ಏಕರೂಪ ನಾಗರಿಕ ಸಂಹಿತೆ (ಸಾಂದರ್ಭಿಕ ಚಿತ್ರ) 
ರಾಜ್ಯ

ಏಕರೂಪ ನಾಗರಿಕ ಸಂಹಿತೆ ಬಗ್ಗೆ ಅಭಿಪ್ರಾಯ ಸಂಗ್ರಹಿಸಲು ರಾಜ್ಯ ಅಲ್ಪಸಂಖ್ಯಾತ ಆಯೋಗದಿಂದ ಸಭೆ

ಏಕರೂಪ ನಾಗರಿಕ ಸಂಹಿತೆ (ಯುಸಿಸಿ) ಕುರಿತು ಕಾನೂನು ಆಯೋಗ ಸಾರ್ವಜನಿಕರು ಹಾಗೂ ಧಾರ್ಮಿಕ ಸಂಸ್ಥೆಗಳಿಂದ ಅಭಿಪ್ರಾಯ ಸಂಗ್ರಹಿಸುವುದಕ್ಕೆ ಮುಂದಾಗಿರುವ ಬೆನ್ನಲ್ಲೇ ರಾಜ್ಯ ಅಲ್ಪಸಂಖ್ಯಾತ ಆಯೋಗ (ಕೆಎಸ್ಎಂಸಿ) ಮುಸ್ಲಿಂ ಹಾಗೂ ಕ್ರೈಸ್ತ ಸಮುದಾಯಗಳ ನಾಯಕರ ಸಭೆ ನಡೆಸಿದೆ. 

ಬೆಂಗಳೂರು: ಏಕರೂಪ ನಾಗರಿಕ ಸಂಹಿತೆ ( ಯುಸಿಸಿ) ಕುರಿತು ಕಾನೂನು ಆಯೋಗ ಸಾರ್ವಜನಿಕರು ಹಾಗೂ ಧಾರ್ಮಿಕ ಸಂಸ್ಥೆಗಳಿಂದ ಅಭಿಪ್ರಾಯ ಸಂಗ್ರಹಿಸುವುದಕ್ಕೆ ಮುಂದಾಗಿರುವ ಬೆನ್ನಲ್ಲೇ ರಾಜ್ಯ ಅಲ್ಪಸಂಖ್ಯಾತ ಆಯೋಗ (ಕೆಎಸ್ಎಂಸಿ) ಮುಸ್ಲಿಂ ಹಾಗೂ ಕ್ರೈಸ್ತ ಸಮುದಾಯಗಳ ನಾಯಕರ ಸಭೆ ನಡೆಸಿದೆ. 

ಸೋಮವಾರ ಜೂ.27 ರಂದು ಈ ಸಭೆ ನಡೆದಿದ್ದು ಸಮುದಾಯಗಳ ಅಭಿಪ್ರಾಯವನ್ನು ಸಂಗ್ರಹಿಸಲಾಗಿದೆ. ಕೆಎಸ್ಎಂಸಿ ಅಧ್ಯಕ್ಷ ಅಬ್ದುಲ್ ಅಜೀಮ್ ಈ ಬಗ್ಗೆ ದಿ ನ್ಯೂ ಇಂಡಿಯನ್ ಎಕ್ಸ್ ಪ್ರೆಸ್ ಗೆ ಮಾಹಿತಿ ನೀಡಿದ್ದು, ಮುಸ್ಲಿಂ ಸಮುದಾಯದ 25-30 ನಾಯಕರು ಹಾಗೂ ಕ್ರೈಸ್ತ ಸಮುದಾಯದ 25 ಮಂದಿ ನಾಯಕರು ಸಭೆಯಲ್ಲಿ ಭಾಗವಹಿಸಿದ್ದರು. ಜೈನ, ಬುದ್ಧ, ಸಿಖ್, ಪಾರ್ಸಿ ಸಮುದಾಯಗಳ ನಾಯಕರೊಂದಿಗೆ ಮಂಗಳವಾರ ಸಭೆ ನಡೆಯಲಿದೆ. 

ಸಭೆಯಲ್ಲಿ ಯುಸಿಸಿಯ ಅನುಕೂಲ ಹಾಗೂ ಅನಾನುಕೂಲಗಳ ಬಗ್ಗೆ ಚರ್ಚೆ ನಡೆಸಲಾಗಿದ್ದು,  ನಿಗದಿತ ಪ್ರೋಫಾರ್ಮಾದಲ್ಲಿ ಅವರ ಪ್ರತಿಕ್ರಿಯೆಗಳನ್ನು ಜು.14 ರ ವೇಳೆಗೆ ಸಲ್ಲಿಸುವಂತೆ ಕೆಎಸ್ಎಂಸಿ ಅಧ್ಯಕ್ಷರು ಸೂಚನೆ ನೀಡಿದ್ದಾರೆ. ಈ ಬಳಿಕ ಕೆಎಸ್ಎಂ ಸಿ ಅಧ್ಯಕ್ಷರೂ ಸಹ ರಾಜ್ಯ ಅಲ್ಪಸಂಖ್ಯಾತ ಆಯೋಗ ಸಹ ಸಭೆಯಲ್ಲಿ ಭಾಗಿಯಾಗಿದ್ದ ನಾಯಕರ ಅಭಿಪ್ರಾಯವನ್ನು ಕಾನೂನು ಆಯೋಗಕ್ಕೆ ಕಳಿಸಿಕೊಡಲಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

ಫೈಟರ್ ಜೆಟ್‌ ಇಂಜಿನ್ ಖರೀದಿ: ಅಮೆರಿಕಾದ GE ಸಂಸ್ಥೆಯೊಂದಿಗೆ $1 ಬಿಲಿಯನ್ ಮೊತ್ತದ ಒಪ್ಪಂದಕ್ಕೆ ಭಾರತ ಸಿದ್ಧತೆ!

ಸುಂಕ ಸಮರ: Trump 4 ಬಾರಿ ಕರೆ ಮಾಡಿದರೂ ಉತ್ತರಿಸದ PM Modi; ಅಮೆರಿಕ ನಿಯೋಗಕ್ಕೂ No Entry!

'ನನ್ನ ಕುರ್ಚಿ'ಗೆ ಪ್ರಧಾನಿ ಮೋದಿ ಗೌರವ ನೀಡಬೇಕು: ಪಶ್ಚಿಮ ಬಂಗಾಳ ಸಿಎಂ ಮಮತಾ ಬ್ಯಾನರ್ಜಿ ಕಿಡಿ!

ಸುಪ್ರೀಂ ಕೋರ್ಟ್‌ಗೆ ನ್ಯಾ. ಪಾಂಚೋಲಿ ಹೆಸರು ಶಿಫಾರಸು: ನ್ಯಾ. ಬಿ. ವಿ. ನಾಗರತ್ನ ತೀವ್ರ ಅಸಮಾಧಾನ!

SCROLL FOR NEXT