ಸಿಎಂ ಬಸವರಾಜ ಬೊಮ್ಮಾಯಿ 
ರಾಜ್ಯ

ಸಂತ ಶಿಶುನಾಳ ಶರೀಫರ ತತ್ವಪದ ಭಾವಾರ್ಥ ಅರಿಯುವ ಥೀಮ್ ಪಾರ್ಕ್ ನಿರ್ಮಾಣ: ಮುಖ್ಯಮಂತ್ರಿ ಬೊಮ್ಮಾಯಿ

ಸುಕ್ಷೇತ್ರ ಶಿಶುನಾಳ ಗ್ರಾಮದಲ್ಲಿ ಸಂತ ಶಿಶುನಾಳ ಶರೀಫರ ತತ್ವ ಪದಗಳ ಭಾವಾರ್ಥ ಅರಿಯುವ ಥೀಮ್ ಪಾರ್ಕ್ ನಿರ್ಮಾಣ ಮಾಡಲಾಗುವುದು ಎಂದು‌ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ. 

ಹಾವೇರಿ: ಸುಕ್ಷೇತ್ರ ಶಿಶುನಾಳ ಗ್ರಾಮದಲ್ಲಿ ಸಂತ ಶಿಶುನಾಳ ಶರೀಫರ ತತ್ವ ಪದಗಳ ಭಾವಾರ್ಥ ಅರಿಯುವ ಥೀಮ್ ಪಾರ್ಕ್ ನಿರ್ಮಾಣ ಮಾಡಲಾಗುವುದು ಎಂದು‌ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ. 

ಶಿಗ್ಗಾವಿ ತಾಲೂಕಿನ ಶಿಶುವಿನಾಳ ಗ್ರಾಮದ ಸಂತ ಶರೀಫ ಶಿವಯೋಗಿ ಮತ್ತು ಗೋವಿಂದಭಟ್ಟರ ಜಾತ್ರಾ ಮಹೋತ್ಸವದ ಸಾಂಸ್ಕೃತಿಕ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಅವರು, ಶಿಶುವಿನಾಳದ ಸಮಗ್ರ ಅಭಿವೃದ್ಧಿಗೆ ಕಾರ್ಯಕ್ರಮ ರೂಪಿಸಲಾಗುತ್ತಿದ್ದು, ಈಗಗಾಗಲೇ ರೂ. 8 ಕೋಟಿ ವೆಚ್ಚದಲ್ಲಿ ಅಭಿವೃದ್ಧಿ ಕಾಮಗಾರಿ ಭರದಿಂದ ಸಾಗಿದೆ ಎಂದರು. 

ಶರೀಫರ ತತ್ವಪದಗಳ ಭಾವಾರ್ಥದ  ಮೂಜಿಯಂ ಮಾಡುತ್ತಿದ್ದೇವೆ. ಶರೀಫರು ನಡೆದಾಡಿ ಹೋಗಿರುವ ಘಟನೆಗಳನ್ನು ಚಿತ್ರೀಕರಿಸುತ್ತೇವೆ. ಶರೀಪರ ಜೀವನ ಮೌಲ್ಯಗಳನ್ನ  ಸಾಮಾನ್ಯರೂ ತಿಳಿಯುವಂತಾಗ ಬೇಕು, ಶರೀಫರ ವಿಚಾರ ಧರ್ಮದ ಚೌಕಟ್ಟು ಮೀರಿದಂತಹದು. ಇವರು ವಿಸ್ಮಯವಾಗಿರುವ ಕವಿ, ಅವರನ್ನು ಅರ್ಥಮಾಡಿಕೊಂಡವರಿಗೆ ಅವರ ವಿಚಾರಗಳು ಗೊತ್ತಾಗುವುದು. ಶರೀಫರು ಜೀವನದ ಮೌಲ್ಯ, ಮಾನವೀಯ ಸಂಬಂಧದ ಬಗ್ಗೆ ಹೇಳಿದ್ದಾರೆ ಎಂದರು. 

ಖ್ಯಾತ ಸಂಗೀತ ನಿರ್ದೇಶಕ, ಗಾಯಕ ರಘು ದೀಕ್ಷಿತ್ ಮಾತನಾಡಿ, ನಮ್ಮ ದೊಡ್ಡ ಹೊಟ್ಟೆಪಾಡು ಶರೀಫರ ಹಾಡುಗಳಿಂದ ನಡೆದಿದೆ. 'ಸೋರುತಿಹದು ಮನೆಯ ಮಾಳಿಗೆ' ಎಂಬ ಹಾಡನ್ನು 32 ದೇಶಗಳಲ್ಲಿ ಹಾಡಿದ್ದೇನೆ ಎಂದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

ಜಮ್ಮುವಿನಾದ್ಯಂತ ಭಾರಿ ಮಳೆ: ಅಪಾರ ಪ್ರಮಾಣದ ಹಾನಿ, 10 ಮಂದಿ ಸಾವು: ಕೊಚ್ಚಿ ಹೋದ ರಸ್ತೆ, ಸೇತುವೆಗಳು!

ಫೈಟರ್ ಜೆಟ್‌ ಇಂಜಿನ್ ಖರೀದಿ: ಅಮೆರಿಕಾದ GE ಸಂಸ್ಥೆಯೊಂದಿಗೆ $1 ಬಿಲಿಯನ್ ಮೊತ್ತದ ಒಪ್ಪಂದಕ್ಕೆ ಭಾರತ ಸಿದ್ಧತೆ!

ಡಿಕೆಶಿ ಕ್ಷಮೆ ಕೇಳಬಾರದಿತ್ತು; ಮುಲಾಜಿಲ್ಲದೆ ಕಾಂಗ್ರೆಸ್ ಪಕ್ಷದ ಸದಸ್ಯತ್ವಕ್ಕೆ ರಾಜೀನಾಮೆ ಬಿಸಾಕಬೇಕಿತ್ತು- ಆರ್. ಅಶೋಕ್

ಸುಂಕ ಸಮರ: Trump 4 ಬಾರಿ ಕರೆ ಮಾಡಿದರೂ ಉತ್ತರಿಸದ PM Modi; ಅಮೆರಿಕ ನಿಯೋಗಕ್ಕೂ No Entry!

SCROLL FOR NEXT