ಮಾಡಾಳ್‌ ವಿರೂಪಾಕ್ಷಪ್ಪ 
ರಾಜ್ಯ

ಲೋಕಾಯುಕ್ತ ದಾಳಿ: A1 ಆರೋಪಿ, ಬಿಜೆಪಿ ಶಾಸಕ ಮಾಡಾಳ್‌ ವಿರೂಪಾಕ್ಷಪ್ಪ ವಿರುದ್ಧ ಎಫ್ಐಆರ್ ದಾಖಲು

ಲಂಚ ಸ್ವೀಕರಿಸುತ್ತಿದ್ದ ವೇಳೆ ಲೋಕಾಯುಕ್ತ ಅಧಿಕಾರಿಗಳಿಗೆ ರೆಡ್‌ಹ್ಯಾಂಡ್​ ಆಗಿ ಸಿಕ್ಕಿಬಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ದಾವಣಗೆರೆ ಜಿಲ್ಲೆ ಚನ್ನಗಿರಿ ಕ್ಷೇತ್ರದ ಬಿಜೆಪಿ ಶಾಸಕ ಮಾಡಾಳ್ ವಿರೂಪಾಕ್ಷಪ್ಪ ಹಾಗೂ....

ಬೆಂಗಳೂರು: ಲಂಚ ಸ್ವೀಕರಿಸುತ್ತಿದ್ದ ವೇಳೆ ಲೋಕಾಯುಕ್ತ ಅಧಿಕಾರಿಗಳಿಗೆ ರೆಡ್‌ಹ್ಯಾಂಡ್​ ಆಗಿ ಸಿಕ್ಕಿಬಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ದಾವಣಗೆರೆ ಜಿಲ್ಲೆ ಚನ್ನಗಿರಿ ಕ್ಷೇತ್ರದ ಬಿಜೆಪಿ ಶಾಸಕ ಮಾಡಾಳ್ ವಿರೂಪಾಕ್ಷಪ್ಪ ಹಾಗೂ ಅವರ ಪುತ್ರ ಮಾಡಾಳ್ ಪ್ರಶಾಂತ್‌ ಸೇರಿದಂತೆ ಆರು ಜನರ ವಿರುದ್ಧ ಎಫ್ಐಆರ್ ದಾಖಲಿಸಲಾಗಿದೆ.

ಲಂಚ ಪಡೆದ ಪ್ರಕರಣದಲ್ಲಿ ಮಾಡಾಳ್‌ ವಿರೂಪಾಕ್ಷಪ್ಪ ಅವರನ್ನು ಮೊದಲ ಆರೋಪಿಯನ್ನಾಗಿ ಮಾಡಲಾಗಿದ್ದು, ಬಿಜೆಪಿ ಶಾಸಕರಿಗೆ ಈಗ ಬಂಧನ ಭೀತಿ ಎದುರಾಗಿದೆ.

ಶ್ರೇಯಸ್ ಕಶ್ಯಪ್​ ಅವರು ನೀಡಿದ್ದ ದೂರಿನ ಅನ್ವಯ ಲೋಕಾಯುಕ್ತ ಪೊಲೀಸರು ಎಫ್​ಐಆರ್ ದಾಖಲಿಸಿದ್ದು, ಮಾಡಾಳ್ ವಿರೂಪಾಕ್ಷಪ್ಪ ಎ1(ಮೊದಲ ಆರೋಪಿ) ಆಗಿದ್ದು, ಮಾಡಾಳ್ ವಿರೂಪಾಕ್ಷಪ್ಪ ಪುತ್ರ ಮಾಡಾಳ್ ಪ್ರಶಾಂತ್ ಎ2(2ನೇ ಆರೋಪಿ), ಕೆಎಸ್​ಡಿಎಲ್​ ಅಕೌಂಟೆಂಟ್​ ಸುರೇಂದ್ರ ಎ3, ಮಾಡಾಳ್​ ಪ್ರಶಾಂತ್ ಸಂಬಂಧಿ ಸಿದ್ದೇಶ್ ಎ4, ಅರೋಮಾ ಕಂಪನಿ ಸಿಬ್ಬಂದಿ ಆಲ್ಬರ್ಟ್ ನಿಕೋಲಾ ಎ5, ಅರೋಮಾ ಕಂಪನಿ ಸಿಬ್ಬಂದಿ ಗಂಗಾಧರ ಎ6 ಆಗಿದ್ದಾರೆ.

