ಎಚ್‌.ಡಿ. ದೇವೇಗೌಡ 
ರಾಜ್ಯ

ಕುಂಬಳಗೋಡಿನಿಂದ ಮೈಸೂರಿನವರೆಗೆ ಎಚ್.ಡಿ. ದೇವೇಗೌಡ 100 ಕಿ.ಮೀ ರೋಡ್ ಶೋ ನಡೆಸಲು ಜೆಡಿಎಸ್ ಚಿಂತನೆ

ಜೆಡಿಎಸ್ ತನ್ನ ಪಂಚರತ್ನ ಯಾತ್ರೆಯ ಸಮಾರೋಪ ಕಾರ್ಯಕ್ರಮಕ್ಕೂ ಮುನ್ನ ಮಾರ್ಚ್ 26 ರಂದು ಬೆಂಗಳೂರಿನ ಕುಂಬಳಗೋಡಿನಿಂದ ಮೈಸೂರಿನವರೆಗೆ 100 ಕಿಲೋಮೀಟರ್ ತೆರೆದ ವ್ಯಾನ್‌ನಲ್ಲಿ ಪಕ್ಷದ ವರಿಷ್ಠ ಎಚ್‌ಡಿ ದೇವೇಗೌಡರನ್ನು ಕರೆದುಕೊಂಡು ಹೋಗಲಿದೆ. 

ಬೆಂಗಳೂರು: ಜೆಡಿಎಸ್ ತನ್ನ ಪಂಚರತ್ನ ಯಾತ್ರೆಯ ಸಮಾರೋಪ ಕಾರ್ಯಕ್ರಮಕ್ಕೂ ಮುನ್ನ ಮಾರ್ಚ್ 26 ರಂದು ಬೆಂಗಳೂರಿನ ಕುಂಬಳಗೋಡಿನಿಂದ ಮೈಸೂರಿನವರೆಗೆ 100 ಕಿಲೋಮೀಟರ್ ತೆರೆದ ವ್ಯಾನ್‌ನಲ್ಲಿ ಪಕ್ಷದ ವರಿಷ್ಠ ಎಚ್‌ಡಿ ದೇವೇಗೌಡರನ್ನು ಕರೆದುಕೊಂಡು ಹೋಗಲಿದೆ. 

ಮಂಗಳವಾರವಷ್ಟೇ ಗೌಡರು ವಯೋಸಹಜ ಕಾಯಿಲೆಯಿಂದ ಆಸ್ಪತ್ರೆಗೆ ದಾಖಲಾಗಿದ್ದು, ಶನಿವಾರ ಡಿಸ್ಚಾರ್ಜ್ ಆಗುವ ಸಾಧ್ಯತೆ ಇದೆ.

ಪಕ್ಷದ ಕಚೇರಿಯಲ್ಲಿ ಶುಕ್ರವಾರ ನಡೆದ ಕಾರ್ಯಕ್ರಮದಲ್ಲಿ ಕಡೂರು ಕ್ಷೇತ್ರದ ಕಾಂಗ್ರೆಸ್ ಪ್ರಮುಖ ಸಿ.ಎಂ. ಧನಂಜಯ ಹಾಗೂ ಕೊಳ್ಳೇಗಾಲ ಕ್ಷೇತ್ರದ ನಿವೃತ್ತ ಸರ್ಕಲ್ ಇನ್‌ಸ್ಪೆಕ್ಟರ್ ಪುಟ್ಟಸ್ವಾಮಿ ಅವರು ಪಕ್ಷಕ್ಕೆ ಸೇರ್ಪಡೆಯಾದರು. 

