ಚಕ್ರವರ್ತಿ ಸೂಲಿಬೆಲೆ-ಸಚಿವ ಎಂ ಬಿ ಪಾಟೀಲ್ 
ರಾಜ್ಯ

ನಾವು ಶಿವಾಜಿ, ರಾಣಾ ಪ್ರತಾಪ್, ಸಾವರ್ಕರ್ ವಂಶಸ್ಥರು, ನಾನು ಭಗತಸಿಂಗ್ ಹೆಸರು ಹೇಳಿಕೊಂಡು ಬಂದವನು, ನನ್ನನ್ನ ಜೈಲಿಗೆ ಹಾಕುತ್ತೀರಾ: ಚಕ್ರವರ್ತಿ ಸೂಲಿಬೆಲೆ

ರಾಜ್ಯ ಸರ್ಕಾರದ ಶಾಲಾ ಮಕ್ಕಳ ಪಠ್ಯಪುಸ್ತಕ ಪರಿಷ್ಕರಣೆ ರಾಜಕೀಯ ನಾಯಕರ ಹೇಳಿಕೆಗಳಿಂದ ವಿವಾದ ರೂಪ ಪಡೆದಿದೆ.

ವಿಜಯಪುರ: ರಾಜ್ಯ ಸರ್ಕಾರದ ಶಾಲಾ ಮಕ್ಕಳ ಪಠ್ಯಪುಸ್ತಕ ಪರಿಷ್ಕರಣೆ ರಾಜಕೀಯ ನಾಯಕರ ಹೇಳಿಕೆಗಳಿಂದ ವಿವಾದ ರೂಪ ಪಡೆದಿದೆ.

ಪಠ್ಯ ಪುಸ್ತಕದ ವಿಚಾರವಾಗಿ ಚಕ್ರವರ್ತಿ ಸೂಲಿಬೆಲೆ ಜೈಲು ಕಂಬಿ ಎಣಿಸಬೇಕಾಗುತ್ತದೆ ಎಂದು ಸಚಿವ ಎಂಬಿ ಪಾಟೀಲ್ ಹೇಳಿದ್ದ ಮಾತಿಗೆ ತಿರುಗೇಟು ನೀಡಿರುವ ಚಕ್ರವರ್ತಿ ಸೂಲಿಬೆಲೆ ಸಚಿವರ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.

ನಿನ್ನೆ ಸಂಜೆ ವಿಜಯಪುರ ಜಿಲ್ಲೆಯ ಬಬಲೇಶ್ವರದಲ್ಲಿ ನಡೆದ ಗೋ ಸಮಾವೇಶದಲ್ಲಿ ಮಾತನಾಡಿರುವ ಚಕ್ರವರ್ತಿ ಸೂಲಿಬೆಲೆ, ನೀವು ಆಯ್ಕೆ ಮಾಡಿರುವ ಶಾಸಕರೊಬ್ಬರು ಚಕ್ರವರ್ತಿ ಸೂಲಿಬೆಲೆನಾ ಜೈಲಿಗೆ ಹಾಕುತ್ತೇನೆ ಎಂದು ಹೇಳುತ್ತಾರೆ. ಅಯ್ಯೋ ಪುಣಾತ್ಮ ನಾವು ಶಿವಾಜಿಯ ವಂಶಸ್ಥರು, ನಾನು ರಾಣಾ ಪ್ರತಾಪರ ವಂಶಸ್ಥ, ನಾನು ಸಾವರ್ಕರ್ ವಂಶಸ್ಥ. ನಾನು ಭಗತಸಿಂಗ್ ಹೆಸರು ಹೇಳಿಕೊಂಡು ಬಂದವನು. ನನ್ನನ್ನ ಒಳಗೆ ಹಾಕುತ್ತೀರಾ ಎಂದು ಪ್ರಶ್ನೆ ಮಾಡಿದರು.

ಕರ್ನಾಟಕದಲ್ಲಿ ಕಾಂಗ್ರೆಸ್ ಸರ್ಕಾರ ರಚನೆಯಾದ ನಂತರ ಪಶುಸಂಗೋಪನಾ ಸಚಿವರು ಹಸು ಕಡಿಯುವ ಬಗ್ಗೆ ವಿವಾದಾತ್ಮಕ ಹೇಳಿಕೆ ನೀಡಿದ್ದರು. ಇದನ್ನು ಟೀಕಿಸಿದ ಚಕ್ರವರ್ತಿ ಸೂಲಿಬೆಲೆ ಅವರು ರಾಜ್ಯದಲ್ಲಿ ಹಿಟ್ಲರ್ ಆಡಳಿತವಿದೆ ಎಂದಿದ್ದರು. ಈ ಬಗ್ಗೆ ಪ್ರತಿಕ್ರಿಯಿಸಿದ್ದ ಎಂಬಿ ಪಾಟೀಲರು, ಈ ಹಿಂದೆ ಹಿಜಾಬ್, ಹಲಾಲ್ ವಿಚಾರದಲ್ಲಿ ಗಲಾಟೆ ಮಾಡಿದಂತೆ ಈಗ ಏನಾದರೂ ಗಲಾಟೆ ಮಾಡಿದರೆ ಜೈಲಿಗೆ ಹಾಕುತ್ತೇವೆ ಅಂತ ಎಚ್ಚರಿಕೆ ನೀಡಿದ್ದರು.

