನೆಗಳ ನಿರ್ಮಾಣ ಪೂರ್ಣಗೊಳ್ಳುವವರೆಗೆ ಸಂತ್ರಸ್ತರು ಉಳಿದುಕೊಂಡಿರುವ ಮನೆಗಳಿಗೆ ಮಾಸಿಕ ಬಾಡಿಗೆ ನೀಡುವುದಾಗಿಯೂ ಸರ್ಕಾರ ಭರವಸೆ ನೀಡಿತ್ತು. ಆದರೆ, ಸರ್ಕಾರ ತನ್ನ ಭರವಸೆಯನ್ನು ಈಡೇರಿಸುವಲ್ಲಿ ವಿಫಲವಾಗಿದೆ ಎಂದು ರಾಷ್ಟ್ರಪತಿಗಳಿಗೆ ಬರೆದ ಪತ್ರದಲ್ಲಿ ಉಲ್ಲೇಖಿಸಿದ್ದಾರೆ.

ಶಾಂತಾ ಮನೆಕೆಲಸ ಮಾಡಿ ಜೀವನ ಸಾಗಿಸುತ್ತಿದ್ದಾರೆ. ಇದೀಗ ಬಾಡಿಗೆ ಮನೆಯಲ್ಲಿ ವಾಸವಿದ್ದು, ಮಾಸಿಕ ಬಾಡಿಗೆ ಕಟ್ಟಲು ಸಾಧ್ಯವಾಗುತ್ತಿಲ್ಲ ಎಂದು ಪತ್ರದಲ್ಲಿ ತಿಳಿಸಿದ್ದಾರೆ.

ಹಣಕಾಸಿನ ಪರಿಸ್ಥಿತಿಯು ದಿನದಿಂದ ದಿನಕ್ಕೆ ಹದಗೆಡುತ್ತಿದೆ. ಒಂದೋ ನನಗೆ ವಾಸಿಸಲು ಮನೆ ಕಟ್ಟಿಸಿ ಇಲ್ಲವೇ ನನಗೆ ಆತ್ಮಹತ್ಯೆ ಮಾಡಿಕೊಳ್ಳಲು ಅನುಮತಿ ನೀಡಿ ಎಂದು ಮನವಿ ಮಾಡಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಅಮೆರಿಕ ನಿಯೋಜಿತ ರಾಯಭಾರಿ ಸೆರ್ಗಿಯೊ ಗೋರ್- ಮೋದಿ, ಜೈಶಂಕರ್ ಭೇಟಿ; Tariff ಒತ್ತಡದ ನಡುವೆ ಭಾರತ-ಅಮೆರಿಕ ಸಂಬಂಧ ಸುಧಾರಣೆಯ ಸೂಚನೆ?

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

ಅಬ್ಬಬ್ಬಾ ರೋಮಾಂಚನ: ಅದ್ಭುತ ಸೃಷ್ಟಿಸಿದ ರಿಷಬ್ ಶೆಟ್ಟಿಗೆ ರಾಷ್ಟ್ರಪ್ರಶಸ್ತಿ ಕೊಡಲೇಬೇಕು - ತಮಿಳು ನಿರ್ದೇಶಕ ಅಟ್ಲೀ

Pakistan: ಇಸ್ರೇಲ್ ವಿರೋಧಿ ಪ್ರತಿಭಟನಾ ಜಾಥಾ, ಪೋಲೀಸರ ಗುಂಡೇಟಿಗೆ 11 ಮಂದಿ ಬಲಿ! Video

ಉತ್ತರ ಪ್ರದೇಶಕ್ಕೆ ಭೇಟಿ ನೀಡಿದ ತಾಲಿಬಾನ್ ಸಚಿವನಿಗೆ ಅದ್ಧೂರಿ ಸ್ವಾಗತ, ಸರ್ಕಾರದ ಭದ್ರತೆ; ಯೋಗಿಗೆ ನಾಚಿಕೆಯಾಗಬೇಕು- SP ಸಂಸದ ಶಫೀಕರ್

SCROLL FOR NEXT