ಸುಧಾಕರ್ 
ರಾಜ್ಯ

ಗುತ್ತಿಗೆ ನೌಕರರ ವೇತನ ಶೇ.15 ರಷ್ಟು ಹೆಚ್ಚಳ, ಏಪ್ರಿಲ್‌ 1 ರಿಂದ ಜಾರಿ

ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ.ಸುಧಾಕರ್‌ ಅವರು ಭರವಸೆ ನೀಡಿದ್ದಂತೆಯೇ, ರಾಷ್ಟ್ರೀಯ ಆರೋಗ್ಯ ಅಭಿಯಾನದ ಗುತ್ತಿಗೆ ನೌಕರರ ವೇತನವನ್ನು ಶೇ.15 ರಷ್ಟು ಹೆಚ್ಚಿಸಲಾಗಿದೆ.

ಬೆಂಗಳೂರು: ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ.ಸುಧಾಕರ್‌ ಅವರು ಭರವಸೆ ನೀಡಿದ್ದಂತೆಯೇ, ರಾಷ್ಟ್ರೀಯ ಆರೋಗ್ಯ ಅಭಿಯಾನದ ಗುತ್ತಿಗೆ ನೌಕರರ ವೇತನವನ್ನು ಶೇ.15 ರಷ್ಟು ಹೆಚ್ಚಿಸಲಾಗಿದೆ.

ಈ ಕುರಿತು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಇಂದು ವೇತನ ಹೆಚ್ಚಳ ಮಾಡಿ ಆದೇಶ ಹೊರಡಿಸಿದ್ದು, ಏಪ್ರಿಲ್‌ 1 ರಿಂದ ಇದು ಅನ್ವಯವಾಗಲಿದೆ.

ರಾಷ್ಟ್ರೀಯ ಆರೋಗ್ಯ ಅಭಿಯಾನದಡಿ ಕೆಲಸ ಮಾಡುವ ಗುತ್ತಿಗೆ ನೌಕರರಿಗೆ ವೇತನ ಹೆಚ್ಚಳ ಮಾಡುವ ಆಗ್ರಹ ಬಂದಿತ್ತು. ಈ ವೇಳೆ, ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ.ಸುಧಾಕರ್‌ ಅವರು, ಸರ್ಕಾರದ ಮಟ್ಟದಲ್ಲಿ ಚರ್ಚೆ ನಡೆಸಿ ವೇತನ ಹೆಚ್ಚಳ ಮಾಡಲು ಕ್ರಮ ವಹಿಸುವ ಬಗ್ಗೆ ಆಶ್ವಾಸನೆ ನೀಡಿದ್ದರು. 

ಕೆಲಸಕ್ಕೆ ಸೇರ್ಪಡೆಯಾಗುವ ಸಂದರ್ಭದಲ್ಲಿ 20 ಸಾವಿರ ರೂ. ಗಿಂತ ಕಡಿಮೆ ಸಂಭಾವನೆ ಇರುವ ನೌಕರರಿಗೆ ಶೇ.15 ರಷ್ಟು ಹೆಚ್ಚಳವಾಗಲಿದೆ. 5 ವರ್ಷಕ್ಕಿಂತ ಹೆಚ್ಚು ಕಾಲ ನಿರಂತರವಾಗಿ ಕಾರ್ಯನಿರ್ವಹಿಸಿದ ಎನ್‌ಎಚ್‌ಎಂ ಮೆಡಿಕಲ್‌ ಅಧಿಕಾರಿಗಳಿಗೆ(ಎಂಬಿಬಿಎಸ್‌, ಆಯುಷ್‌, ಆರ್‌ಬಿಎಸ್‌ಕೆ, ದಂತವೈದ್ಯ ಸರ್ಜನ್‌ಗಳು) ಕೂಡ ಶೇ.15 ರಷ್ಟು ಸಂಭಾವನೆ ಹೆಚ್ಚಿಸಲಾಗಿದೆ. 

