ಸಿಎಂ ಸಿದ್ದರಾಮಯ್ಯ 
ರಾಜ್ಯ

ಸಿಎಂ ಸಿದ್ದರಾಮಯ್ಯಗೆ ಮೂರು ಸಂಪುಟ ಉಪಸಮಿತಿಗಳಿಗೆ ಸದಸ್ಯರ ನೇಮಕ ಅಧಿಕಾರ

ನೀರಾವರಿ ಯೋಜನೆಗಳು, ಕ್ರಿಮಿನಲ್ ಪ್ರಕರಣಗಳ ಹಿಂಪಡೆಯುವಿಕೆ ಮತ್ತು ರಾಜ್ಯದಲ್ಲಿ ಹೂಡಿಕೆಗೆ ಒತ್ತು ನೀಡುವ ಮೂರು ಕ್ಷೇತ್ರಗಳನ್ನು ನಿಭಾಯಿಸಲು ಮೂರು ಸಂಪುಟ ಉಪ ಸಮಿತಿಗಳನ್ನು ರಚಿಸುವ ಮತ್ತು ಅದಕ್ಕೆ ಸದಸ್ಯರನ್ನು ನೇಮಕ...

ಬೆಂಗಳೂರು: ನೀರಾವರಿ ಯೋಜನೆಗಳು, ಕ್ರಿಮಿನಲ್ ಪ್ರಕರಣಗಳ ಹಿಂಪಡೆಯುವಿಕೆ ಮತ್ತು ರಾಜ್ಯದಲ್ಲಿ ಹೂಡಿಕೆಗೆ ಒತ್ತು ನೀಡುವ ಮೂರು ಕ್ಷೇತ್ರಗಳನ್ನು ನಿಭಾಯಿಸಲು ಮೂರು ಸಂಪುಟ ಉಪ ಸಮಿತಿಗಳನ್ನು ರಚಿಸುವ ಮತ್ತು ಅದಕ್ಕೆ ಸದಸ್ಯರನ್ನು ನೇಮಕ ಮಾಡುವ ಅಧಿಕಾರವನ್ನು ಬುಧವಾರ ನಡೆದ ಸಚಿವ ಸಂಪುಟ ಸಭೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ವಹಿಸಿದೆ.

ಸಚಿವ ಸಂಪುಟ ಸಭೆ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಸಚಿವ ಎಚ್‌ಕೆ ಪಾಟೀಲ್ ಅವರು, ಕೃಷ್ಣಾ ನದಿ, ಕಾವೇರಿ, ಮಹದಾಯಿ ಮತ್ತಿತರ ನದಿಗಳ ವಿವಿಧ ಯೋಜನೆಗಳ ಅನುಷ್ಠಾನಕ್ಕಾಗಿ ಉಪ ಸಮಿತಿಯೊಂದನ್ನು ರಚಿಸಲಾಗಿದೆ ಎಂದು ಹೇಳಿದರು.

ಈ ಉಪ ಸಮಿತಿಯು ನದಿ ಯೋಜನೆಗಳಿಗೆ ಸಂಬಂಧಿಸಿದ ವಿವಿಧ ನ್ಯಾಯಾಲಯ ಮತ್ತು ನ್ಯಾಯಾಧಿಕರಣದ ಆದೇಶಗಳ ಅನುಷ್ಠಾನದ ಬಗ್ಗೆಯೂ ಪರಿಶೀಲಿಸುತ್ತದೆ.

ಸಂಪುಟ ಉಪ ಸಮಿತಿಗಳಿಗೆ ಸದಸ್ಯರನ್ನು ನೇಮಕ ಮಾಡುವ ಅಧಿಕಾರವನ್ನು ಮುಖ್ಯಮಂತ್ರಿಗಳಿಗೆ  ನೀಡಲಾಗಿದೆ ಎಂದು ಸಚಿವರು ತಿಳಿಸಿದರು.

ಎಸ್‌ಸಿ/ಎಸ್‌ಟಿ ಗುತ್ತಿಗೆದಾರರ ಟೆಂಡರ್‌ ಮೊತ್ತವನ್ನು 50 ಲಕ್ಷದಿಂದ ಒಂದು ಕೋಟಿಗೆ ಹೆಚ್ಚಿಸಲು ಸಚಿವ ಸಂಪುಟ ಸಭೆ ನಿರ್ಧರಿಸಿದೆ.

ಈ ನಿಟ್ಟಿನಲ್ಲಿ ಜುಲೈ 3ರಿಂದ ಆರಂಭವಾಗಲಿರುವ ಮುಂಬರುವ ವಿಧಾನಮಂಡಲ ಅಧಿವೇಶನದಲ್ಲಿ ಸಾರ್ವಜನಿಕ ಖರೀದಿಗೆ ಸಂಬಂಧಿಸಿದ ಕರ್ನಾಟಕ ಪಾರದರ್ಶಕ ಕಾಯಿದೆಗೆ ತಿದ್ದುಪಡಿ ತರಲಾಗುವುದು ಎಂದು ಎಚ್ ಕೆ ಪಾಟೀಲ್ ತಿಳಿಸಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ರೇಣುಕಾಸ್ವಾಮಿ ಮರ್ಮಾಂಗಕ್ಕೆ ಒದ್ದ ದರ್ಶನ್; ನಟನ ವಿರುದ್ಧ ಕೊಲೆ ಆರೋಪ ದಾಖಲಿಸಿದ ಕೋರ್ಟ್

ಜುಬೀನ್ ಗಾರ್ಗ್ ಸಾವು ಅಪಘಾತವಲ್ಲ ಕೊಲೆ: ಅಸ್ಸಾಂ ಸಿಎಂ ಬಿಸ್ವಾ ಶರ್ಮಾ ಆರೋಪಕ್ಕೆ ಸಾಕ್ಷಿ ಕೊಡಿ ಎಂದ ಗೊಗೊಯ್!

Uttar Pradesh: ಬಾಲಕಿಯ ಭೀಕರ ಹತ್ಯೆ, ಅತ್ಯಾಚಾರ; ಗಂಟಲು ಸೀಳಿ, ಕೈಕಾಲುಗಳು ಮುರಿದು, ಮೂಗಿನಲ್ಲಿ ಮರಳು, ಗೋಂದು ತುಂಬಿದ ರಾಕ್ಷಸರು!

ಪ್ರಧಾನಿ ಮೋದಿ ‘ಅಪಮಾನ ಸಚಿವಾಲಯ’ ಆರಂಭಿಸಲಿ: ಪ್ರಿಯಾಂಕಾ ಹೀಗೆ ಹೇಳಿದ್ಯಾಕೆ?

1995 ರಿಂದ ಕೋಟ್ಯಾಂತರ ರೂಪಾಯಿ ಹಣ ಪಡೆದು ಪಾಕಿಸ್ತಾನಕ್ಕೆ ಭಾರತದ ಪರಮಾಣು ಶಸ್ತ್ರಾಸ್ತ್ರಗಳ ಡೇಟಾ ರವಾನೆ; ನಕಲಿ ವಿಜ್ಞಾನಿ ಅಖ್ತರ್ ಹುಸೇನಿ ಬಂಧನ!

SCROLL FOR NEXT