ಆತ್ಮಹತ್ಯೆಗೆ ಶರಣಾದ ಕುಟುಂಬ 
ರಾಜ್ಯ

ಕಾರವಾರ: ಸಾಲದಿಂದ ಮನನೊಂದು ಗೋವಾದ ಕುಟುಂಬ ಆತ್ಮಹತ್ಯೆಗೆ ಶರಣು

ಆಘಾತಕಾರಿ ಘಟನೆಯೊಂದರಲ್ಲಿ ಗೋವಾದ ಮೂವರ ಕುಟುಂಬವೊಂದು ಸಾಲದ ಕಾರಣದಿಂದ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಇಬ್ಬರು ಇಲ್ಲಿನ ಕಾಳಿ ನದಿ ದಂಡೆಯಲ್ಲಿ ಸಾವನ್ನಪ್ಪಿದ್ದರೆ, ಗೋವಾದಲ್ಲಿ ಒಬ್ಬರು ನೇಣು ಹಾಕಿಕೊಂಡಿದ್ದಾರೆ. 

ಕಾರವಾರ: ಆಘಾತಕಾರಿ ಘಟನೆಯೊಂದರಲ್ಲಿ ಗೋವಾದ ಮೂವರ ಕುಟುಂಬವೊಂದು ಸಾಲದ ಕಾರಣದಿಂದ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಇಬ್ಬರು ಇಲ್ಲಿನ ಕಾಳಿ ನದಿ ದಂಡೆಯಲ್ಲಿ ಸಾವನ್ನಪ್ಪಿದ್ದರೆ, ಗೋವಾದಲ್ಲಿ ಒಬ್ಬರು ನೇಣು ಹಾಕಿಕೊಂಡಿದ್ದಾರೆ. 

ಕಾರವಾರದಿಂದ 5 ಕಿಮೀ ದೂರದಲ್ಲಿರುವ ದೇವಬಾಗ್ ದ್ವೀಪದಲ್ಲಿ ಬುಧವಾರ 12 ವರ್ಷದ ಬಾಲಕನ ಶವವನ್ನು ಸ್ಥಳೀಯರು ಪತ್ತೆ ಮಾಡಿದ ನಂತರ ಇದು ಗೊತ್ತಾಗಿದೆ. ತದಂತರ ಪೊಲೀಸರು ಅದೇ ಸ್ಥಳದಿಂದ 37 ವರ್ಷದ ಮಹಿಳೆಯ ಮತ್ತೊಂದು ಶವವನ್ನು ಪತ್ತೆ ಹಚ್ಚಿದ್ದಾರೆ. ಸಾವಿಗೆ ಕಾರಣ ಪತ್ತೆಹಚ್ಚಲು ಪೊಲೀಸರು ಹುಡುಕಾಟ ನಡೆಸಿದಾಗ ಮೃತ ಮಹಿಳೆ ಬಾಲಕ  ದಕ್ಷ್ ಪಟೇಲ್ ತಾಯಿ ಎಂದು ಗುರುತಿಸಿದ್ದಾರೆ.

ಮೃತ ಮಹಿಳೆಯನ್ನು ಗೋವಾದ ಮಾಪುಸಾ ಸಮೀಪದ ಪಾಡಿ ನಿವಾಸಿ ಜ್ಯೋತಿ ಪಾಟೀಲ್ ಎಂದು ಗುರುತಿಸಲಾಗಿದೆ. ನಂತರ, ಗೋವಾದಲ್ಲಿ ಪೊಲೀಸರು ತನಿಖೆ ನಡೆಸಿದಾಗ ಅಲ್ಲಿನ ಪಾಡಿ ಅರಣ್ಯ ಪ್ರದೇಶದಲ್ಲಿ ಜ್ಯೋತಿ ಅವರ ಪತಿ ಶ್ಯಾಮ್ ಪಾಟೀಲ್ ಕೂಡ ಶವವಾಗಿ ಪತ್ತೆಯಾಗಿದ್ದಾರೆ. ಅವರು ಮರಕ್ಕೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಗೋವಾ ಪೊಲೀಸರು ಖಚಿತಪಡಿಸಿದ್ದಾರೆ. 

