ಯುಟಿ ಖಾದರ್ ಮತ್ತು ರವಿಶಂಕರ್ ಗುರೂಜಿ 
ರಾಜ್ಯ

ಶಾಸಕರ ತರಬೇತಿ ಶಿಬಿರ: ವಿವಾದಿತ ವ್ಯಕ್ತಿಗಳ ಹೆಸರು ಕೈಬಿಟ್ಟ ಸ್ಪೀಕರ್ UT ಖಾದರ್

ತೀವ್ರ ಸುದ್ದಿಗೆ ಗ್ರಾಸವಾಗಿದ್ದ ಶಾಸಕರ ತರಬೇತಿ ಶಿಬಿರಕ್ಕೆ ಆಹ್ವಾನಿಸಲಾಗಿದ್ದ ಸಂಪನ್ಮೂಲ ವ್ಯಕ್ತಿಗಳ ಹೆಸರಗಳ ಪಟ್ಟಿಯಿಂದ ವಿವಾದಿತ ವ್ಯಕ್ತಿಗಳ ಹೆಸರುಗಳನ್ನು ಕೈಬಿಡಲಾಗಿದೆ ಎಂದು ತಿಳಿದುಬಂದಿದೆ.

ಬೆಂಗಳೂರು: ತೀವ್ರ ಸುದ್ದಿಗೆ ಗ್ರಾಸವಾಗಿದ್ದ ಶಾಸಕರ ತರಬೇತಿ ಶಿಬಿರಕ್ಕೆ ಆಹ್ವಾನಿಸಲಾಗಿದ್ದ ಸಂಪನ್ಮೂಲ ವ್ಯಕ್ತಿಗಳ ಹೆಸರಗಳ ಪಟ್ಟಿಯಿಂದ ವಿವಾದಿತ ವ್ಯಕ್ತಿಗಳ ಹೆಸರುಗಳನ್ನು ಕೈಬಿಡಲಾಗಿದೆ ಎಂದು ತಿಳಿದುಬಂದಿದೆ.

ವಿಧಾನಸಭೆಗೆ ನೂತನವಾಗಿ ಆಯ್ಕೆಯಾದ ಶಾಸಕರಿಗೆ ಹಮ್ಮಿಕೊಂಡಿರುವ ಮೂರು ದಿನಗಳ ತರಬೇತಿ ಶಿಬಿರದಲ್ಲಿ ಸ್ಫೂರ್ತಿದಾಯಕ ಭಾಷಣದ ವ್ಯಕ್ತಿಗಳ ಆಯ್ಕೆ ಕುರಿತು ಸ್ಪೀಕರ್ ಯು.ಟಿ.ಖಾದರ್ ಅವರ ನಡೆಗೆ ತೀವ್ರ ಟೀಕೆ ಕೇಳಿಬಂದ ಹಿನ್ನೆಲೆ ವಿವಾದಿತ ಸಂಪನ್ಮೂಲ ವ್ಯಕ್ತಿಗಳ ಹೆಸರನ್ನು ಕೈಬಿಡಲಾಗಿದೆ.

ನೆಲಮಂಗಲ ಬಳಿಯಿರುವ ಧರ್ಮಸ್ಥಳದ ನ್ಯಾಚುರೋಪತಿ ಕೇಂದ್ರದಲ್ಲಿ ಜೂನ್ ೨೬ರಿಂದ ಮೂರು ದಿನಗಳ ಕಾಲ ತರಬೇತಿ ಶಿಬಿರ ಆಯೋಜಿಸಲಾಗಿದೆ. ಇದರಲ್ಲಿ ಧರ್ಮಸ್ಥಳದ ಧರ್ಮಾಧಿಕಾರಿ ಡಿ. ವೀರೇಂದ್ರ ಹೆಗ್ಗಡೆ, ಶಿಕ್ಷಣ ತಜ್ಞ ಗುರುರಾಜ ಕರ್ಜಗಿ, ರಾಜಯೋಗಿನಿ ಬ್ರಹ್ಮಕುಮಾರಿ ಆಶಾ ದೀದಿ, ಆರ್ಟ್ ಆಫ್ ಲಿವಿಂಗ್‌ನ ಶ್ರೀ ಶ್ರೀ ರವಿಶಂಕರ ಗುರೂಜಿ ಅವರನ್ನು ಸಂಪನ್ಮೂಲ ವ್ಯಕ್ತಿಗಳಾಗಿ ಆಹ್ವಾನಿಸಲಾಗಿದೆ ಎಂದು ಯು.ಟಿ.ಖಾದರ್ ತಿಳಿಸಿದ್ದರು.

