ಸಂಗ್ರಹ ಚಿತ್ರ 
ರಾಜ್ಯ

ಪ್ರಜ್ಞೆ ತಪ್ಪಿ ಬಿದ್ದು ಪ್ರತಿಭಟನಾನಿರತ ವಿದ್ಯಾರ್ಥಿ ಸಾವು: ಸುಳ್ಳು ಎಂದ ಅಜೀಂ ಪ್ರೇಮ್​ ಜಿ ವಿವಿ ವಿರುದ್ಧ ವಿದ್ಯಾರ್ಥಿಗಳ ಆಕ್ರೋಶ

ಪ್ರತಿಭಟನೆ ವೇಳೆ ಪ್ರಜ್ಞೆ ತಪ್ಪಿ ಬಿದ್ದು ವಿದ್ಯಾರ್ಥಿ ಸಾವನ್ನಪ್ಪಿದ್ದನ್ನು ಸುಳ್ಳು ಎಂದ ಅಜಿಂ ಪ್ರೇಮ್​ ಜಿ ವಿಶ್ವವಿದ್ಯಾಲಯದ ವಿರುದ್ಧ ವಿದ್ಯಾರ್ಥಿಗಳು ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಬೆಂಗಳೂರು: ಪ್ರತಿಭಟನೆ ವೇಳೆ ಪ್ರಜ್ಞೆ ತಪ್ಪಿ ಬಿದ್ದು ವಿದ್ಯಾರ್ಥಿ ಸಾವನ್ನಪ್ಪಿದ್ದನ್ನು ಸುಳ್ಳು ಎಂದ ಅಜಿಂ ಪ್ರೇಮ್​ ಜಿ ವಿಶ್ವವಿದ್ಯಾಲಯದ ವಿರುದ್ಧ ವಿದ್ಯಾರ್ಥಿಗಳು ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಹಲವು ದಿನಗಳಿಂದ ಕ್ಯಾಂಪಸ್ ಒಳಗೆ ವಿಶ್ವವಿದ್ಯಾಲಯದ ವಿದ್ಯಾರ್ಥಿಗಳಿಂದ ಪ್ರತಿಭಟನೆ ಮಾಡುತ್ತಿದ್ದಾರೆ. ವಿದ್ಯಾರ್ಥಿಗಳ ಹೋರಾಟಕ್ಕೆ ವಿವಿ ಆಡಳಿತ ಮಂಡಳಿ ಸ್ಪಂದಿಸದ ಹಿನ್ನೆಲೆ ವಿದ್ಯಾರ್ಥಿಗಳು ಉಪವಾಸ ಸತ್ಯಾಗ್ರಹವನ್ನೂ ಆರಂಭಿಸಿದ್ದರು. ಈ ಪ್ರತಿಭಟನೆಯಲ್ಲಿ ಭಾಗವಹಿಸಿದ್ದ ಅಭಿಜಿತ್ ಎಂಬ ವಿದ್ಯಾರ್ಥಿ ಕುಸಿದು ಬಿದ್ದು ಮೃತಪಟ್ಟಿದ್ದ.

ಘಟನೆ ಸಂಬಂಧ ಪ್ರತಿಕ್ರಿಯೆ ನೀಡಿದ್ದ ಅಜಿಂ ಪ್ರೇಮ್​ ಜಿ ವಿವಿ, ಕ್ಯಾಂಪಸ್‌ನಲ್ಲಿ ವಿದ್ಯಾರ್ಥಿ ಮೃತಪಟ್ಟಿರುವುದು ದುರದೃಷ್ಟಕರ ಸಂಗತಿ. ಘಟನೆಯಿಂದ ನಾವು ಆಘಾತಕ್ಕೊಳಗಾಗಿದ್ದೇವೆ ಮತ್ತು ತೀವ್ರ ದುಖಃವಾಗಿದೆ. ಆದರೆ, ವಿದ್ಯಾರ್ಥಿ ಉಪವಾಸ ಪ್ರತಿಭಟನೆಯಲ್ಲಿ ಮೃತಪಟ್ಟಿಲ್ಲ. ವಿದ್ಯಾರ್ಥಿ ಉಪವಾಸ ಸತ್ಯಗ್ರಹ ವೇಳೆ ಮೃತಪಟ್ಟಿದ್ದಾನೆ ಎನ್ನುವುದು ಸುಳ್ಳು ಎಂದು ಹೇಳಿತ್ತು. ಈ ಹೇಳಿಕೆಗೆ ಇದೀಗ ವಿದ್ಯಾರ್ಥಿಗಳು ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಜಮ್ಮು-ಕಾಶ್ಮೀರ: ಮಸೂದ್ ಅಜರ್ ಆಡಿಯೋ ಬೆನ್ನಲ್ಲೇ ಭಾರತದ ಗಡಿಗೆ ನುಗ್ಗಲು 'ಪಾಕ್ ಡ್ರೋನ್' ಗಳು ಯತ್ನ!

ಇತಿಹಾಸ ಕಲಿಯಬೇಕಿದ್ದರೆ ಕಾಲೇಜಿಗೆ ಹೋಗುತ್ತಾರೆ, ನಿಮ್ಮ ಬೋಧನೆಯ ಅಗತ್ಯವಿಲ್ಲ: ಪ್ರಧಾನಿ ಮೋದಿ ವಿರುದ್ಧ ಪ್ರಿಯಾಂಕ್ ಖರ್ಗೆ ವಾಗ್ದಾಳಿ

MGNREGA Row: ಯಾವಾಗ-ಎಲ್ಲಿ ಬೇಕಾದರೂ ಚರ್ಚೆಗೆ ಸಿದ್ಧ, ಡೈಲಾಗ್‌ ವೀರ HDK ಬಂದರೆ ಒಳ್ಳೆಯದು; ಡಿ.ಕೆ.ಶಿವಕುಮಾರ್

ಪಕ್ಷದ ಮೇಲೆ ನನಗೆ ನಂಬಿಕೆ ಇದೆ: ದುಡ್ಡು- ಬ್ಲಡ್ ನಿರಂತರ ಚಲನೆಯಲ್ಲಿ ಇರಬೇಕು; ಅಕ್ಕಪಕ್ಕದಲ್ಲಿ ಇರುವವರೇ ಮೋಸ ಮಾಡುತ್ತಾರೆ, ಎಚ್ಚರ!

1st ODI: ಕೊಹ್ಲಿ ಅರ್ಧಶತಕ: ನ್ಯೂಜಿಲ್ಯಾಂಡ್ ವಿರುದ್ಧದ ಪಂದ್ಯದಲ್ಲಿ ಭಾರತಕ್ಕೆ ರೋಚಕ ಜಯ!

SCROLL FOR NEXT