ಬಿಬಿಎಂಪಿ ಮುಖ್ಯ ಆಯುಕ್ತ ತುಷಾರ್ ಗಿರಿನಾಥ್ 
ರಾಜ್ಯ

ಬಿಬಿಎಂಪಿ ವಾರ್ಡ್ ಗಳ ಪುನರ್ ವಿಂಗಡಣೆ ಕಸರತ್ತು: ಹೆಚ್ಚಿನ ವಾರ್ಡ್‌ಗಳ ಸೃಷ್ಟಿ ಇಲ್ಲ- ಬಿಬಿಎಂಪಿ ಮುಖ್ಯಸ್ಥ

ಇನ್ನೂ ಚಾಲನೆ ಸಿಗದ ಬಿಬಿಎಂಪಿ ವಾರ್ಡ್ ಗಳ ಪುನರ್ ವಿಂಗಡಣೆ ಕಸರತ್ತಿನಲ್ಲಿ ವಾರ್ಡ್‌ಗಳ ಸಂಖ್ಯೆಯನ್ನು ಹೆಚ್ಚಿಸುವುದಿಲ್ಲ ಎಂದು ಬಿಬಿಎಂಪಿ ಮುಖ್ಯ ಆಯುಕ್ತ ತುಷಾರ್ ಗಿರಿನಾಥ್ ಸೋಮವಾರ ಹೇಳಿದ್ದಾರೆ. ಅದು 243 ವಾರ್ಡ್ ಗಳಿಗೆ ಮಾತ್ರ ಸಿಮೀತವಾಗಲಿದೆ. 

ಬೆಂಗಳೂರು: ಇನ್ನೂ ಚಾಲನೆ ಸಿಗದ ಬಿಬಿಎಂಪಿ ವಾರ್ಡ್ ಗಳ ಪುನರ್ ವಿಂಗಡಣೆ ಕಸರತ್ತಿನಲ್ಲಿ ವಾರ್ಡ್‌ಗಳ ಸಂಖ್ಯೆಯನ್ನು ಹೆಚ್ಚಿಸುವುದಿಲ್ಲ ಎಂದು ಬಿಬಿಎಂಪಿ ಮುಖ್ಯ ಆಯುಕ್ತ ತುಷಾರ್ ಗಿರಿನಾಥ್ ಸೋಮವಾರ ಹೇಳಿದ್ದಾರೆ. ಅದು 243 ವಾರ್ಡ್ ಗಳಿಗೆ ಮಾತ್ರ ಸಿಮೀತವಾಗಲಿದೆ. 

ಸೋಮವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ವಾರ್ಡ್‌ಗಳ ವಿಂಗಡಣೆಯಲ್ಲಿ ವಾರ್ಡ್‌ಗಳ ಗಡಿ ಮಾತ್ರ ಪರಿಷ್ಕರಿಸಲಾಗುವುದು. ಇದು ಚುನಾವಣಾ ಆಯೋಗದ ಪ್ರಕಾರ ಮತದಾರರ ಮಾಹಿತಿಯನ್ನೂ ಒಳಗೊಂಡಿರುತ್ತದೆ. ಸರ್ಕಾರ ಮತ್ತು ಚುನಾವಣಾ ಆಯೋಗದ ನಿರ್ದೇಶನದಂತೆ ಬಿಬಿಎಂಪಿ ಕೆಲಸ ಮಾಡಲಿದೆ ಎಂದರು. ವಾರ್ಡ್‌ಗಳ ಹೆಸರು ಬದಲಾವಣೆ  ಸರ್ಕಾರದ ನಿರ್ಧಾರವಾಗಿದ್ದು, ಬಿಬಿಎಂಪಿಗೂ ಇದಕ್ಕೂ ಸಂಬಂಧವಿಲ್ಲ ಎಂದು ಹೇಳಿದರು. ಅದು ಬಂದಾಗ ನಿರ್ಧರಿಸಲಾಗುವುದು ಎಂದರು.

ಡಿಲಿಮಿಟೇಶನ್ ಪ್ರಕ್ರಿಯೆಯಲ್ಲಿ ಅಕ್ರಮಗಳ ಕುರಿತು ಪ್ರತಿಕ್ರಿಯಿಸಿದ ತುಷಾರ್ ಗಿರಿನಾಥ್, ಇದು ಕೇವಲ ವದಂತಿಗಳು, ಅವುಗಳಲ್ಲಿ ಯಾವುದೇ ಸತ್ಯವಿಲ್ಲ, ವಾರ್ಡ್ ಗಳ ಪುನರ್ ವಿಂಗಡಣೆ ಕಾರ್ಯದಲ್ಲಿ ನ್ಯಾಯಾಲಯದ ನಿರ್ದೇಶನಗಳನ್ನು ಅನುಸರಿಸಲಾಗುವುದು. 2021 ರಲ್ಲಿ ಅಥವಾ ಅದರ ನಂತರ ಯಾವುದೇ ಜನಗಣತಿ ನಡೆಯದ ಕಾರಣ 2011 ರ ಜನಗಣತಿಯ ಪ್ರಕಾರ ಮೀಸಲಾತಿ ಹಂಚಿಕೆ ಮಾಡಲಾಗುತ್ತದೆ ಎಂದರು. 

