ಸಂಗ್ರಹ ಚಿತ್ರ 
ರಾಜ್ಯ

ಬೀದಿ ನಾಯಿಗಳ ನಿರ್ವಹಣೆ, ಪ್ರಾಣಿಗಳ ಹೊಸ ಚಿತಾಗಾರ ನಿರ್ಮಾಣಕ್ಕೆ ಬಿಬಿಎಂಪಿ ಬಜೆಟ್ ನಲ್ಲಿ ಹಣ ಮೀಸಲು: ಪ್ರಾಣಿಪ್ರಿಯರ ಸಂತಸ

ಬೀದಿ ನಾಯಿಗಳಿಗೆ ಫೈವ್ ಇನ್ ಒನ್ ಆ್ಯಂಟಿ ರೇಬಿಸ್ ಲಸಿಕೆ ನೀಡಲು ರೂ.20 ಕೋಟಿ ಮತ್ತು ಪ್ರಾಣಿಗಳಿಗೆ ಎರಡು ವಿದ್ಯುತ್ ಚಿತಾಗಾರಗಳನ್ನು ಸ್ಥಾಪಿಸಲು 5 ಕೋಟಿ ರೂಪಾಯಿ ಮೀಸಲಿಟ್ಟ ಬಿಬಿಎಂಪಿ ಬಜೆಟ್‌ನ್ನು ಪ್ರಾಣಿ ಪ್ರಿಯರು ಸ್ವಾಗತಿಸಿದ್ದಾರೆ.

ಬೆಂಗಳೂರು: ಬೀದಿ ನಾಯಿಗಳಿಗೆ ಫೈವ್ ಇನ್ ಒನ್ ಆ್ಯಂಟಿ ರೇಬಿಸ್ ಲಸಿಕೆ ನೀಡಲು ರೂ.20 ಕೋಟಿ ಮತ್ತು ಪ್ರಾಣಿಗಳಿಗೆ ಎರಡು ವಿದ್ಯುತ್ ಚಿತಾಗಾರಗಳನ್ನು ಸ್ಥಾಪಿಸಲು 5 ಕೋಟಿ ರೂಪಾಯಿ ಮೀಸಲಿಟ್ಟ ಬಿಬಿಎಂಪಿ ಬಜೆಟ್‌ನ್ನು ಪ್ರಾಣಿ ಪ್ರಿಯರು ಸ್ವಾಗತಿಸಿದ್ದಾರೆ.

ಪ್ರಾಣಿ ಹಕ್ಕುಗಳ ಕಾರ್ಯಕರ್ತ ಅರುಣ್ ಪ್ರಸಾದ್ ಅವರು ಮಾತನಾಡಿ, 'ಕಾನೈನ್ ಕೋರ್ ಲಸಿಕೆ' (ಆ್ಯಂಟಿ ರೇಬಿಸ್ ಲಸಿಕೆ) ಘೋಷಿಸಿದ ದೇಶದ ಮೊದಲ ಪಾಲಿಕೆ ಎಂದರೆ ಅದು ಬಿಬಿಎಂಪಿಯಾಗಿದೆ ಎಂದು ಹೇಳಿದ್ದಾರೆ.

