ಎ. ಮಂಜು 
ರಾಜ್ಯ

ಮಡಿಕೇರಿ ಕೆಡಿಪಿ ಸಭೆಯಲ್ಲಿ ವಿಶೇಷ ಆಹ್ವಾನಿತರಾಗಿ ಭಾಗವಹಿಸಿದ ಅರಕಲಗೂಡು ಶಾಸಕ ಎ.ಮಂಜು

ಮಡಿಕೇರಿಯ ಜಿಲ್ಲಾ ಪಂಚಾಯಿತಿ ಕಚೇರಿಯಲ್ಲಿ ಮಂಗಳವಾರ ನಡೆದ ಕೆಡಿಪಿ ಸಭೆಯಲ್ಲಿ ಅರಕಲಗೂಡು ಶಾಸಕ ಎ.ಮಂಜು ಅವರು ವಿಶೇಷ ಆಹ್ವಾನಿತರಾಗಿ ಆಗಮಿಸಿದ್ದರು.

ಮಡಿಕೇರಿ: ಮಡಿಕೇರಿಯ ಜಿಲ್ಲಾ ಪಂಚಾಯಿತಿ ಕಚೇರಿಯಲ್ಲಿ ಮಂಗಳವಾರ ನಡೆದ ಕೆಡಿಪಿ ಸಭೆಯಲ್ಲಿ ಅರಕಲಗೂಡು ಶಾಸಕ ಎ.ಮಂಜು ಅವರು ವಿಶೇಷ ಆಹ್ವಾನಿತರಾಗಿ ಆಗಮಿಸಿದ್ದರು.

ಮಡಿಕೇರಿ ಶಾಸಕ ಡಾ.ಮಂತರ್ ಗೌಡ ಅವರ ತಂದೆಯೂ ಆಗಿರುವ ಎ.ಮಂಜು ಅವರು ನಾಮನಿರ್ದೇಶಿತ ಸದಸ್ಯರಾಗಿ ಹಾಗೂ ಜಿಲ್ಲಾ ಪಂಚಾಯತ್ ವಿಶೇಷ ಆಹ್ವಾನಿತರಾಗಿ ಸಭೆಯಲ್ಲಿ ಭಾಗವಹಿಸಿದ್ದರು.

ಶಾಸಕ ಮಂಜು ಅವರು ರಾಜ್ಯ ಭೂ ಅಭಿವೃದ್ಧಿ ಬ್ಯಾಂಕ್(ಎಸ್‌ಎಲ್‌ಡಿಪಿ) ನಿರ್ದೇಶಕರಾಗಿರುವ ಕಾರಣ ಕೆಡಿಪಿ ಸಭೆಯಲ್ಲಿ ಭಾಗವಹಿಸಲು ಆಹ್ವಾನಿಸಲಾಗಿತ್ತು ಎಂದು ಜಿಪಂ ಮೂಲಗಳು ಖಚಿತಪಡಿಸಿವೆ. 

''ಜಿಲ್ಲೆಯ ನಾಮನಿರ್ದೇಶಿತ ಸದಸ್ಯರಾಗಿದ್ದು, ಕೆಡಿಪಿ ಸಭೆಯಲ್ಲಿ ಪಾಲ್ಗೊಳ್ಳುವಂತೆ ಮಂಜು ಅವರಿಗೆ ಆಹ್ವಾನ ನೀಡಲಾಗಿತ್ತು. ಜಿಲ್ಲಾ ಅಧಿಕಾರಿಗಳು ಮತ್ತು ಸಚಿವರೊಂದಿಗೆ ವೇದಿಕೆಯಲ್ಲಿ ಕುಳಿತುಕೊಳ್ಳುವ ಹಕ್ಕು ಕೂಡ ಅವರಿಗೆ ಇತ್ತು. ಆದಾಗ್ಯೂ, ಅವರು ಇತರ ಅಧಿಕಾರಿಗಳ ಜೊತೆ ಕುಳಿತುಕೊಳ್ಳಲು ನಿರ್ಧರಿಸಿದರು ಮತ್ತು ಸಭೆಯಲ್ಲಿ ಭಾಗವಹಿಸಿದರು ಎಂದು ಜಿಲ್ಲಾ ಪಂಚಾಯತ್ ಸಿಇಒ ಡಾ.ಆಕಾಶ್ ಅವರು ತಿಳಿಸಿದ್ದಾರೆ.