ಕಾರ್ಯಕ್ರಮದಲ್ಲಿ ಮಾತನಾಡಿದ ಪಕ್ಷದ ಹಿರಿಯ ಮುಖಂಡ ಎಚ್‌ಡಿ ಕುಮಾರಸ್ವಾಮಿ, ಹತ್ತು ಲಕ್ಷಕ್ಕೂ ಅಧಿಕ ಜನ ಸೇರುವ ನಿರೀಕ್ಷೆಯಿರುವುದರಿಂದ ಮೈಸೂರು ರ‍್ಯಾಲಿ ಇತಿಹಾಸ ಸೃಷ್ಟಿಸಲಿದೆ. ಇದು ನನ್ನ ರಾಜಕೀಯ ಜೀವನದ ಇತಿಹಾಸದಲ್ಲಿಯೇ ಮಹೋನ್ನತ ಸಮಾವೇಶ ಆಗಲಿದೆ. ಈವರೆಗೂ ಯಾರೂ ಮಾಡಿರದಂಥ ಸಮಾವೇಶ ಅದಾಗಿರುತ್ತದೆ. 60 ಕ್ಷೇತ್ರಗಳ ಅಭ್ಯರ್ಥಿಗಳ ಹೆಸರನ್ನು ಇದೇ ತಿಂಗಳ 11 ಅಥವಾ 14ರಂದು ಪ್ರಕಟಿಸಲಾಗುವುದು ಎಂದರು.

ಕುಂಬಳಗೋಡಿನಿಂದ ಪ್ರಾರಂಭವಾಗಿ ಮೈಸೂರಿನವರೆಗೆ ಸುಮಾರು 100 ಕೀ.ಮೀ ದೂರ ಬೃಹತ್ ರೋಡ್ ಶೋ ಮಾಡಲಾಗುವುದು. ಆ ರೋಡ್‌ಶೋದಲ್ಲಿ ಮಾಜಿ ಪ್ರಧಾನಿಗಳಾದ ಎಚ್.ಡಿ. ದೇವೇಗೌಡರನ್ನು ತೆರೆದ ವಾಹನದಲ್ಲಿ ಕರೆದುಕೊಂಡು ಹೋಗಲಾಗುವುದು. ಈ ಸಮಾವೇಶದಲ್ಲಿ ಹತ್ತು ಲಕ್ಷ ಜನ ಸೇರಲಿದ್ದಾರೆ ಎಂದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಜಮ್ಮು-ಕಾಶ್ಮೀರ: ಮಸೂದ್ ಅಜರ್ ಆಡಿಯೋ ಬೆನ್ನಲ್ಲೇ ಭಾರತದ ಗಡಿಗೆ ನುಗ್ಗಲು 'ಪಾಕ್ ಡ್ರೋನ್' ಗಳು ಯತ್ನ!

ಇತಿಹಾಸ ಕಲಿಯಬೇಕಿದ್ದರೆ ಕಾಲೇಜಿಗೆ ಹೋಗುತ್ತಾರೆ, ನಿಮ್ಮ ಬೋಧನೆಯ ಅಗತ್ಯವಿಲ್ಲ: ಪ್ರಧಾನಿ ಮೋದಿ ವಿರುದ್ಧ ಪ್ರಿಯಾಂಕ್ ಖರ್ಗೆ ವಾಗ್ದಾಳಿ

MGNREGA Row: ಯಾವಾಗ-ಎಲ್ಲಿ ಬೇಕಾದರೂ ಚರ್ಚೆಗೆ ಸಿದ್ಧ, ಡೈಲಾಗ್‌ ವೀರ HDK ಬಂದರೆ ಒಳ್ಳೆಯದು; ಡಿ.ಕೆ.ಶಿವಕುಮಾರ್

ಪಕ್ಷದ ಮೇಲೆ ನನಗೆ ನಂಬಿಕೆ ಇದೆ: ದುಡ್ಡು- ಬ್ಲಡ್ ನಿರಂತರ ಚಲನೆಯಲ್ಲಿ ಇರಬೇಕು; ಅಕ್ಕಪಕ್ಕದಲ್ಲಿ ಇರುವವರೇ ಮೋಸ ಮಾಡುತ್ತಾರೆ, ಎಚ್ಚರ!

1st ODI: ಕೊಹ್ಲಿ ಅರ್ಧಶತಕ: ನ್ಯೂಜಿಲ್ಯಾಂಡ್ ವಿರುದ್ಧದ ಪಂದ್ಯದಲ್ಲಿ ಭಾರತಕ್ಕೆ ರೋಚಕ ಜಯ!

SCROLL FOR NEXT