“2019 ರ ನಾಯಿ ಗಣತಿಯ ಪ್ರಕಾರ, ಬೆಂಗಳೂರಿನಲ್ಲಿ ಸುಮಾರು 2.45 ಲಕ್ಷ ಬೀದಿ ನಾಯಿಗಳಿವೆ. ಈ ನಾಯಿಗಳು ಲೆಪ್ಟೊಸ್ಪಿರೋಸಿಸ್, ಪಾರ್ವೊವೈರಸ್ ಮತ್ತು ಇತರ ಭಯಾನಕ ವೈರಲ್ ಸೋಂಕುಗಳಿಗೆ ಗುರಿಯಾಗುತ್ತಿವೆ. ಬೀದಿ ನಾಯಿಗಳ ಜೀವಿತಾವಧಿ ಸುಮಾರು 15 ವರ್ಷಗಳು. ಆದರೆ, ಇವುಗಳಿಗೆ ಸೋಂಕು ತಗುಲಿದರೆ ಒಂದು ವರ್ಷದಲ್ಲಿ ಸಾಯುತ್ತವೆ. ‘ಕೆನೈನ್ ಕೋರ್ ಲಸಿಕೆ’ಯಿಂದ ಬೀದಿನಾಯಿಗಳ ಸಾವುಗಳನ್ನು ತಡೆಯಬಹುದು ಎಂದು ಪ್ರಸಾದ್ ತಿಳಿಸಿದ್ದಾರೆ. ಇದೇ ವೇಳೆ ಪ್ರಾಣಿಗಳಿಗೆ ಎರಡು ವಿದ್ಯುತ್ ಸ್ಮಶಾನಗಳ ನಿರ್ಮಾಣ ನಿರ್ಧಾರವನ್ನೂ ಅವರು ಸ್ವಾಗತಿಸಿದ್ದಾರೆ.

ಬೆಂಗಳೂರಿನಂತಹ ದೊಡ್ಡ ನಗರದಲ್ಲಿ ಪ್ರಾಣಿಗಳಿಗಾಗಿ ಸುಮನಹಳ್ಳಿಯಲ್ಲಿ ಒಂದೇ ಒಂದು ಸ್ಮಶಾನವಿದೆ. ನಗರಕ್ಕೆ ಅನೇಕ ಸ್ಮಶಾನಗಳ ಅಗತ್ಯವಿದೆ, ”ಎಂದು ಅವರು ಹೇಳಿದರು.

ಬೀದಿ ನಾಯಿಗಳ ಹಾವಳಿಯನ್ನು ನಿಯಂತ್ರಿಸಲು, ಬೀದಿ ನಾಯಿಗಳ ಸಂತಾನಹರಣ ಮಾಡುವ ಸಂಖ್ಯೆಯನ್ನು ದ್ವಿಗುಣಗೊಳಿಸುವ ಗುರಿಯನ್ನು ಬಜೆಟ್ ಹೊಂದಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಅಮೆರಿಕ ನಿಯೋಜಿತ ರಾಯಭಾರಿ ಸೆರ್ಗಿಯೊ ಗೋರ್- ಮೋದಿ, ಜೈಶಂಕರ್ ಭೇಟಿ; Tariff ಒತ್ತಡದ ನಡುವೆ ಭಾರತ-ಅಮೆರಿಕ ಸಂಬಂಧ ಸುಧಾರಣೆಯ ಸೂಚನೆ?

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

ಅಬ್ಬಬ್ಬಾ ರೋಮಾಂಚನ: ಅದ್ಭುತ ಸೃಷ್ಟಿಸಿದ ರಿಷಬ್ ಶೆಟ್ಟಿಗೆ ರಾಷ್ಟ್ರಪ್ರಶಸ್ತಿ ಕೊಡಲೇಬೇಕು - ತಮಿಳು ನಿರ್ದೇಶಕ ಅಟ್ಲೀ

Pakistan: ಇಸ್ರೇಲ್ ವಿರೋಧಿ ಪ್ರತಿಭಟನಾ ಜಾಥಾ, ಪೋಲೀಸರ ಗುಂಡೇಟಿಗೆ 11 ಮಂದಿ ಬಲಿ! Video

ಉತ್ತರ ಪ್ರದೇಶಕ್ಕೆ ಭೇಟಿ ನೀಡಿದ ತಾಲಿಬಾನ್ ಸಚಿವನಿಗೆ ಅದ್ಧೂರಿ ಸ್ವಾಗತ, ಸರ್ಕಾರದ ಭದ್ರತೆ; ಯೋಗಿಗೆ ನಾಚಿಕೆಯಾಗಬೇಕು- SP ಸಂಸದ ಶಫೀಕರ್

SCROLL FOR NEXT