ಶ್ಯಾಮ್ ಆತ್ಮಹತ್ಯೆ ಮಾಡಿಕೊಳ್ಳುವ ಮೊದಲು ತನ್ನ ಹೆಂಡತಿ ಮತ್ತು ಮಗನನ್ನು ನೀರಿಗೆ ಎಸೆದಿರಬಹುದು ಎಂದು ಶಂಕಿಸಲಾಗಿದೆ. ಶ್ಯಾಮ್ ಹಲವಾರು ಜನರಿಂದ ಮತ್ತು ವಿವಿಧ ಹಣಕಾಸು ಸಂಸ್ಥೆಗಳಿಂದ ಸಾಲ ಮಾಡಿದ್ದರಿಂದ ತೀವ್ರ ಸಾಲದ ಸುಳಿಯಲ್ಲಿ ಸಿಲುಕಿದ್ದ ಎಂದು ಪೊಲೀಸರು ಶಂಕಿಸಿದ್ದಾರೆ. ಡೆತ್ ನೋಟ್‌ನಲ್ಲಿ, ತನ್ನಿಂದ ಸಾಲ ಪಡೆದ ಕೆಲವರು ತನ್ನನ್ನು ಮತ್ತು ತನ್ನ ಕುಟುಂಬವನ್ನು ಸಾವಿಗೆ ತಳ್ಳಿದ್ದಾರೆ ಎಂದು ಆರೋಪಿಸಿದ್ದಾರೆ.

ಕಾರವಾರದಿಂದ 20 ಕಿ.ಮೀ ದೂರದಲ್ಲಿರುವ ಗೋಪಿಶೆಟ್ಟರ ಮೂಲದ ಶ್ಯಾಮ್ ಅವರು 25 ವರ್ಷಗಳ ಹಿಂದೆ ತಮ್ಮ ವ್ಯಾಪಾರಕ್ಕಾಗಿ ಗೋವಾಕ್ಕೆ ಸ್ಥಳಾಂತರಗೊಂಡಿದ್ದರು, ಅಲ್ಲಿ ಅವರು ಮೂಲತಃ ಕಾರವಾರದಿಂದ ವಿವಿಧ ಕೈಗಾರಿಕೆಗಳಿಗೆ ಮಾನವ ಸಂಪನ್ಮೂಲವನ್ನು ಪೂರೈಸುತ್ತಿದ್ದರು. ಆದರೆ, ಕಾರಣಾಂತರಗಳಿಂದ ನಷ್ಟ ಅನುಭವಿಸಿದ ಅವರು ತಮ್ಮ ಸ್ನೇಹಿತರು ಮತ್ತು ಹಣಕಾಸು ಸಂಸ್ಥೆಗಳಿಂದ ದೊಡ್ಡ ಮೊತ್ತದ ಹಣವನ್ನು ಸಾಲ ಪಡೆದಿದ್ದರು ಎನ್ನಲಾಗಿದೆ. ಈ ಕುರಿತು ಚಿತ್ತಾಕುಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಮುಂದಿನ ತನಿಖೆ ನಡೆಯುತ್ತಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಭಾರತದ ಮೇಲೆ ಶೇ.50 ರಷ್ಟು ಸುಂಕಾಸ್ತ್ರ ಜಾರಿ: ಕೊನೆಗೆ ಒಟ್ಟಿಗೆ ಸೇರ್ತಿವಿ! US ಖಜಾನೆ ಮುಖ್ಯಸ್ಥ ಹಿಂಗ್ಯಾಕಂದ್ರು?

ಸಶಸ್ತ್ರ ಪಡೆಗಳು ಮುಂದಿನ ಭದ್ರತಾ ಸವಾಲುಗಳಿಗೆ ಸಿದ್ಧರಾಗಿರಬೇಕು: ರಾಜನಾಥ್ ಸಿಂಗ್

ಹಿಂದೂ ನಂಬಿಕೆ ಒಡೆಯುತ್ತಿರುವ ಬಾನು ಮುಷ್ತಾಕ್: ಶಿವನ ಬೆಟ್ಟವನ್ನೇ 'ಯೇಸು ಬೆಟ್ಟ' ಮಾಡಲು ಹೊರಟವರಿಂದ ಧರ್ಮದ ಪಾಠ ಬೇಡ- ಪ್ರತಾಪ್ ಸಿಂಹ

2030 Commonwealth Games: ಭಾರತದ ಬಿಡ್‌ಗೆ ಕೇಂದ್ರ ಸಂಪುಟ ಅನುಮೋದನೆ! ಅಹಮದಾಬಾದ್ ನಲ್ಲಿ ಆಯೋಜಿಸುವ ಪ್ರಸ್ತಾಪ!

'ಡೆವಿಲ್‌' ಸಿನಿಮಾದ '‘ಇದ್ರೆ ನೆಮ್ಮದಿಯಾಗ್ ಇರ್ಬೇಕ್' ಹಾಡಿಗೆ ಭರ್ಜರಿ ಸ್ಟೆಪ್ ಹಾಕಿದ ವಿನೋದ್ ರಾಜ್! Video

SCROLL FOR NEXT