ಸಾಂದರ್ಭಿಕ ಚಿತ್ರ 
ರಾಜ್ಯ

ಸ್ನೇಹಿತರ ಜೊತೆ ಸೇರಿ ಲೈಂಗಿಕ ಕಿರುಕುಳ ನೀಡಿದ ಪತಿ ವಿರುದ್ಧ ದೂರು ದಾಖಲಿಸಿದ ಟೆಕ್ಕಿ!

ಸ್ನೇಹಿತರ ಜೊತೆ ಸೇರಿ ಲೈಂಗಿಕ ಕಿರುಕುಳ ನೀಡಿದ ಪತಿ ವಿರುದ್ಧ ಟೆಕ್ಕಿಯೊಬ್ಬರು ದೂರು ದಾಖಲಿಸಿದ್ದಾರೆ ಎಂದು ಪೊಲೀಸರು ಗುರುವಾರ ತಿಳಿಸಿದ್ದಾರೆ.

ಬೆಂಗಳೂರು: ಸ್ನೇಹಿತರ ಜೊತೆ ಸೇರಿ ಲೈಂಗಿಕ ಕಿರುಕುಳ ನೀಡಿದ ಪತಿ ವಿರುದ್ಧ ಟೆಕ್ಕಿಯೊಬ್ಬರು ದೂರು ದಾಖಲಿಸಿದ್ದಾರೆ ಎಂದು ಪೊಲೀಸರು ಗುರುವಾರ ತಿಳಿಸಿದ್ದಾರೆ. ಮಾದಕ ವ್ಯಸನಿಯಾಗಿದ್ದ ಪತಿ ಸ್ನೇಹಿತರೊಂದಿಗೆ ಸೇರಿ ತನ್ನ ಖಾಸಗಿ ವಿಡಿಯೋ ಮಾಡಿ ಲೈಂಗಿಕ ಕಿರುಕುಳ ನೀಡಿದ್ದಾನೆ ಎಂದು ಪೊಲೀಸರಿಗೆ ತಿಳಿಸಿದ್ದು, ಬೆಂಗಳೂರಿನ ಎಚ್‌ಎಸ್‌ಆರ್ ಲೇಔಟ್ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ.

ಆಂಧ್ರಪ್ರದೇಶದ ಕಾಕಿನಾಡ ಮೂಲದ ಅಖಿಲೇಶ್ ಧರ್ಮರಾಜ್ ಆರೋಪಿ ಪತಿಯಾಗಿದ್ದಾನೆ. ಈ ದಂಪತಿಗಳು 2019 ರಲ್ಲಿ ಮ್ಯಾಟ್ರಿಮೋನಿಯಲ್ ಸೈಟ್ ಮೂಲಕ ಭೇಟಿಯಾಗಿದ್ದು, ಆರಂಭದಲ್ಲಿ ಆರೋಪಿ ಉತ್ತಮ ನಡತೆ ಹೊಂದಿದ್ದರೂ ನಂತರ ಆತ ಮಾದಕ ವ್ಯಸನಿ ಎಂಬುದು ಸಂತ್ರಸ್ತೆಗೆ ತಿಳಿದು ಬಂದಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಆರೋಪಿಗೆ ಮನೆಗೆ  ಗಾಂಜಾ ತಂದು ಆಕೆಯ ಮುಂದೆ ಧೂಮಪಾನ ಮಾಡಲು ಶುರು ಮಾಡಿದ್ದ. ಈ ಬಗ್ಗೆ ಪ್ರಶ್ನಿಸಿದಾಗ ಆಕೆಗೆ ಚಿತ್ರ ಹಿಂಸೆ ನೀಡಿ ಸ್ನೇಹಿತರನ್ನು ಮನೆಗೆ ಕರೆತಂದು ಮನೆಯಲ್ಲಿ ಗಾಂಜಾ ಪಾರ್ಟಿ ಶುರುವಿಟ್ಟುಕೊಂಡಿದ್ದ. ಆರೋಪಿಯ ಸ್ನೇಹಿತರು ಕೂಡ ತನಗೆ ಲೈಂಗಿಕ ಕಿರುಕುಳ ನೀಡಿದ್ದಾರೆ ಎಂದು ಸಂತ್ರಸ್ತೆ ಪೊಲೀಸರಿಗೆ ತಿಳಿಸಿದ್ದಾಳೆ. 

