ಶಾಸಕ ಮಾಡಾಳ್ ವಿರೂಪಾಕ್ಷಪ್ಪ ಮತ್ತು ಅವರ ಪುತ್ರ ಮಾಡಾಳ್ ಪ್ರಶಾಂತ್(ಸಂಗ್ರಹ ಚಿತ್ರ) 
ರಾಜ್ಯ

ಪುತ್ರನ 'ಲಂಚಾವತಾರ' ಪ್ರಕರಣ: ಕೆಎಸ್ ಡಿಎಲ್ ಅಧ್ಯಕ್ಷ ಸ್ಥಾನಕ್ಕೆ ಬಿಜೆಪಿ ಶಾಸಕ ಮಾಡಾಳ್ ವಿರೂಪಾಕ್ಷಪ್ಪ ರಾಜೀನಾಮೆ

ಕೆಎಸ್ ಡಿಎಲ್ ನಿಗಮ ಅಧ್ಯಕ್ಷ ಸ್ಥಾನಕ್ಕೆ ಚನ್ನಗಿರಿ ಬಿಜೆಪಿ ಶಾಸಕ ಮಾಡಾಳ್ ವಿರೂಪಾಕ್ಷಪ್ಪ ರಾಜೀನಾಮೆ ನೀಡಿದ್ದಾರೆ.

ಬೆಂಗಳೂರು: ಕೆಎಸ್ ಡಿಎಲ್ ನಿಗಮ ಅಧ್ಯಕ್ಷ ಸ್ಥಾನಕ್ಕೆ ಚನ್ನಗಿರಿ ಬಿಜೆಪಿ ಶಾಸಕ ಮಾಡಾಳ್ ವಿರೂಪಾಕ್ಷಪ್ಪ ರಾಜೀನಾಮೆ ನೀಡಿದ್ದಾರೆ.

ನಿನ್ನೆ ಲೋಕಾಯುಕ್ತ ಪೊಲೀಸರ ಬಲೆಗೆ ಲಂಚ ಸ್ವೀಕರಿಸುತ್ತಿದ್ದ ವೇಳೆ ಶಾಸಕ ಮಾಡಾಳ್ ವಿರೂಪಾಕ್ಷಪ್ಪ ಅವರ ಪುತ್ರ ಬಿಡಬ್ಲ್ಯುಎಸ್ ಎಸ್ ಬಿ ಮುಖ್ಯ ಲೆಕ್ಕಾಧಿಕಾರಿ ಕೆಎಎಸ್ ಅಧಿಕಾರಿ ಮಾಡಾಳ್ ಪ್ರಶಾಂತ್ ಸಿಕ್ಕಿಬಿದ್ದು ಲೋಕಾಯುಕ್ತ ನ್ಯಾಯಾಂಗ ಬಂಧನವಾಗಿದೆ.

ಅವರ ನಿವಾಸ ಮತ್ತು ಕಚೇರಿ ಮೇಲೆ ಲೋಕಾಯುಕ್ತ ಸಿಬ್ಬಂದಿ ರಾತ್ರಿಯಿಂದ ಇಂದು ಬೆಳಗಿನವರೆಗೆ ನಡೆಸಿದ ಸತತ ಕಾರ್ಯಾಚರಣೆ ಮತ್ತು ಶೋಧ ವೇಳೆ 6 ಕೋಟಿ ರೂಪಾಯಿ ನಗದು ಪತ್ತೆಯಾಗಿದೆ.

ಲೋಕಾಯುಕ್ತ ದಾಳಿ ಬೆನ್ನಲ್ಲೇ ಪ್ರತಿಪಕ್ಷ ಕಾಂಗ್ರೆಸ್ ಬಿಜೆಪಿಯನ್ನು ತರಾಟೆಗೆ ತೆಗೆದುಕೊಂಡಿತ್ತು. ಅದಕ್ಕೆ ಇಂದು ಪ್ರತಿಕ್ರಿಯೆ ನೀಡಿದ್ದ ಸಿಎಂ ಬೊಮ್ಮಾಯಿ, ಲೋಕಾಯುಕ್ತ ಸಂಸ್ಥೆಯನ್ನು ಬಿಜೆಪಿ ಸರ್ಕಾರವೇ ಮರುಸ್ಥಾಪಿಸಿದ್ದು ಭ್ರಷ್ಟಾಚಾರ ನಿಗ್ರಹಕ್ಕೆ. ಸಮಗ್ರ ತನಿಖೆಯಾಗಿ ತಪ್ಪಿತಸ್ಥರು ಯಾರೇ ಆದರೂ ಶಿಕ್ಷೆಯಾಗುತ್ತದೆ ಎಂದಿದ್ದರು.