ಇದರ ಬೆನ್ನಲ್ಲೇ, ಧಾರ್ಮಿಕ ಪ್ರತಿನಿಧಿಗಳ, ವಿವಾದಾಸ್ಪದ ವ್ಯಕ್ತಿಗಳ ಪ್ರವಚನವನ್ನು ಕೈ ಬಿಡಬೇಕು ಎಂದು ಸಾಮಾಜಿಕ, ಸಾಂಸ್ಕೃತಿಕ, ಸಾಹಿತ್ಯಿಕ ವಲಯ ಒಕ್ಕೊರಲಿನಿಂದ ಆಗ್ರಹಿಸಿದ್ದವು. ಜತೆಗೆ ಈ ವಿವಾದ ದಿನೇ ದಿನೇ ಹೆಚ್ಚಾದ ಕಾರಣ ಇದೀಗ ಅಧಿಕೃತವಾಗಿ ಗುರುರಾಜ ಕರ್ಜಗಿ, ಶ್ರೀ ಶ್ರೀ ರವಿಶಂಕರ ಗುರೂಜಿ ಹೆಸರುಗಳನ್ನು ಕೈಬಿಡಲಾಗಿದೆ ಎಂದು ತಿಳಿದುಬಂದಿದೆ.

ಈ ಸಂಬಂಧಿಸಿದಂತೆ ಶಿಬಿರದ ಆಹ್ವಾನ ಪತ್ರಿಕೆ ಹೊರಬಿದ್ದಿದ್ದು, ಗುರುರಾಜ ಕರ್ಜಗಿ ಬದಲಾಗಿ ಮುಖ್ಯಮಂತ್ರಿ ಚಂದ್ರು ಅವರು ಶಾಸನ ಸಭೆಯಲ್ಲಿ ಕರ್ತವ್ಯದ ಹಾಸ್ಯಭರಿತ ನಿರ್ವಹಣೆ ಕುರಿತು ಮಾತನಾಡಲಿದ್ದಾರೆ. ಅಂತೆಯೇ ರವಿಶಂಕರ ಗುರೂಜಿ ಬದಲಾಗಿ ಬ್ರಹ್ಮ ಕುಮಾರಿಸ್ ಸಂಸ್ಥೆಯ ಬಿ.ಕೆ.ವೀಣಾ, ಬಿ.ಕೆ.ಭುವನೇಶ್ವರಿ ಸಂವಾದ ನಡೆಸಿಕೊಡಲಿದ್ದಾರೆ.

ಶಿಬಿರಕ್ಕೆ ಆಯ್ಕೆ ಮಾಡಿರುವ ಸಂಪನ್ಮೂಲ ವ್ಯಕ್ತಿಗಳ ಕುರಿತು ಅನೇಕರು ಭಿನ್ನಾಭಿಪ್ರಾಯ ವ್ಯಕ್ತಪಡಿಸಿದ್ದರು ಸಂಸದೀಯ ವ್ಯವಸ್ಥೆಯ ಮೌಲ್ಯಗಳ ರಕ್ಷಣೆಯ ದೃಷ್ಟಿಯಿಂದ ಈ ವಿಚಾರವನ್ನು ಮರು ಪರಿಶೀಲಿಸಬೇಕು ಹಲವರು ಆಗ್ರಹಿಸಿದ್ದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

'ವೆನೆಜುವೆಲಾ ಪರಿಸ್ಥಿತಿ ನಿಮಗೂ ಬರಬಹುದು.. ತಡ ಮಾಡದೇ ನಮ್ ಜೊತೆ ಒಪ್ಪಂದ ಮಾಡ್ಕೊಳ್ಳಿ': ಕ್ಯೂಬಾಗೂ Donald Trump ಎಚ್ಚರಿಕೆ!

ಒಂದು ವಾರದ ಚಿಕಿತ್ಸೆ ಬಳಿಕ ಆಸ್ಪತ್ರೆಯಿಂದ ಸೋನಿಯಾ ಗಾಂಧಿ ಡಿಸ್ಚಾರ್ಜ್!

Tubelight in his head: ಹಿಮಂತಾ ಬಿಸ್ವಾ ಶರ್ಮಾ ವಿರುದ್ಧ AIMIM ಮುಖ್ಯಸ್ಥ ಓವೈಸಿ ಕಿಡಿ! ಏನಿದು ವಿವಾದ?

'ಒಬ್ಬ ಅಲ್ಲ.. ಭಾರತದ ಮೇಲೆ ದಾಳಿಗೆ ಸಾವಿರಾರು ಆತ್ಮಹತ್ಯಾ ಬಾಂಬರ್‌ಗಳು ಸಿದ್ಧ': ಪಾಕ್ ಮೂಲದ ಉಗ್ರ Masood Azhar ಆಡಿಯೋ ವೈರಲ್!

1st ODI: ನ್ಯೂಜಿಲೆಂಡ್ ವಿರುದ್ಧ ಭರ್ಜರಿ ಬ್ಯಾಟಿಂಗ್, ಸಚಿನ್ ತೆಂಡೂಲ್ಕರ್, ಸಂಗಕ್ಕಾರ ದಾಖಲೆ ಮುರಿದ Virat Kohli

SCROLL FOR NEXT