ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ. 
ರಾಜ್ಯ

ಶಕ್ತಿ ಯೋಜನೆಗೆ 'ಸ್ಮಾರ್ಟ್ ಕಾರ್ಡ್‌' ಕಡ್ಡಾಯ; ಕಾರ್ಡ್ ವಿತರಣೆಗೆ ಹೊಸ ಪೋರ್ಟಲ್ ಶೀಘ್ರದಲ್ಲೆ: ರಾಮಲಿಂಗಾ ರೆಡ್ಡಿ

ಮಹಿಳೆಯರ ಉಚಿತ ಬಸ್ ಪ್ರಯಾಣದ ಶಕ್ತಿ ಯೋಜನೆಗೆ 'ಸ್ಮಾರ್ಟ್ ಕಾರ್ಡ್‌' ಕಡ್ಡಾಯವಾಗಲಿದ್ದು, ಶೀಘ್ರ ಕಾರ್ಡ್ ವಿತರಣೆಗೆ ಹೊಸ ಪೋರ್ಟಲ್ ಕಾರ್ಯಾರಂಭ ಮಾಡಲಿದೆ ಎಂದು ರಾಜ್ಯ ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ (Ramalinga Reddy) ಮಂಗಳವಾರ ಹೇಳಿದ್ದಾರೆ.

ಬೆಂಗಳೂರು: ಮಹಿಳೆಯರ ಉಚಿತ ಬಸ್ ಪ್ರಯಾಣದ ಶಕ್ತಿ ಯೋಜನೆಗೆ 'ಸ್ಮಾರ್ಟ್ ಕಾರ್ಡ್‌' ಕಡ್ಡಾಯವಾಗಲಿದ್ದು, ಶೀಘ್ರ ಕಾರ್ಡ್ ವಿತರಣೆಗೆ ಹೊಸ ಪೋರ್ಟಲ್ ಕಾರ್ಯಾರಂಭ ಮಾಡಲಿದೆ ಎಂದು ರಾಜ್ಯ ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ (Ramalinga Reddy) ಮಂಗಳವಾರ ಹೇಳಿದ್ದಾರೆ.

ಕರ್ನಾಟಕ ಕಾಂಗ್ರೆಸ್ ಸರ್ಕಾರದ ಉಚಿತ ಗ್ಯಾರಂಟಿಗಳಲ್ಲಿ ಒಂದಾದ, ಸರ್ಕಾರಿ ಬಸ್​​ಗಳಲ್ಲಿ ಮಹಿಳೆಯರಿಗೆ ಉಚಿತ ಪ್ರಯಾಣ ಕಲ್ಪಿಸುವ ‘ಶಕ್ತಿ’ ಯೋಜನೆಗೆ ಅರ್ಜಿ ಸಲ್ಲಿಸುವುದಕ್ಕೆಂದೇ ಹೊಸದೊಂದು ಪೋರ್ಟಲ್ ಕಾರ್ಯಾರಂಭ ಮಾಡಲಿದೆ ಎಂದು ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ ಮಂಗಳವಾರ ಹೇಳಿದ್ದಾರೆ. ಬೆಂಗಳೂರಿನಲ್ಲಿ ಮಾತನಾಡಿದ ಅವರು,  ‘ಶಕ್ತಿ ಸ್ಮಾರ್ಟ್ ಕಾರ್ಡ್‌’ಗಳಿಗೆ (Shakti smart cards) ಅರ್ಜಿ ಸಲ್ಲಿಸುವ ಪೋರ್ಟಲ್ ಶೀಘ್ರದಲ್ಲೇ ಆರಂಭವಾಗಲಿದೆ.

ಕರ್ನಾಟಕದಲ್ಲಿ ಪ್ರೀಮಿಯಂ ಅಲ್ಲದ ಸರ್ಕಾರಿ ಬಸ್‌ಗಳಲ್ಲಿ ಮಹಿಳೆಯರಿಗೆ ಉಚಿತ ಪ್ರಯಾಣವನ್ನು ಒದಗಿಸುವ ಶಕ್ತಿ ಯೋಜನೆಯ ಲಾಭ ಪಡೆಯಲು ಸ್ಮಾರ್ಟ್ ಕಾರ್ಡ್‌ಗಳ ಅಗತ್ಯವಿದೆ. ಸೇವಾ ಸಿಂಧು ಪೋರ್ಟಲ್‌ನಲ್ಲಿ ಅರ್ಜಿ ಸಲ್ಲಿಸುವ ಮೂಲಕ ಸ್ಮಾರ್ಟ್ ಕಾರ್ಡ್‌ಗಳನ್ನು ಪಡೆಯಬಹುದು ಎಂದು ತಿಳಿಸಿದ್ದಾರೆ. 

