ಕುಮಾರಸ್ವಾಮಿ, ಅಶ್ವತ್ಥ ನಾರಾಯಣ 
ರಾಜ್ಯ

ರಾಮನಗರದಲ್ಲಿ ಜೆಡಿಎಸ್, ಬಿಜೆಪಿ ಕಾರ್ಯಕರ್ತರ ನಡುವೆ ಗಲಾಟೆ

ನೂತನ ಜಿಲ್ಲಾ ಆಸ್ಪತ್ರೆ ಉದ್ಘಾಟನೆ ವೇಳೆ ಜೆಡಿಎಸ್ ಮತ್ತು ಬಿಜೆಪಿ ಕಾರ್ಯಕರ್ತರ ನಡುವೆ ಗಲಾಟೆ ನಡೆದಿದೆ. ಪರಸ್ಪರ ನೂಕಾಟ, ತಳ್ಳಾಟ ನಡೆದಿದೆ. ಇದರಿಂದ ಸ್ಥಳದಲ್ಲಿ ಕೆಲಕಾಲ ಗೊಂದಲಕಾರ ವಾತಾವರಣ ನಿರ್ಮಾಣವಾಗಿತ್ತು.

ರಾಮನಗರ: ನೂತನ ಜಿಲ್ಲಾ ಆಸ್ಪತ್ರೆ ಉದ್ಘಾಟನೆ ವೇಳೆ ಜೆಡಿಎಸ್ ಮತ್ತು ಬಿಜೆಪಿ ಕಾರ್ಯಕರ್ತರ ನಡುವೆ ಗಲಾಟೆ ನಡೆದಿದೆ. ಪರಸ್ಪರ ನೂಕಾಟ, ತಳ್ಳಾಟ ನಡೆದಿದೆ. ಇದರಿಂದ ಸ್ಥಳದಲ್ಲಿ ಕೆಲಕಾಲ ಗೊಂದಲಕಾರ ವಾತಾವರಣ ನಿರ್ಮಾಣವಾಗಿತ್ತು.

ಕುಮಾರಸ್ವಾಮಿ ಆಗಮನಕ್ಕೂ ಮುನ್ನ ಆಸ್ಪತ್ರೆ ಉದ್ಘಾಟನೆ ಸರಿ ಅಲ್ಲ ಎಂದು ಜೆಡಿಎಸ್​ ಕಾರ್ಯಕರ್ತರು ವಿರೋಧ ವ್ಯಕ್ತಪಡಿಸಿದ್ದಾರೆ. ಈ ವೇಳೆ ಬಿಜೆಪಿ ಕಾರ್ಯಕರ್ತರು ಸಹ ಘೋಷಣೆಗಳನ್ನು ಕೂಗಿದ್ದಾರೆ. ಹೀಗೆ ಪರಸ್ಪರ ಘೋಷಣೆ ಕೂಗುತ್ತಿದ್ದ ಎರಡೂ ಪಕ್ಷದ ಕಾರ್ಯಕರ್ತರ ನಡುವೆ  ನೂಕಾಟ ತಳ್ಳಾಟ ನಡೆಯಿತು.

ಬಿಜೆಪಿ ಕಾರ್ಯಕರ್ತರು ಮೋದಿ ಪರ ಘೋಷಣೆ ಕೂಗಿದರೆ, ಜೆಡಿಎಸ್ ಕಾರ್ಯಕರ್ತರು ಕುಮಾರಸ್ವಾಮಿ ಪರ ಘೋಷಣೆ ಕೂಗಿದರು. ಈ ವೇಳೆ ಉಭಯ ಪಕ್ಷಗಳ ಕಾರ್ಯಕರ್ತರ ನಡುವೆ ಮಾತಿನ ಚಕಮಕಿ ನಡೆದು ಕೆಲಕಾಲ ಬಿಗುವಿನ ವಾತಾವರಣ ನಿರ್ಮಾಣವಾಗಿತ್ತು.

ನಂತರ ಆಗಮಿಸಿದ ಕುಮಾರಸ್ವಾಮಿ, ಜಿಲ್ಲಾ ಉಸ್ತುವಾರಿ ಸಚಿವರೇ ಆಸ್ಪತ್ರೆ ಉದ್ಘಾಟಿಸಲು ತಾವೇ ಹೇಳಿದ್ದು, ಆಸ್ಪತ್ರೆ ಉದ್ಘಾಟನೆ ವಿಚಾರದಲ್ಲಿ ಯಾವುದೇ ಗೊಂದಲ ಇಲ್ಲ ಎಂದು ಸ್ಪಷ್ಪಪಡಿಸಿದರು. ನಂತರ ಪರಿಸ್ಥಿತಿ ತಿಳಿಯಾಯಿತು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

Video- ಒಮಾನ್ ಗೆ ಬಂದಿಳಿದ ಪ್ರಧಾನಿ ಮೋದಿಗೆ ಭವ್ಯ ಸ್ವಾಗತ: ಇಂದು ಹಲವು ಒಪ್ಪಂದಗಳಿಗೆ ಸಹಿ ನಿರೀಕ್ಷೆ

Operation Sindoor ವೇಳೆ ಭಾರತ ಸೋತಿತ್ತು: ನನ್ನ ಹೇಳಿಕೆಯಲ್ಲಿ ತಪ್ಪಿಲ್ಲ, ಕ್ಷಮೆ ಕೇಳಲ್ಲ ಎಂದ ಪೃಥ್ವಿರಾಜ್ ಚವಾಣ್

'ಭದ್ರಾ ಮೇಲ್ದಂಡೆ ಯೋಜನೆ ಅನುದಾನ, ನರೇಗಾ, ಜಲ ಜೀವನ್ ಮಿಷನ್ ಬಾಕಿ ಅನುದಾನ ಬಿಡುಗಡೆ ಮಾಡದ ಕೇಂದ್ರ ಸರ್ಕಾರ ದಿವಾಳಿಯಾಗಿದೆಯೇ?'

ನಮಗೆ ಬಂದಿರುವುದು ಪಿತ್ರಾರ್ಜಿತ ಆಸ್ತಿ, ಇಲ್ಲದಿರುವುದು ಹುಡುಕಿ ಆರೋಪ ಮಾಡುವುದು ಅವರ ಸಂಸ್ಕೃತಿ: BJP ವಿರುದ್ಧ ಕೃಷ್ಣ ಬೈರೇಗೌಡ ಸಿಡಿಮಿಡಿ

ಬೆಳಗಾವಿ ಅಧಿವೇಶನ ಮಧ್ಯೆ ಇದ್ದಕ್ಕಿದ್ದಂತೆ ಆರೋಗ್ಯದಲ್ಲಿ ಏರುಪೇರು: ಈಗ ಸಿಎಂ ಸಿದ್ದರಾಮಯ್ಯ ಹೇಗಿದ್ದಾರೆ?

SCROLL FOR NEXT