ಸಿಎಂ ಸಿದ್ದರಾಮಯ್ಯ 
ರಾಜ್ಯ

ಬಸವರಾಜ ಬೊಮ್ಮಾಯಿ ಆಯವ್ಯಕ್ಕಿಂತ ನನ್ನ ಬಜೆಟ್ 35 ಸಾವಿರ ಕೋಟಿ ರೂ. ಹೆಚ್ಚು: ಸಿಎಂ ಸಿದ್ದರಾಮಯ್ಯ

ಮಾಜಿ ಸಿಎಂ ಬಸವರಾಜ ಬೊಮ್ಮಾಯಿ ಅವರು ಮಾರ್ಚ್‌ನಲ್ಲಿ ಮಂಡಿಸಿದ ಬಜೆಟ್‌ಗಿಂತ ಜುಲೈನಲ್ಲಿ ಮಂಡಿಸುವ ಬಜೆಟ್‌ನಲ್ಲಿ 35,000 ಕೋಟಿ ರೂಪಾಯಿ ಹೆಚ್ಚಳವಾಗಲಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಸೋಮವಾರ ಹೇಳಿದ್ದಾರೆ.

ಬೆಂಗಳೂರು: ಮಾಜಿ ಸಿಎಂ ಬಸವರಾಜ ಬೊಮ್ಮಾಯಿ ಅವರು ಮಾರ್ಚ್‌ನಲ್ಲಿ ಮಂಡಿಸಿದ ಬಜೆಟ್‌ಗಿಂತ ಜುಲೈನಲ್ಲಿ ಮಂಡಿಸುವ ಬಜೆಟ್‌ನಲ್ಲಿ 35,000 ಕೋಟಿ ರೂಪಾಯಿ ಹೆಚ್ಚಳವಾಗಲಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಸೋಮವಾರ ಹೇಳಿದ್ದಾರೆ.

ವಿಧಾನಸಭೆ ಚುನಾವಣೆ ಪ್ರಣಾಳಿಕೆಯಲ್ಲಿ ಘೋಷಿಸಿದ್ದ ಐದು ಗ್ಯಾರಂಟಿ ಯೋಜನೆಗಳನ್ನು ಜಾರಿಗೆ ತರಲು ಸಂಪನ್ಮೂಲಗಳನ್ನು ಸಂಗ್ರಹಿಸಲು ಹೆಣಗಾಡುತ್ತಿರುವ ಕಾಂಗ್ರೆಸ್ ಸರ್ಕಾರವು ಮೆಗಾ-ಬಜೆಟ್  ಮಂಡಿಸುವ ನಿರೀಕ್ಷೆಯಿದೆ.

ಇಲ್ಲಿ ಮೊದಲ ಬಾರಿಗೆ ಶಾಸಕರಿಗಾಗಿ ಆಯೋಜಿಸಿದ್ದ ಕಾರ್ಯಾಗಾರದಲ್ಲಿ ಮಾತನಾಡಿದ ಸಿದ್ದರಾಮಯ್ಯ, ಐದು ಭರವಸೆಗಳನ್ನು ಜಾರಿಗೆ ತರಲು ಕಾಂಗ್ರೆಸ್ ಸರ್ಕಾರ ಬದ್ಧವಾಗಿದೆ. ಈ ಯೋಜನೆಗಳನ್ನು ಜಾರಿಗೆ ತರಲು ನಮಗೆ ಕನಿಷ್ಠ 60,000 ಕೋಟಿ ರೂಪಾಯಿ ಬೇಕಾಗಬಹುದು ಮತ್ತು ಜುಲೈ 7 ರಂದು ನಾನು ಮಂಡಿಸಲಿರುವ ನನ್ನ ಬಜೆಟ್‌ನಲ್ಲಿ 35,000 ಕೋಟಿ ರೂಪಾಯಿ ಹೆಚ್ಚಳವಾಗಬಹುದು. ನಾವು ಎಲ್ಲಾ ಐದು ಖಾತರಿಗಳನ್ನು ಕಾರ್ಯಗತಗೊಳಿಸುತ್ತೇವೆ ಎಂದು ಹೇಳಿದರು.

