ಸಂಗ್ರಹ ಚಿತ್ರ 
ರಾಜ್ಯ

ಹಿಟ್ ಆ್ಯಂಡ್ ರನ್ ಪ್ರಕರಣ: ಗಾಯಗೊಂಡಿದ್ದ ಎಎಸ್ಐ ಚಿಕಿತ್ಸೆ ಫಲಿಸದೆ ಸಾವು

ಕರ್ತವ್ಯ ನಿರ್ವಹಣೆ ವೇಳೆ ಆಟೋರಿಕ್ಷಾ ಡಿಕ್ಕೆ ಹೊಡೆದು ಗಂಭೀರವಾಗಿ ಗಾಯಗೊಂಡಿದ್ದ ಹೈಗ್ರೌಂಡ್ಸ್ ಸಂಚಾರ ಪೊಲೀಸ್ ಠಾಣೆಯ ಸಹಾಯ ಸಬ್ ಇನ್ಸ್'ಪೆಕ್ಟರ್ (ಎಎಸ್ಐ) ಚಿಕಿತ್ಸೆ ಫಲಿಸದೆ ಮಂಗಳವಾರ ಮೃತಪಟ್ಟಿದ್ದಾರೆ.

ಬೆಂಗಳೂರು: ಕರ್ತವ್ಯ ನಿರ್ವಹಣೆ ವೇಳೆ ಆಟೋರಿಕ್ಷಾ ಡಿಕ್ಕೆ ಹೊಡೆದು ಗಂಭೀರವಾಗಿ ಗಾಯಗೊಂಡಿದ್ದ ಹೈಗ್ರೌಂಡ್ಸ್ ಸಂಚಾರ ಪೊಲೀಸ್ ಠಾಣೆಯ ಸಹಾಯ ಸಬ್ ಇನ್ಸ್'ಪೆಕ್ಟರ್ (ಎಎಸ್ಐ) ಚಿಕಿತ್ಸೆ ಫಲಿಸದೆ ಮಂಗಳವಾರ ಮೃತಪಟ್ಟಿದ್ದಾರೆ.

ಎಂ ನಾಗರಾಜು ಮೃತ ಎಎಸ್ಐ ಆಗಿದ್ದಾರೆ. ತುಮಕೂರು ಜಿಲ್ಲೆಯ ಕುಣಿಗಲ್ ತಾಲೂಕು ಮೂಲದವರಾಗಿದ್ದಾರೆ. ಭಾನುವಾರ ಮಧ್ಯಾಹ್ನ ಬಸವೇಶ್ವರ ವೃತ್ತದಲ್ಲಿ ಜರ್ಮನ್ ಚಾನ್ಸಲರ್ ಬೆಂಗಾವಲು ವಾಹನದ ಸಂಚಾರದ ವೇಳೆ ಟ್ರಾಫಿಕ್ ನಿರ್ವಹಿಸಲು ನಾಗರಾಜು ಅವರನ್ನು ನಿಯೋಜಿಸಲಾಗಿತ್ತು. ಕರ್ತವ್ಯ ನಿರ್ವಹಿಸುತ್ತಿದ್ದ ನಾಗರಾಜು ಅವರಿಗೆ  ವೇಗವಾಗಿ ಬಂದ ಆಟೋ ರಿಕ್ಷಾವೊಂದು ರಭಸದಿಂದ ಡಿಕ್ಕಿ ಹೊಡೆದಿದೆ.

ಈ ವೇಳೆ 7-8 ಅಡಿ ಎತ್ತರಕ್ಕೆ ನಾಗರಾಜು ಅವರು ಹಾರಿ ಕೆಳಗೆ ಬಿದ್ದಿದ್ದಾರೆ. ಪರಿಣಾಮ ನಾಗರಾಜು ಅವರ ತಲೆಗೆ ಗಂಭೀರವಾದ ಗಾಯಗಳಾಗಿದ್ದು, ಪ್ರಜ್ಞೆ ತಪ್ಪಿ ಬಿದ್ದಿದ್ದಾರೆ. ಕೂಡಲೇ ಅವರನ್ನು ಮಲ್ಲಿಗೆ ಆಸ್ಪತ್ರೆಗೆ ದಾಖಲಿಸಲಾಯಿತು. ನಂತರ ಹೆಚ್ಚಿನ ಚಿಕಿತ್ಸೆಗಾಗಿ ಮಣಿಪಾಲ ಆಸ್ಪತ್ರೆಗೆ ಸ್ಥಳಾಂತರಿಸಲಾಯಿತು. ಆದರೆ, ಚಿಕತ್ಸೆ ಫಲಕಾರಿಯಾಗದೆ ಮಂಗಳವಾರ ಮೃತಪಟ್ಟಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ,

ಘಟನೆ ಸಂಬಂಧ ಪೊಲೀಸರು ಇದೀಗ ಆಟೋ ಚಾಲಕನನ್ನು ಬಂಧನಕ್ಕೊಳಪಡಿಸಿದ್ದಾರೆಂದು ತಿಳಿದುಬಂದಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಯುಕ್ರೇನ್-ರಷ್ಯಾ ಶಾಂತಿ ಒಪ್ಪಂದ ಸನಿಹ: ಸುಳಿವು ನೀಡಿದ ಯುಕ್ರೇನ್

2026 T20 ವಿಶ್ವಕಪ್: ಕೊಲಂಬೋದಲ್ಲಿ ಫೆ.15 ರಂದು ಭಾರತ- ಪಾಕ್ ಪಂದ್ಯ

ಕಾರು ಅಪಘಾತದಲ್ಲಿ ಐಎಎಸ್ ಅಧಿಕಾರಿ ಮಹಾಂತೇಶ್ ಬೀಳಗಿ ಸೇರಿ ಮೂವರು ಸಾವು: ಸಿಎಂ, ಡಿಸಿಎಂ ಸಂತಾಪ

CM ಬದಲಾವಣೆ ನಾಲ್ಕರಿಂದ ಐದು ಜನರ ನಡುವೆ ನಡೆದ "ರಹಸ್ಯ ಒಪ್ಪಂದ": ಡಿಕೆಶಿ​ ಸ್ಫೋಟಕ ಹೇಳಿಕೆ

ರಾಸಾಯನಿಕಗಳು, ಎಲೆಕ್ಟ್ರಾನಿಕ್ ಘಟಕಗಳ ಸುಲಭ ಲಭ್ಯತೆಯಿಂದ ಐಇಡಿ ಅಪಾಯ ಹೆಚ್ಚು: NSG

SCROLL FOR NEXT