ಸಾಂಕೇತಿಕ ಚಿತ್ರ 
ರಾಜ್ಯ

ಮಾನಸಿಕ ಅಸ್ವಸ್ಥ ಮಹಿಳೆಯ ಮೇಲೆ ಅತ್ಯಾಚಾರಕ್ಕೆ ಯತ್ನಿಸಿದ ಮೇಸ್ತ್ರಿಯನ್ನು ಬಂಧಿಸಿದ ಪೊಲೀಸರು

ಅನ್ನಪೂರ್ಣೇಶ್ವರಿ ನಗರ ಪೊಲೀಸ್ ಠಾಣಾ ವ್ಯಾಪ್ತಿಯ ಶ್ರೀಗಂಧಕಾವಲು ಡಿ ಗ್ರೂಪ್ ಲೇಔಟ್‌ನಲ್ಲಿ ಮಾನಸಿಕ ಅಸ್ವಸ್ಥ ಮಹಿಳೆಯ ಮೇಲೆ ಅತ್ಯಾಚಾರಕ್ಕೆ ಯತ್ನಿಸಿದ ಆರೋಪದ ಮೇಲೆ 28 ವರ್ಷದ ಮೇಸ್ತ್ರಿಯನ್ನು ಬಂಧಿಸಲಾಗಿದೆ.

ಬೆಂಗಳೂರು: ಅನ್ನಪೂರ್ಣೇಶ್ವರಿ ನಗರ ಪೊಲೀಸ್ ಠಾಣಾ ವ್ಯಾಪ್ತಿಯ ಶ್ರೀಗಂಧಕಾವಲು ಡಿ ಗ್ರೂಪ್ ಲೇಔಟ್‌ನಲ್ಲಿ ಮಾನಸಿಕ ಅಸ್ವಸ್ಥ ಮಹಿಳೆಯ ಮೇಲೆ ಅತ್ಯಾಚಾರಕ್ಕೆ ಯತ್ನಿಸಿದ ಆರೋಪದ ಮೇಲೆ 28 ವರ್ಷದ ಮೇಸ್ತ್ರಿಯನ್ನು ಬಂಧಿಸಲಾಗಿದೆ.

ಬೆಳಗ್ಗೆ 9 ಗಂಟೆಗೆ ಕೆಲಸಕ್ಕೆ ತೆರಳುವ ಮುನ್ನ ಸಂತ್ರಸ್ತೆಯನ್ನು ಆಕೆಯ ತಾಯಿ ಮನೆಯಲ್ಲಿ ಒಂಟಿಯಾಗಿ ಬಿಡುತ್ತಿದ್ದರು. ಈ ಘಟನೆ ಜೂನ್ 22 ರಂದು ಸಂಭವಿಸಿದೆ ಎಂದು ವರದಿಯಾಗಿದೆ. 

ಸಮೀಪದ ನಿರ್ಮಾಣ ಸ್ಥಳದಲ್ಲಿ ಕೆಲಸ ಮಾಡುವ ಆರೋಪಿ, ತಾಯಿ ಇಲ್ಲದಿದ್ದಾಗ 18 ವರ್ಷದ ಸಂತ್ರಸ್ತೆಯ ಮೇಲೆ ಅತ್ಯಾಚಾರಕ್ಕೆ ಯತ್ನಿಸಿದ್ದಾನೆ. ಬಳಿಕ ಮನೆಗೆ ಮರಳಿದ ಬಳಿಕ ಘಟನೆ ಬೆಳಕಿಗೆ ಬಂದಿದೆ. ಸುತ್ತಮುತ್ತಲಿನ ಸಿಸಿಟಿವಿ ದೃಶ್ಯಾವಳಿಗಳನ್ನು ಪರಿಶೀಲಿಸಿದ ಪೊಲೀಸರು ಆರೋಪಿಯನ್ನು ತಮಿಳುನಾಡು ಮೂಲದ ಇಬ್ರಾಹಿಂ ಎಂದು ಗುರುತಿಸಿದ್ದು, ಆತನನ್ನು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ.

