ಕುಮಾರಸ್ವಾಮಿ, ಅಶ್ವತ್ಥ ನಾರಾಯಣ 
ರಾಜ್ಯ

ರಾಮನಗರದಲ್ಲಿ ಜೆಡಿಎಸ್, ಬಿಜೆಪಿ ಕಾರ್ಯಕರ್ತರ ನಡುವೆ ಗಲಾಟೆ

ನೂತನ ಜಿಲ್ಲಾ ಆಸ್ಪತ್ರೆ ಉದ್ಘಾಟನೆ ವೇಳೆ ಜೆಡಿಎಸ್ ಮತ್ತು ಬಿಜೆಪಿ ಕಾರ್ಯಕರ್ತರ ನಡುವೆ ಗಲಾಟೆ ನಡೆದಿದೆ. ಪರಸ್ಪರ ನೂಕಾಟ, ತಳ್ಳಾಟ ನಡೆದಿದೆ. ಇದರಿಂದ ಸ್ಥಳದಲ್ಲಿ ಕೆಲಕಾಲ ಗೊಂದಲಕಾರ ವಾತಾವರಣ ನಿರ್ಮಾಣವಾಗಿತ್ತು.

ರಾಮನಗರ: ನೂತನ ಜಿಲ್ಲಾ ಆಸ್ಪತ್ರೆ ಉದ್ಘಾಟನೆ ವೇಳೆ ಜೆಡಿಎಸ್ ಮತ್ತು ಬಿಜೆಪಿ ಕಾರ್ಯಕರ್ತರ ನಡುವೆ ಗಲಾಟೆ ನಡೆದಿದೆ. ಪರಸ್ಪರ ನೂಕಾಟ, ತಳ್ಳಾಟ ನಡೆದಿದೆ. ಇದರಿಂದ ಸ್ಥಳದಲ್ಲಿ ಕೆಲಕಾಲ ಗೊಂದಲಕಾರ ವಾತಾವರಣ ನಿರ್ಮಾಣವಾಗಿತ್ತು.

ಕುಮಾರಸ್ವಾಮಿ ಆಗಮನಕ್ಕೂ ಮುನ್ನ ಆಸ್ಪತ್ರೆ ಉದ್ಘಾಟನೆ ಸರಿ ಅಲ್ಲ ಎಂದು ಜೆಡಿಎಸ್​ ಕಾರ್ಯಕರ್ತರು ವಿರೋಧ ವ್ಯಕ್ತಪಡಿಸಿದ್ದಾರೆ. ಈ ವೇಳೆ ಬಿಜೆಪಿ ಕಾರ್ಯಕರ್ತರು ಸಹ ಘೋಷಣೆಗಳನ್ನು ಕೂಗಿದ್ದಾರೆ. ಹೀಗೆ ಪರಸ್ಪರ ಘೋಷಣೆ ಕೂಗುತ್ತಿದ್ದ ಎರಡೂ ಪಕ್ಷದ ಕಾರ್ಯಕರ್ತರ ನಡುವೆ  ನೂಕಾಟ ತಳ್ಳಾಟ ನಡೆಯಿತು.

ಬಿಜೆಪಿ ಕಾರ್ಯಕರ್ತರು ಮೋದಿ ಪರ ಘೋಷಣೆ ಕೂಗಿದರೆ, ಜೆಡಿಎಸ್ ಕಾರ್ಯಕರ್ತರು ಕುಮಾರಸ್ವಾಮಿ ಪರ ಘೋಷಣೆ ಕೂಗಿದರು. ಈ ವೇಳೆ ಉಭಯ ಪಕ್ಷಗಳ ಕಾರ್ಯಕರ್ತರ ನಡುವೆ ಮಾತಿನ ಚಕಮಕಿ ನಡೆದು ಕೆಲಕಾಲ ಬಿಗುವಿನ ವಾತಾವರಣ ನಿರ್ಮಾಣವಾಗಿತ್ತು.

ನಂತರ ಆಗಮಿಸಿದ ಕುಮಾರಸ್ವಾಮಿ, ಜಿಲ್ಲಾ ಉಸ್ತುವಾರಿ ಸಚಿವರೇ ಆಸ್ಪತ್ರೆ ಉದ್ಘಾಟಿಸಲು ತಾವೇ ಹೇಳಿದ್ದು, ಆಸ್ಪತ್ರೆ ಉದ್ಘಾಟನೆ ವಿಚಾರದಲ್ಲಿ ಯಾವುದೇ ಗೊಂದಲ ಇಲ್ಲ ಎಂದು ಸ್ಪಷ್ಪಪಡಿಸಿದರು. ನಂತರ ಪರಿಸ್ಥಿತಿ ತಿಳಿಯಾಯಿತು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ನವದೆಹಲಿ: 'ಇಂಡಿಯಾ AI ಇಂಪ್ಯಾಕ್ಟ್ ಎಕ್ಸ್‌ಪೋ' ಗೆ ಪ್ರಧಾನಿ ಮೋದಿ ಚಾಲನೆ

T20 World Cup 2026: ಭಾರತ- ಪಾಕ್ ಹ್ಯಾಂಡ್ ಶೇಕ್ ವಿವಾದದ ನಡುವೆ ರೋಹಿತ್- ವಾಸೀಂ ಅಕ್ರಂ ಅಪ್ಪುಗೆ! Video

CM ಕುರ್ಚಿ ಕಾಳಗದ ನಡುವೆ ಸಿದ್ದರಾಮಯ್ಯ ಬಜೆಟ್​​ಗೆ ಮುಹೂರ್ತ ಫಿಕ್ಸ್

ಮಹಾಶಿವರಾತ್ರಿ: ಶಿವಸೇನಾ ಮುಸ್ಲಿಂ ಶಾಸಕರ ಭೇಟಿ ನಂತರ ಗೋಮೂತ್ರದಿಂದ ಶಿವ ದೇವಾಲಯ 'ಶುದ್ಧೀಕರಿಸಿದ' ಬಿಜೆಪಿ!

ಕೊಪ್ಪಳ: ಇಸ್ರೇಲಿ ಮಹಿಳೆ ಅತ್ಯಾಚಾರ, ಪ್ರವಾಸಿ ಕೊಲೆ ಪ್ರಕರಣ; 3 ಅಪರಾಧಿಗಳಿಗೆ ಗಲ್ಲು ಶಿಕ್ಷೆ; 9 ತಿಂಗಳಲ್ಲೇ ಐತಿಹಾಸಿಕ ತೀರ್ಪು!

SCROLL FOR NEXT