ಎನ್‌ಎಚ್‌ಎಂ ಗುತ್ತಿಗೆ ತಜ್ಞರಿಗೆ, 3-5 ವರ್ಷಗಳ ಸೇವೆಯಲ್ಲಿರುವವರಿಗೆ ಶೇ.5, 5-10 ವರ್ಷಗಳ ಸೇವೆಯಲ್ಲಿರುವವರಿಗೆ ಶೇ.10 ಹಾಗೂ 10 ವರ್ಷಕ್ಕೂ ಅಧಿಕ ಕಾಲ ಸೇವೆಯಲ್ಲಿರುವವರಿಗೆ ಶೇ.15 ರಷ್ಟು ಸಂಭಾವನೆ ಹೆಚ್ಚಳ ಮಾಡಲಾಗಿದೆ. 

ನೌಕರರಿಗೆ ಮಾತು ನೀಡಿದ್ದಂತೆಯೇ ಕ್ರಮ ವಹಿಸಲಾಗಿದೆ. ಈ ಮೂಲಕ ನಮ್ಮ ಸರ್ಕಾರ ನೌಕರರ ಕ್ಷೇಮದ ಬದುಕಿಗೆ ಸದಾ ಶ್ರಮಿಸುತ್ತದೆ ಎಂದು ಸಚಿವ ಡಾ.ಕೆ.ಸುಧಾಕರ್‌ ಹೇಳಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಇತಿಹಾಸ ಕಲಿಯಬೇಕಿದ್ದರೆ ಕಾಲೇಜಿಗೆ ಹೋಗುತ್ತಾರೆ, ನಿಮ್ಮ ಬೋಧನೆಯ ಅಗತ್ಯವಿಲ್ಲ: ಪ್ರಧಾನಿ ಮೋದಿ ವಿರುದ್ಧ ಪ್ರಿಯಾಂಕ್ ಖರ್ಗೆ ವಾಗ್ದಾಳಿ

MGNREGA Row: ಯಾವಾಗ-ಎಲ್ಲಿ ಬೇಕಾದರೂ ಚರ್ಚೆಗೆ ಸಿದ್ಧ, ಡೈಲಾಗ್‌ ವೀರ HDK ಬಂದರೆ ಒಳ್ಳೆಯದು; ಡಿ.ಕೆ.ಶಿವಕುಮಾರ್

Positive Vibes ಗಾಗಿ ಮನೆಯಲ್ಲಿ ಯಾವ ಗಿಡ ಬೆಳಸಬೇಕು: ಮುಳ್ಳಿನ ಗಿಡಗಳಲ್ಲಿದೆಯೇ ನಕರಾತ್ಮಕ ಶಕ್ತಿ; ಮಲ್ಲಿಗೆ ಮತ್ತು ತುಳಸಿಗೆ ಸೂಕ್ತ ಸ್ಥಳ ಯಾವುದು?

ಬೆಂಗಳೂರು: 6 ವರ್ಷದ ಬಾಲಕಿ ಅಪಹರಿಸಿ ಹತ್ಯೆ ; ಕೊಲೆಗೂ ಮುನ್ನ ಲೈಂಗಿಕ ದೌರ್ಜನ್ಯ - ಶವ ಪರೀಕ್ಷೆ ವೇಳೆ ಸತ್ಯ ಬಹಿರಂಗ!

ಮಹಿಳಾ ಟೆಕ್ಕಿ ಸಾವಿನ ಕೇಸ್ ಗೆ ಬಿಗ್ ಟ್ವಿಸ್ಟ್: ಹತ್ಯೆಗೂ ಮುನ್ನ PU ವಿದ್ಯಾರ್ಥಿಯಿಂದ ರೇಪ್; ಸಾಕ್ಷಿ ನಾಶಕ್ಕೆ ಬೆಂಕಿ ಹಚ್ಚಿದ ಕರ್ನಲ್ ಕುರೈ!

SCROLL FOR NEXT