ಮಳೆಗಾಲದ ಮುನ್ನ ಅತಿಕ್ರಮಣ ತೆರವು ಕಾರ್ಯಾಚರಣೆ ಕುರಿತು ಮಾತನಾಡಿದ ಗಿರಿನಾಥ್, ಬಿಬಿಎಂಪಿಯು ಕಂದಾಯ ಇಲಾಖೆಯೊಂದಿಗೆ ಕೆಲಸ ಮಾಡುತ್ತಿದ್ದು, ನೀರು ಸರಾಗವಾಗಿ ಹರಿಯಲು ಕಾಲುವೆಗಳನ್ನು ಮಾಡುತ್ತಿದೆ. ಆದರೆ ಇನ್ನೂ ಚರಂಡಿ ಮತ್ತು ಕೆರೆಗಳಿಗೆ ನೀರು ಹರಿದು ಹೋಗಲು ಅಡ್ಡಿಯಾದರೆ ವಿಪತ್ತು ನಿರ್ವಹಣಾ ಕಾಯ್ದೆಯನ್ನು ಜಾರಿಗೊಳಿಸಿ ನಿಗದಿತ ನಿಯಮಗಳನ್ನು ಅನುಸರಿಸಲಾಗುವುದು ಎಂದು ತಿಳಿಸಿದರು. 

118 ಕಡೆಗಳಲ್ಲಿ ಒತ್ತುವರಿ ಪರಿಶೀಲನೆ ಹಾಗೂ ತಾತ್ಕಾಲಿಕ ಬೈಪಾಸ್‌ ನಿರ್ಮಾಣ ಕಾಮಗಾರಿ ನಡೆಯಬೇಕಿದೆ. ಇದುವರೆಗೆ ಯಲಹಂಕ, ದಾಸರಹಳ್ಳಿ ಮತ್ತು ಪೂರ್ವ ಬೆಂಗಳೂರು ಪ್ರದೇಶಗಳಲ್ಲಿ ಸುಮಾರು 50 ಸ್ಥಳಗಳಲ್ಲಿ ಮಾಡಲಾಗಿದೆ. ಇನ್ನು 23 ಕಡೆ,  ದಾಸರಹಳ್ಳಿಯಲ್ಲಿ ಗರಿಷ್ಠ ಸಂಖ್ಯೆಯಲ್ಲಿ ಬಿಬಿಎಂಪಿ ಯೋಜನೆ ಪ್ರಕಾರ ಕೆಲಸ ಮಾಡುತ್ತಿದೆ. ಯಾವುದೇ ಪ್ರವಾಹ ಮತ್ತು ಜನರಿಗೆ ಅನಾನುಕೂಲವಾಗದಂತೆ ನೋಡಿಕೊಳ್ಳಲು ಕಾನೂನುಬದ್ಧ ಪ್ರಕರಣಗಳನ್ನು ಪರಿಹರಿಸಲಾಗುತ್ತಿದೆ ಎಂದು ಅವರು ಹೇಳಿದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

Delhi Red Fort blast: ಉಗ್ರ ಉಮರ್‌ಗೆ ಆಶ್ರಯ ನೀಡಿದ್ದ ಆರೋಪಿ ಬಂಧನ, NIA ವಿಚಾರಣೆ

ಸಾಂವಿಧಾನಿಕ ಕರ್ತವ್ಯಗಳು ಪ್ರಜಾಪ್ರಭುತ್ವದ ಅಡಿಪಾಯ: ದೇಶದ ನಾಗರಿಕರಿಗೆ ಪ್ರಧಾನಿ ಮೋದಿ ಪತ್ರ

ಅರುಣಾಚಲ ಪ್ರದೇಶ ಭಾರತದ "ಅವಿಭಾಜ್ಯ-ಅಳಿಸಲಾಗದ" ಭಾಗ: ಚೀನಾಗೆ ಭಾರತ ತಿರುಗೇಟು

ನಮ್ಮ ಮೆಟ್ರೋ ಪ್ರಯಾಣಿಕರಿಗೆ ಗುಡ್​ ನ್ಯೂಸ್​: ಹಳದಿ ಮಾರ್ಗದ ಸಂಚಾರ ಸೋಮವಾರ ಬೆಳಗ್ಗೆ 5 ಗಂಟೆಯಿಂದಲೇ ಶುರು..!

ಅಯೋಧ್ಯೆ ಧರ್ಮಧ್ವಜದಲ್ಲಿರುವ ಕೋವಿದಾರ ಮರ: ರಾಜವೃಕ್ಷಕ್ಕೂ, ಶ್ರೀರಾಮಚಂದ್ರನಿಗೂ ಅದೆಂಥ ನಂಟು? ತ್ರೇತಾಯುಗದಲ್ಲಿದ್ದ ದೈವಿಕ ಮರದ ವಿಶೇಷತೆ ಏನು?

SCROLL FOR NEXT