ಎಂಬಿ ಪಾಟೀಲ್ ಹೇಳಿಕೆಗೆ ಪ್ರತಿಕ್ರಿಯೆ ನೀಡಿದ್ದ ಚಕ್ರವರ್ತಿ ಸೂಲಿಬೆಲೆ, ಜೈಲಿಗೆ ಹಾಕಿಸುವಂತಹ ತಪ್ಪು ನನ್ನಿಂದ ಏನಾಗಿದೆ ಅಂತ ಪ್ರಶ್ನಿಸಿದ್ದರು. ಅಸಲು ಸಂಗತಿಯೇನೆಂದರೆ ಅಧಿಕಾರದಲ್ಲಿರುವವರಿಗೆ ಅವರಿಗೆ ಸಹ್ಯವಾಗದ ಸತ್ಯಗಳನ್ನು ಮಾತಾಡಿದರೆ, ಆಡಳಿತದಲ್ಲಿನ ಅಪಸವ್ಯಗಳನ್ನು ಎತ್ತಿತೋರಿದರೆ ಪಥ್ಯವಾಗದು, ಅಧಿಕಾರ ತಮ್ಮ ಕೈಯಲ್ಲಿದೆ ಅನ್ನೋ ಕಾರಣಕ್ಕೆ ನಾಲಗೆಯನ್ನು ಬೇಕಾಬಿಟ್ಟಿ ಹರಿಬಿಡುತ್ತಾರೆ ಎಂದು ಸೂಲಿಬೆಲೆ ಟೀಕಿಸಿದ್ದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

US ವಲಸೆ ನೀತಿ ಮತ್ತಷ್ಟು ಕಠಿಣ: ಅರ್ಜಿದಾರರಿಗೆ ಟ್ರಂಪ್‌ ಸರ್ಕಾರ ಶಾಕ್‌: ವಿಶ್ವದಾದ್ಯಂತ VISA ಸಂದರ್ಶನಗಳಿಗೆ ಬ್ರೇಕ್‌!

TMCಗೆ ಸೆಡ್ಡು ಹೊಡೆದ ಬಂಡಾಯ ಸಂಸದರಿಗೆ ಶಾಕ್‌: 20 ಮಂದಿಗೆ ಲೋಕಸಭಾ ಸಚಿವಾಲಯ ನೋಟಿಸ್‌, 7 ದಿನಗಳೊಳಗೆ ಉತ್ತರಿಸುವಂತೆ ಸೂಚನೆ..!

ಬಡವರ ಬದುಕಿಗೆ ಬೆಲೆ ಏರಿಕೆ ಬರೆ: ‘ಅಚ್ಛೇ ದಿನ್ ಆಯ್ತು ದುಬಾರಿ ದಿನ್: ಅಗತ್ಯ ವಸ್ತುಗಳ ಬೆಲೆ ಏರಿಕೆ ಬೆನ್ನಲ್ಲೇ ಮೋದಿ ಸರ್ಕಾರದ ವಿರುದ್ಧ ಕಾಂಗ್ರೆಸ್ ವಾಗ್ದಾಳಿ..!

ಬಿಜೆಪಿ ಸಂಸದೀಯ ಮಂಡಳಿಯಲ್ಲಿ ಮಹತ್ತರ ಬದಲಾವಣೆ ಸಾಧ್ಯತೆ; ನಾಲ್ವರು ಮುಖ್ಯಮಂತ್ರಿಗಳಿಗೆ ಸ್ಥಾನ?

ಇರಾನ್‌ ತೈಲ ವಹಿವಾಟಿಗೆ ಅಮೆರಿಕಾ ಬ್ರೇಕ್: ಭಾರತದ 4 ಕಂಪನಿಗಳು ಕಪ್ಪುಪಟ್ಟಿಗೆ, 3 ಪ್ರಜೆಗಳ ಮೇಲೂ ನಿರ್ಬಂಧ..!