ಸಂತ್ರಸ್ತೆಯ 38 ವರ್ಷದ ತಾಯಿ ಮನೆಯ ಸಹಾಯಕಿಯಾಗಿ ಕೆಲಸ ಮಾಡುತ್ತಿದ್ದಾರೆ. ಪ್ರತಿದಿನ ಗಂಟೆಗೊಮ್ಮೆ ತನ್ನ ಮಗಳನ್ನು ಪರಿಕ್ಷಿಸಲು ಮನೆಗೆ ಹಿಂತಿರುಗುತ್ತಿದ್ದರು ಎಂದು ದೂರಿನಲ್ಲಿ ತಿಳಿಸಿದ್ದಾರೆ.

ಜೂ. 22ರಂದು ಮಧ್ಯಾಹ್ನ 12.30ಕ್ಕೆ ಮನೆಗೆ ಮರಳಿದ ತಾಯಿ ಮಗಳು ನೆಲದ ಮೇಲೆ ಬಿದ್ದಿರುವುದನ್ನು ಕಂಡಿದ್ದಾರೆ. ಆಕೆಯ ಮುಖದ ಮೇಲೆ ಗಾಯಗಳಿದ್ದವು ಮತ್ತು ಆಕೆಗೆ ಏನಾಯಿತು ಎಂಬುದನ್ನು ವಿವರಿಸಲು ಆಕೆ ಅಸಮರ್ಥಳಾಗಿದ್ದಳು ಎಂದು ವರದಿಯಾಗಿದೆ. 

ನಂತರ ದೂರುದಾರರು ಪಕ್ಕದ ಕಟ್ಟಡದ ಸಿಸಿಟಿವಿ ದೃಶ್ಯಾವಳಿಗಳನ್ನು ಪರಿಶೀಲಿಸಿದ್ದು, ಆರೋಪಿಯು ಕಾಂಪೌಂಡ್ ಗೋಡೆ ಹಾರಿರುವುದು ಮತ್ತು ಸಂತ್ರಸ್ತೆಯನ್ನು ಆಕೆಯ ಮನೆಯೊಳಗೆ ಕರೆದುಕೊಂಡು ಹೋಗುತ್ತಿರುವುದು ಕಂಡುಬಂದಿದೆ.

ಬೆಳಗ್ಗೆ 11.42ರಿಂದ ಸುಮಾರು 10 ನಿಮಿಷಗಳ ಕಾಲ ಆತ ಮನೆಯಲ್ಲಿದ್ದನು. ಹೊರಗೆ ಬಂದ ನಂತರ ಮತ್ತೆ ಕಾಂಪೌಂಡ್ ಗೋಡೆ ಹಾರಿ ಹೋಗಿದ್ದಾನೆ. ಈ ದೃಶ್ಯಾವಳಿಗಳು ಆರೋಪಿಗಳನ್ನು ಬಂಧಿಸಲು ನಮಗೆ ಸಹಾಯ ಮಾಡಿದೆ ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

ಅಬ್ಬಬ್ಬಾ ರೋಮಾಂಚನ: ಅದ್ಭುತ ಸೃಷ್ಟಿಸಿದ ರಿಷಬ್ ಶೆಟ್ಟಿಗೆ ರಾಷ್ಟ್ರಪ್ರಶಸ್ತಿ ಕೊಡಲೇಬೇಕು - ತಮಿಳು ನಿರ್ದೇಶಕ ಅಟ್ಲೀ

Pakistan: ಇಸ್ರೇಲ್ ವಿರೋಧಿ ಪ್ರತಿಭಟನಾ ಜಾಥಾ, ಪೋಲೀಸರ ಗುಂಡೇಟಿಗೆ 11 ಮಂದಿ ಬಲಿ! Video

ಉತ್ತರ ಪ್ರದೇಶಕ್ಕೆ ಭೇಟಿ ನೀಡಿದ ತಾಲಿಬಾನ್ ಸಚಿವನಿಗೆ ಅದ್ಧೂರಿ ಸ್ವಾಗತ, ಸರ್ಕಾರದ ಭದ್ರತೆ; ಯೋಗಿಗೆ ನಾಚಿಕೆಯಾಗಬೇಕು- SP ಸಂಸದ ಶಫೀಕರ್

Eiffel Tower ಇನ್ನು ನೆನಪು ಮಾತ್ರ?: ಪ್ರಸಿದ್ಧ ಸ್ಮಾರಕ ಕೆಡವುತ್ತಿರುವ ಬಗ್ಗೆ ಟ್ಯಾಪಿಯೋಕಾ ಟೈಮ್ಸ್ ಹೇಳಿದ್ದೇನು?

SCROLL FOR NEXT