ತಮ್ಮ ವಿರುದ್ಧ ಎಫ್​ಐಆರ್ ದಾಖಲಾಗುತ್ತಿದ್ದಂತೆ ಶಾಸಕ ಮಾಡಾಳ್‌ ವಿರೂಪಾಕ್ಷಪ್ಪ ಬಂಧನ ಭೀತಿ ಎದುರಾಗಿದ್ದು, ಜಾಮೀನು ಪಡೆಯಲು ಕಸರತ್ತು ನಡೆಸುತ್ತಿದ್ದಾರೆ.

ಇನ್ನೊಂದೆಡೆ ಶಾಸಕರಿಗಾಗಿ ಲೋಕಾಯುಕ್ತ ಪೊಲೀಸರ ಮೂರು ತಂಡಗಳಿಂದ ಹುಟುಕಾಟ ನಡೆಸಲಾಗುತ್ತಿದೆ. ಚನ್ನೇಶಪುರ ಗ್ರಾಮದಲ್ಲಿರುವ ಶಾಸಕರ​ ನಿವಾಸ, ಮಾವಿನಹೊಳೆ ಬಳಿ ಇರುವ ಮಾಡಾಳ್ ಕುಟುಂಬದ ಕ್ರಷರ್ ಕಚೇರಿ, ಮಾವಿನಕಟ್ಟೆ ಗ್ರಾಮದ ಬಳಿ ಇರುವ ತೋಟದ ಮನೆ ಮೇಲೆ ದಾಳಿ ನಡೆಸಿರುವ ಲೋಕಾಯುಕ್ತ ಪೊಲೀಸರು ಶೋಧ ಕಾರ್ಯ ಮುಂದುವರಿಸಿದ್ದು, 20 ಮಂದಿಯಿಂದ ಪರಿಶೀಲನೆ ನಡೆಯುತ್ತಿದೆ. ದಾಳಿ ವೇಳೆ ಚಿನ್ನ, ಅಪಾರ ಪ್ರಮಾಣದ ಆಸ್ತಿ ಪತ್ರಗಳು ಪತ್ತೆಯಾಗಿವೆ ಎನ್ನಲಾಗಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಕಟ್ಟಡ ಕುಸಿತಕ್ಕೂ ಕೆಲವೇ ಕ್ಷಣಗಳ ಮುನ್ನ 22 CRPF ಸೈನಿಕರ ರಕ್ಷಣೆ, Indian Army ಹೆಲಿಕಾಪ್ಟರ್ ರಣರೋಚಕ ಕಾರ್ಯಾಚರಣೆ! video

'ದೊಡ್ಡ ಆಘಾತ': ಅಮೆರಿಕದಲ್ಲಿ ಶೇ.50 ಸುಂಕ ಜಾರಿ, 48.2 ಬಿಲಿಯನ್ ಡಾಲರ್ ಮೌಲ್ಯದ ಭಾರತದ ರಫ್ತಿಗೆ ಹೊಡೆತ

ಜಮ್ಮುವಿನಲ್ಲಿ ಭೀಕರ ಮಳೆಯಿಂದ ಭಾರೀ ಅನಾಹುತ ಸೃಷ್ಟಿ: ವೈಷ್ಣೋದೇವಿ ಮಾರ್ಗದಲ್ಲಿ ಭೂಕುಸಿತ, ಕನಿಷ್ಠ 32 ಮಂದಿ ಸಾವು

Shocking: ಆಸಿಸ್ ಕ್ರಿಕೆಟ್ ದಿಗ್ಗಜ Michael Clarkeಗೆ 'ಚರ್ಮದ ಕ್ಯಾನ್ಸರ್'!

'ಮದುವೆಗೆ ಮುನ್ನ ಪೋಷಕರ ಒಪ್ಪಿಗೆ ಕಡ್ಡಾಯಗೊಳಿಸಿ': ಹರಿಯಾಣ BJP ಶಾಸಕ

SCROLL FOR NEXT