ಶೀಘ್ರ ಹೊಸ ಪೋರ್ಟಲ್
ಹೊಸ ಪೋರ್ಟಲ್ ಶೀಘ್ರದಲ್ಲೇ ಆರಂಭವಾಗಲಿದೆ. ಯಾವುದೇ ಗುರುತಿನ ಚೀಟಿಯನ್ನು ಅಪ್‌ಲೋಡ್ ಮಾಡುವ ಮೂಲಕ ಮಹಿಳೆಯರು ಸ್ಮಾರ್ಟ್ ಕಾರ್ಡ್ ಪಡೆಯಬಹುದು. ಸದ್ಯಕ್ಕೆ, ಸರ್ಕಾರ ನೀಡಿದ ಯಾವುದೇ ಗುರುತಿನ ಚೀಟಿಯನ್ನು ತೋರಿಸಿ ಮಹಿಳೆಯರು ಮೂರು ತಿಂಗಳವರೆಗೆ ಉಚಿತವಾಗಿ ಪ್ರಯಾಣಿಸಬಹುದು. ಸರ್ಕಾರದ ಈ ಶಕ್ತಿ ಯೋಜನೆಯು ರಸ್ತೆ ಸಾರಿಗೆ ನಿಗಮಗಳಿಗೆ (ಆರ್‌ಟಿಸಿ) ಹೆಚ್ಚಿನ ಅಧಿಕಾರ ನೀಡಿದೆ. ಯೋಜನೆಯಿಂದ ನಿಗಮಗಳ ಆದಾಯ ಹೆಚ್ಚಿದೆ ಎಂದರು.

ಬಿಜೆಪಿ ಬಲ ಕುಗ್ಗಿಸಿದ 'ಶಕ್ತಿ'
ಇದೇ ವೇಳೆ ಬಿಜೆಪಿ ವಿರುದ್ಧ ಟೀಕೆ ಮಾಡಿದ ಸಚಿವರು, ಶಕ್ತಿ ಯೋಜನೆಯಿಂದ ಸರ್ಕಾರ, ಪಾಲಿಕೆ ಹಾಗೂ ನಮ್ಮ ಪಕ್ಷಕ್ಕೆ ಹೆಚ್ಚಿನ ಬಲ ಬಂದಿದೆ. ಇದು ಭಾರತೀಯ ಜನತಾ ಪಕ್ಷವನ್ನು (ಬಿಜೆಪಿ) ಶಕ್ತಿಹೀನಗೊಳಿಸಿದೆ. ಯಾಕೆಂದರೆ ಅವರು (ಬಿಜೆಪಿಯವರು) ಮಹಿಳೆಯರನ್ನು ಬೆಂಬಲಿಸುವುದಿಲ್ಲ ಎಂದು ರಾಮಲಿಂಗಾ ರೆಡ್ಡಿ ಹೇಳಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಜೂನ್ 30ರೊಳಗೆ ಮುಗಿಸಿ: ರಾಜ್ಯ ಸರ್ಕಾರಕ್ಕೆ 'ಸುಪ್ರೀಂ' ಗಡುವು

'ಆ ದೇಶಕ್ಕೂ ನಾನೇ 'ಹಂಗಾಮಿ' ಸರ್ವೋಚ್ಛ ನಾಯಕ': Donald Trump ಘೋಷಣೆ, ಬೆಚ್ಚಿಬಿದ್ದ ವೆನೆಜುವೆಲಾ!

ಕ್ರಿಕೆಟ್ ಇತಿಹಾಸದಲ್ಲೇ ಮೊದಲು: ಅಂತಾರಾಷ್ಟ್ರೀಯ ಕ್ರಿಕೆಟ್ ಲೀಗ್ ನಲ್ಲಿ ಜೊತೆಯಾಗಿ ಕಣಕ್ಕಿಳಿದ ಅಪ್ಪ-ಮಗ.. ಯಾರಿವರು?

PSLV-C62 ಮಿಷನ್ ವಿಫಲ: ಕೊನೆಯ ಹಂತದಲ್ಲಿ ಎದುರಾದ ಸಮಸ್ಯೆ, ISROಗೆ ಹಿನ್ನಡೆ

ಇತಿಹಾಸ ಕಲಿಯಬೇಕಿದ್ದರೆ ಕಾಲೇಜಿಗೆ ಹೋಗುತ್ತಾರೆ, ನಿಮ್ಮ ಬೋಧನೆಯ ಅಗತ್ಯವಿಲ್ಲ: ಪ್ರಧಾನಿ ಮೋದಿ ವಿರುದ್ಧ ಪ್ರಿಯಾಂಕ್ ಖರ್ಗೆ ವಾಗ್ದಾಳಿ

SCROLL FOR NEXT