ಸಾಂದರ್ಭಿಕ ಚಿತ್ರ 
ರಾಜ್ಯ

ಬೆಂಗಳೂರಿನ ವಿವಿಧ ರಸ್ತೆಗಳಲ್ಲಿ ವ್ಹೀಲಿಂಗ್ ಮಾಡಿದ್ದ ಆರು ಮಂದಿಯನ್ನು ಬಂಧಿಸಿದ ವಿಶೇಷ ಪೊಲೀಸ್ ತಂಡ

ಬೆಂಗಳೂರು ನಗರದ ಸಂಚಾರ ಪೊಲೀಸರ ಪಶ್ಚಿಮ ವಿಭಾಗದ ವಿಶೇಷ ತಂಡವು ಪಶ್ಚಿಮ ಬೆಂಗಳೂರಿನಲ್ಲಿ ಪ್ರತ್ಯೇಕ ಪ್ರಕರಣಗಳಲ್ಲಿ ವ್ಹೀಲಿಂಗ್ ಮಾಡಿದ್ದಕ್ಕಾಗಿ ಆರು ಮಂದಿಯನ್ನು ಬಂಧಿಸಿದೆ.

ಬೆಂಗಳೂರು: ನಗರದ ಸಂಚಾರ ಪೊಲೀಸರ ಪಶ್ಚಿಮ ವಿಭಾಗದ ವಿಶೇಷ ತಂಡವು ಪಶ್ಚಿಮ ಬೆಂಗಳೂರಿನಲ್ಲಿ ಪ್ರತ್ಯೇಕ ಪ್ರಕರಣಗಳಲ್ಲಿ ವ್ಹೀಲಿಂಗ್ ಮಾಡಿದ್ದಕ್ಕಾಗಿ ಆರು ಮಂದಿಯನ್ನು ಬಂಧಿಸಿದೆ.

ನಗರದ ಪಶ್ಚಿಮ ಭಾಗದಲ್ಲಿ ವ್ಹೀಲಿಂಗ್ ಪ್ರಕರಣಗಳ ತನಿಖೆಗಾಗಿ ವಿವಿಧ ಠಾಣೆಗಳ ಎಂಟು ಸದಸ್ಯರನ್ನೊಳಗೊಂಡ ತಂಡವನ್ನು ಜೂನ್ 20 ರಂದು ರಚಿಸಲಾಗಿದೆ.

ಮಾಗಡಿ ರಸ್ತೆ ಸಂಚಾರ ನಿರೀಕ್ಷಕರ ನೇತೃತ್ವದಲ್ಲಿ ತಂಡವು ಸ್ಥಳೀಯ ದೂರುಗಳು ಮತ್ತು ಸಾಮಾಜಿಕ ಮಾಧ್ಯಮಗಳ ಮೂಲಕ ಬಂದ ಎಚ್ಚರಿಕೆಗಳ ಆಧಾರದ ಮೇಲೆ ಕ್ರಮ ಕೈಗೊಳ್ಳುತ್ತದೆ. ಈ ಎಚ್ಚರಿಕೆಗಳು ಹೆದ್ದಾರಿಗಳು ಮತ್ತು ಇತರ ಜನನಿಬಿಡ ರಸ್ತೆಗಳಲ್ಲಿ ಸಂಭವಿಸುವ ಅಪಾಯಕಾರಿ ಬೈಕ್ ಸ್ಟಂಟ್‌ಗಳ ಬಗ್ಗೆ ಅವರಿಗೆ ತಿಳಿಸುತ್ತವೆ.

ಕಳೆದ ಒಂಬತ್ತು ದಿನಗಳಲ್ಲಿ ತಂಡವು ಪಶ್ಚಿಮ ವಿಭಾಗದಲ್ಲಿ ಆರು ವ್ಹೀಲಿಂಗ್ ಪ್ರಕರಣಗಳನ್ನು ದಾಖಲಿಸಿದೆ. ಹೆಚ್ಚಿನ ತನಿಖೆಗಾಗಿ ಮೂರು ಪ್ರಕರಣಗಳನ್ನು ಮಾಗಡಿ ರಸ್ತೆ ಸಂಚಾರ ಪೊಲೀಸರಿಗೆ, ಎರಡನ್ನು ವಿಜಯನಗರಕ್ಕೆ ಮತ್ತು ಒಂದು ಪ್ರಕರಣವನ್ನು ಕೆಂಗೇರಿಗೆ ಹಸ್ತಾಂತರಿಸಲಾಗಿದೆ.