ಏತನ್ಮಧ್ಯೆ, ಸಭೆಯ ನಂತರ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಎ.ಮಂಜು, ತಮ್ಮ ಪುತ್ರ ಡಾ.ಮಂತರ್ ನೇತೃತ್ವದ ಸಭೆ ವೀಕ್ಷಿಸಲು ನನಗೆ ಅವಕಾಶ ಸಿಕ್ಕಿದ್ದಕ್ಕೆ ಸಂತೋಷವಾಗಿದೆ ಎಂದರು. 

ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ 10 ಕಿಲೋ ಅಕ್ಕಿ ನೀಡುವುದಾಗಿ ಭರವಸೆ ನೀಡಿದ್ದು, ಯಾವುದೇ ಬೆಲೆ ತೆತ್ತಾದರೂ ಅದನ್ನು ಈಡೇರಿಸುವುದು ಅವರ ಕರ್ತವ್ಯವಾಗಿದೆ. ಇದಕ್ಕೆ ಬಿಜೆಪಿಯನ್ನು ದೂರುವುದು ಸರಿಯಲ್ಲ ಎಂದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

'ಇಸ್ರೇಲ್‌ ಜೊತೆ ನಮ್ಮ ಸಂಬಂಧ 'ರಕ್ತ ಮತ್ತು ತ್ಯಾಗ'ದಲ್ಲಿ ಬರೆಯಲ್ಪಟ್ಟಿದೆ, ನಾನು ಹುಟ್ಟಿದ ವರ್ಷ ಭಾರತ ಇಸ್ರೇಲ್ ಗೆ ಮಾನ್ಯತೆ ನೀಡಿತು': ಪ್ರಧಾನಿ ಮೋದಿ-Video

ಹಗರಣ ರಹಿತ ಹುದ್ದೆ ಭರ್ತಿಗೆ ಕ್ರಮ: ಯುವಕರು ಧೈರ್ಯವಾಗಿರಿ, ನಿಮ್ಮ ಸಮಸ್ಯೆ ಬಗೆಹರಿಸುತ್ತೇವೆ, ಸದ್ಯದಲ್ಲೇ ಸಂದೇಶ ನೀಡುತ್ತೇವೆ; ಡಿ ಕೆ ಶಿವಕುಮಾರ್

ದಲಿತಾಸ್ತ್ರದ ಮೂಲಕ ಕಟ್ಟಿಹಾಕಲು ಸಿದ್ದು ಬಣ ಕಸರತ್ತು: ತೆರಮರೆಯಲ್ಲಿ ಡಿಕೆಶಿ ಬೆಂಬಲಿಗರ ಮಸಲತ್ತು; ಅಂತರ್ಯುದ್ಧದಲ್ಲಿ ಯಾರಿಗಿದೆ ಗೆಲ್ಲುವ ತಾಕತ್ತು?

Gold Rate Today: ಬೆಂಗಳೂರಿನಲ್ಲಿ ಇಂದಿನ ಚಿನ್ನ, ಬೆಳ್ಳಿ ದರ ಎಷ್ಟಿದೆ? ಇಲ್ಲಿದೆ ವಿವರ...

ಆರೋಗ್ಯ ಇಲಾಖೆಯಿಂದ ಉರ್ದು ಭಾಷೆ ಆಹ್ವಾನ ಪತ್ರಿಕೆ: ಜನರನ್ನು ದಾರಿ ತಪ್ಪಿಸಲೇಬೇಕು ಎಂಬ ಹಠಕ್ಕೆ ಬಿದ್ದಿದ್ದೀರಾ?

SCROLL FOR NEXT