ಚುನಾವಣಾ ಪ್ರಣಾಳಿಕೆಯಲ್ಲಿ ಘೋಷಿಸಲಾದ ಐದು ಭರವಸೆಗಳಲ್ಲಿ, ಕಾಂಗ್ರೆಸ್ ಸರ್ಕಾರವು ರಾಜ್ಯ ನಡೆಸುವ ಬಸ್‌ಗಳಲ್ಲಿ ಮಹಿಳೆಯರಿಗೆ ಶಕ್ತಿಯ ಉಚಿತ ಬಸ್ ಪ್ರಯಾಣ ಯೋಜನೆಯನ್ನು ಜಾರಿಗೆ ತಂದಿದೆ. ಸಿದ್ದರಾಮಯ್ಯ ಅವರು ಹಣಕಾಸು ಸಚಿವರಾಗಿ ತಮ್ಮ ಮೊದಲ ಆಯವ್ಯಯವನ್ನು ಹೇಗೆ ಸಿದ್ಧಪಡಿಸಿದರು, ಮತ್ತು ಅದಕ್ಕಾಗಿ ಮಾಡಿದ ಸಿದ್ಧತೆಗಳ ಬಗ್ಗೆ ಮೆಲುಕು ಹಾಕಿದರು.

ಕೆಂಗಲ್ ಹನುಮಂತಯ್ಯ ಅವರು ಮೈಸೂರು ರಾಜ್ಯದ ಮುಖ್ಯಮಂತ್ರಿಯಾಗಿದ್ದಾಗ 1950 ರ ದಶಕದಲ್ಲಿ 21.3 ಕೋಟಿ ರೂಪಾಯಿಗಳ ಬಜೆಟ್ ಮಂಡಿಸಿದ್ದರು ಎಂದು ಸಿದ್ದರಾಮಯ್ಯ ತಿಳಿಸಿದರು. ಜುಲೈ ತಿಂಗಳಲ್ಲಿ ಸಿದ್ದರಾಮಯ್ಯ ನೂತನ ಬಜೆಟ್ ಮಂಡಿಸಲಿದ್ದಾರೆ. ಆಗಸ್ಟ್ 1 ರಿಂದ ನೂತನ ಬಜೆಟ್ ಜಾರಿಯಾಗಲಿದೆ ಎಂದು ಸಿದ್ದರಾಮಯ್ಯ ಹೇಳಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಜಮ್ಮು-ಕಾಶ್ಮೀರ: ಮಸೂದ್ ಅಜರ್ ಆಡಿಯೋ ಬೆನ್ನಲ್ಲೇ ಭಾರತದ ಗಡಿಗೆ ನುಗ್ಗಲು 'ಪಾಕ್ ಡ್ರೋನ್' ಗಳು ಯತ್ನ!

1st ODI: ಕೊಹ್ಲಿ ಅರ್ಧಶತಕ: ನ್ಯೂಜಿಲ್ಯಾಂಡ್ ವಿರುದ್ಧದ ಪಂದ್ಯದಲ್ಲಿ ಭಾರತಕ್ಕೆ ರೋಚಕ ಜಯ!

ಕಾಂಗ್ರೆಸ್ ಶಾಸಕಿ ನಯನಾ ಮೋಟಮ್ಮಗೆ ಅಶ್ಲೀಲ ಕಾಮೆಂಟ್! ಕಿಡಿಗೇಡಿಗಳಿಗೆ ಕೊಟ್ಟ ವಾರ್ನಿಂಗ್ ಏನು?

ಮಿಲಿಟರಿ ದಾಳಿಗೆ ಟ್ರಂಪ್, ನೆತನ್ಯಾಹು ಸಜ್ಜು: ತಿರುಗೇಟು ನೀಡಿದ ಇರಾನ್! ಹೇಳಿದ್ದೇನು ಗೊತ್ತಾ?

ಪಾಕಿಸ್ತಾನದಲ್ಲಿ 'ಗುಂಡಿಟ್ಟು' ಹಿಂದೂ ರೈತನ ಕಗ್ಗೊಲೆ! ಹೈದರಾಬಾದಿನಲ್ಲಿ ಆರೋಪಿಗಳ ಬಂಧನ

SCROLL FOR NEXT