ಇದಾದ ಬಳಿಕ ವಿಧಾನಸಭೆ ಚುನಾವಣೆ ಹೊತ್ತಲ್ಲಿ ಪಕ್ಷಕ್ಕೆ ಮುಜುಗರವಾಗಬಾರದು ಮತ್ತು ಪ್ರತಿಪಕ್ಷಗಳ ಟೀಕೆಗೆ ಗುರಿಯಾಗಬಾರದು ಎಂಬ ಉದ್ದೇಶದಿಂದ ಸಿಎಂ ಕರ್ನಾಟಕ ಸಾಬೂನು ಮತ್ತು ಮಾರ್ಜಕ ಕಾರ್ಖಾನೆ(KSDL) ಅಧ್ಯಕ್ಷ ಸ್ಥಾನಕ್ಕೆ ಇಂದು ಸಾಯಂಕಾಲದೊಳಗೆ ರಾಜೀನಾಮೆ ನೀಡುವಂತೆ ಮಾಡಾಳ್ ವಿರೂಪಾಕ್ಷಪ್ಪ ಅವರಿಗೆ ಸೂಚಿಸಿದ್ದರು.

ಮುಖ್ಯಮಂತ್ರಿಗಳಿಂದ ಸೂಚನೆ ಬಂದ ಕೂಡಲೇ ಮಾಡಾಳ್ ವಿರೂಪಾಕ್ಷಪ್ಪ ಕೆಎಸ್ ಡಿಎಲ್ ಅಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. ತಮ್ಮ ರಾಜೀನಾಮೆ ಪತ್ರದಲ್ಲಿ, ನನ್ನ ಮತ್ತು ನನ್ನ ಕುಟುಂಬದ ವಿರುದ್ದ ಚುನಾವಣೆ ಹೊತ್ತಿನಲ್ಲಿ ಷಡ್ಯಂತ್ರ ನಡೆಸಲಾಗಿದ್ದು, ನೈತಿಕ ಹೊಣೆಹೊತ್ತು ರಾಜೀನಾಮೆ ಸಲ್ಲಿಸುತ್ತಿದ್ದೇನೆ ಎಂದು ಹೇಳಿದ್ದಾರೆ. 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಭಾರತ-ರಷ್ಯಾ ಆರ್ಥಿಕ ಬಾಂಧವ್ಯಕ್ಕೆ ಹೊಸ ಬಲ; ಪುಟಿನ್ ಭೇಟಿಯಾದ ಜೈಶಂಕರ್, ಪರಮಾಣು ಸಹಕಾರ ಸೇರಿ ಹಲವು ಅಂಶಗಳ ಕುರಿತು ಚರ್ಚೆ!

3 ದಿನ ಮೊದಲೇ ಮುಂಗಾರು ಅಧಿವೇಶನಕ್ಕೆ ತೆರೆ: 'ವಿರೋಧ ಪಕ್ಷಕ್ಕೆ ಹೆದರಿ ಅಧಿವೇಶನ ರದ್ದು'; ರಾಜ್ಯಪಾಲರಿಗೆ BJP ದೂರು!

Video: ಕುದಿಯುತ್ತಿದ್ದ ಬೆಲ್ಲದ ಪಾಕಕ್ಕೆ ಬಿದ್ದ ಯುವಕ; ಅಣ್ಣನ ಸಾಲ ತೀರಿಸಲು ಕೆಲಸಕ್ಕೆ ಹೋಗಿದ್ದವನ ದಾರುಣ ಅಂತ್ಯ

'ಕಿವಿಲಿ ಹೊಗೆ ಬರುವಂತಿದೆ': ಲಂಕಾ-ಭಾರತ ಟೆಸ್ಟ್ ಪಂದ್ಯದಲ್ಲಿ ಮತ್ತೊಂದು ವಿವಾದ, ಗ್ಲೌಸ್ ಕಿತ್ತೆಸೆದ ಬ್ಯಾಟರ್, ಆಗಿದ್ದೇನು?

ಬಿಜೆಪಿ MLC ಎನ್. ರವಿಕುಮಾರ್‌ ವಿರುದ್ಧ ಜಾಮೀನು ರಹಿತ ಬಂಧನ ವಾರಂಟ್