ತಂಡದ ಅಧಿಕಾರಿಯೊಬ್ಬರು ಮಾತನಾಡಿ, 'ನಾವು ವಾಹನಗಳಲ್ಲಿ ಆದ ಯಾವುದೇ ಮಾರ್ಪಾಡುಗಳನ್ನು ಗುರುತಿಸಿದರೆ, ಸಂಪೂರ್ಣ ತಪಾಸಣೆ ನಡೆಸಿದ ನಂತರ ವಾಹನದ ನೋಂದಣಿಯನ್ನು ರದ್ದುಗೊಳಿಸಲು ಪ್ರಾದೇಶಿಕ ಸಾರಿಗೆ ಕಚೇರಿ (ಆರ್‌ಟಿಒ)ಗೆ ತಿಳಿಸುತ್ತೇವೆ. ಚಾಲನಾ ಪರವಾನಗಿಗಳನ್ನು ತಕ್ಷಣವೇ ಅಮಾನತುಗೊಳಿಸಲಾಗುತ್ತದೆ' ಎಂದರು.

ಪುನರಾವರ್ತಿತ ಅಪರಾಧಗಳಮೇಮಿ ಗುರುತಿಸಲು ಮತ್ತು ಅವರನ್ನು ಬಂಧಿಸಲು ತಂಡವು ಸಾಮಾಜಿಕ ಮಾಧ್ಯಮದಲ್ಲಿ ಹಂಚಿಕೊಳ್ಳಲಾದ ವಿಡಿಯೋಗಳು ಮತ್ತು ಮಾಹಿತಿಯನ್ನು ಸೂಕ್ಷ್ಮವಾಗಿ ಗಮನಿಸುತ್ತಿದೆ.

ಅಪರಾಧಿಗಳ ವಿರುದ್ಧ ಭಾರತೀಯ ಮೋಟಾರು ವಾಹನಗಳ (ಐಎಂವಿ) ಕಾಯ್ದೆಯ ಐಪಿಸಿ ಸೆಕ್ಷನ್ 279 (ಸಾರ್ವಜನಿಕವಾಗಿ ದುಡುಕಿನ ಚಾಲನೆ ಅಥವಾ ಸವಾರಿ) ಮತ್ತು ಸೆಕ್ಷನ್ 189 (ರೇಸಿಂಗ್ ಮತ್ತು ವೇಗದ ಪ್ರಯೋಗಗಳಿಗೆ ಶಿಕ್ಷೆ) ಅಡಿಯಲ್ಲಿ ಪ್ರಕರಣಗಳನ್ನು ದಾಖಲಿಸಲಾಗುತ್ತದೆ. ಡ್ರೈವಿಂಗ್ ಲೈಸೆನ್ಸ್ ಇಲ್ಲದೆ ಅಥವಾ ಹೆಲ್ಮೆಟ್ ಧರಿಸದೇ ಇದ್ದರೆ, ಅಂತವರ ಮೇಲೆ ಹೆಚ್ಚುವರಿಯಾಗಿ ಐಎಂವಿಯ ಸೆಕ್ಷನ್ 3(1) r/w 181 ಅಥವಾ 129 ರ ಅಡಿಯಲ್ಲಿ ಪ್ರಕರಣ ದಾಖಲಿಸಲಾಗುತ್ತದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಯುಕ್ರೇನ್-ರಷ್ಯಾ ಶಾಂತಿ ಒಪ್ಪಂದ ಸನಿಹ: ಸುಳಿವು ನೀಡಿದ ಯುಕ್ರೇನ್

2026 T20 ವಿಶ್ವಕಪ್: ಕೊಲಂಬೋದಲ್ಲಿ ಫೆ.15 ರಂದು ಭಾರತ- ಪಾಕ್ ಪಂದ್ಯ

ಕಾರು ಅಪಘಾತದಲ್ಲಿ ಐಎಎಸ್ ಅಧಿಕಾರಿ ಮಹಾಂತೇಶ್ ಬೀಳಗಿ ಸೇರಿ ಮೂವರು ಸಾವು: ಸಿಎಂ, ಡಿಸಿಎಂ ಸಂತಾಪ

CM ಬದಲಾವಣೆ ನಾಲ್ಕರಿಂದ ಐದು ಜನರ ನಡುವೆ ನಡೆದ "ರಹಸ್ಯ ಒಪ್ಪಂದ": ಡಿಕೆಶಿ​ ಸ್ಫೋಟಕ ಹೇಳಿಕೆ

ರಾಸಾಯನಿಕಗಳು, ಎಲೆಕ್ಟ್ರಾನಿಕ್ ಘಟಕಗಳ ಸುಲಭ ಲಭ್ಯತೆಯಿಂದ ಐಇಡಿ ಅಪಾಯ ಹೆಚ್ಚು: NSG

SCROLL FOR NEXT