ಲೈಂಗಿಕ ಕಿರುಕುಳ ತಾಳಲಾರದೆ ತನ್ನ ಪೋಷಕರ ನಿವಾಸಕ್ಕೆ ಟೆಕ್ಕಿ ತೆರಳಿದಾಗ ಅಲ್ಲಿಗೂ ತನ್ನ ಸ್ನೇಹಿತರೊಂದಿಗೆ ಹೋಗಿದ್ದ ಆರೋಪಿ, ಮನೆಗೆ ಬರುವಂತೆ, ಏನಾದರೂ ಬಹಿರಂಗಪಡಿಸಿದರೆ ಹತ್ಯೆ ಮಾಡುವುದಾಗಿ ಬ್ಲಾಕ್ ಮೇಲ್ ಮಾಡಿದ್ದ. 
ಅಲ್ಲದೇ, ಮಲಗುವ ಕೋಣೆ ಮತ್ತು ಬಾತ್ ರೂಂನಲ್ಲಿ ಸಿಸಿಟಿವಿಗಳನ್ನು ಅಳವಡಿಸಿದ್ದನ್ನು ಪ್ರಶ್ನಿಸಿದಾಗ ಆಕೆಯ ಮೇಲೆ ಹಲ್ಲೆ ನಡೆಸಿದ್ದು, ಖಾಸಗಿ ವಿಡಿಯೋಗಳನ್ನು ಸಾರ್ವಜನಿಕಗೊಳಿಸುವುದಾಗಿ ಬೆದರಿಕೆ ಹಾಕಿರುವುದಾಗಿ ಆರೋಪಿಸಿದ್ದಾಳೆ.

ಈ ಸಂಬಂಧ ಸುಬ್ರಹ್ಮಣ್ಯಪುರ ಠಾಣೆಗೆ ದೂರು ನೀಡಿದ್ದರೂ ಪೊಲೀಸರು ಆರೋಪಿಗಳ ವಿರುದ್ಧ ಕ್ರಮ ಕೈಗೊಂಡಿಲ್ಲ ಎಂದು ಮಹಿಳೆ ಆರೋಪಿಸಿದ್ದಾರೆ. ಆದರೆ, ತನಿಖೆ ಕೈಗೆತ್ತಿಕೊಂಡಿದ್ದೇವೆ ಎಂದು ಪೊಲೀಸರು ತಿಳಿಸಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಅಮೆರಿಕ ನಿಯೋಜಿತ ರಾಯಭಾರಿ ಸೆರ್ಗಿಯೊ ಗೋರ್- ಮೋದಿ, ಜೈಶಂಕರ್ ಭೇಟಿ; Tariff ಒತ್ತಡದ ನಡುವೆ ಭಾರತ-ಅಮೆರಿಕ ಸಂಬಂಧ ಸುಧಾರಣೆಯ ಸೂಚನೆ?

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

ಅಬ್ಬಬ್ಬಾ ರೋಮಾಂಚನ: ಅದ್ಭುತ ಸೃಷ್ಟಿಸಿದ ರಿಷಬ್ ಶೆಟ್ಟಿಗೆ ರಾಷ್ಟ್ರಪ್ರಶಸ್ತಿ ಕೊಡಲೇಬೇಕು - ತಮಿಳು ನಿರ್ದೇಶಕ ಅಟ್ಲೀ

Pakistan: ಇಸ್ರೇಲ್ ವಿರೋಧಿ ಪ್ರತಿಭಟನಾ ಜಾಥಾ, ಪೋಲೀಸರ ಗುಂಡೇಟಿಗೆ 11 ಮಂದಿ ಬಲಿ! Video

ಉತ್ತರ ಪ್ರದೇಶಕ್ಕೆ ಭೇಟಿ ನೀಡಿದ ತಾಲಿಬಾನ್ ಸಚಿವನಿಗೆ ಅದ್ಧೂರಿ ಸ್ವಾಗತ, ಸರ್ಕಾರದ ಭದ್ರತೆ; ಯೋಗಿಗೆ ನಾಚಿಕೆಯಾಗಬೇಕು- SP ಸಂಸದ ಶಫೀಕರ್

SCROLL FOR NEXT