ಶಂಕಿತ ಉಗ್ರ ಶಾರೀಕ್ 
ರಾಜ್ಯ

ಮಂಗಳೂರು ಕುಕ್ಕರ್ ಬಾಂಬ್, ಕೊಯಮತ್ತೂರು ಸ್ಫೋಟದ ಹೊಣೆ ಹೊತ್ತ ISIS ಸಂಘಟನೆ!

ಮಂಗಳೂರು ಕುಕ್ಕರ್ ಬಾಂಬ್ ಸ್ಫೋಟ ಹಾಗೂ ತಮಿಳುನಾಡಿನ ಕೊಯಮತ್ತೂರು ಸ್ಫೋಟದ ಹೊಣೆಯನ್ನು ಕೊನೆಗೂ ಐಎಸ್ಐಎಸ್ ಉಗ್ರ ಸಂಘಟನೆ ಹೊತ್ತಿದೆ. 

ಮಂಗಳೂರು: ಮಂಗಳೂರು ಕುಕ್ಕರ್ ಬಾಂಬ್ ಸ್ಫೋಟ ಹಾಗೂ ತಮಿಳುನಾಡಿನ ಕೊಯಮತ್ತೂರು ಸ್ಫೋಟದ ಹೊಣೆಯನ್ನು ಕೊನೆಗೂ ಐಎಸ್ಐಎಸ್ ಉಗ್ರ ಸಂಘಟನೆ ಹೊತ್ತಿದೆ. 

ಮಂಗಳೂರಿನ ಕದ್ರಿ ದೇವಾಲಯದ ಮೇಲೆ ದಾಳಿ ಮಾಡುವ ಉದ್ದೇಶದಿಂದ ಶಂಕಿತ ಉಗ್ರ ಶಾರೀಕ್ ಕುಕ್ಕರ್ ನಲ್ಲಿ ಬಾಂಬ್ ಇಟ್ಟುಕೊಂಡು ಹೋಗುತ್ತಿದ್ದಾಗ ಕಂಕನಾಡಿ ಬಳಿ ಅಚಾನಕ್ ಆಗಿ ಸ್ಫೋಟವಾಗಿ ದೊಡ್ಡ ಅನಾಹುತ ತಪ್ಪಿತ್ತು. ಇನ್ನು ತಮಿಳುನಾಡಿನ ಕೊಯಮತ್ತೂರು ಬಳಿ ಸಹ ಸ್ಫೋಟ ನಡೆಸಿತ್ತು. ಇಸ್ಲಾಮಿಕ್​ ಸ್ಟೇಟ್​​​​ ಸಂಘಟನೆಯ ಸಹ ಸಂಘಟನೆಯಾದ ಖೊರಾಸನ್​ ಪ್ರಾಂತ್ಯದ ಇಸ್ಲಾಮಿಕ್​ ಸ್ಟೇಟ್​ ಉಗ್ರ ಸಂಘಟನೆ (ಐಎಸ್​ಕೆಪಿ) ಈ ದಾಳಿಗಳ ಹೊಣೆ ಹೊತ್ತಿದೆ.

ಮಂಗಳೂರಿನ ಕದ್ರಿಯಲ್ಲಿರುವ ಹಿಂದೂ ದೇವಾಲಯದ ಮೇಲೆ ದಾಳಿ ಮಾಡಲು ನಮ್ಮ ಸಹೋದರ ಪ್ರಯತ್ನಿಸಿದ್ದನು. ಆದರೆ ಅದು ವಿಫಲವಾಗಿದೆ. ಆದರೆ ನಮ್ಮ ಕಾರ್ಯಾಚರಣೆಗಳನ್ನು ನಿಲ್ಲಿಸುವುದಿಲ್ಲ. ರಾಜ್ಯ, ಕೇಂದ್ರ ಗುಪ್ತಚರ ಸಂಸ್ಥೆಗಳ ಕಣ್ಣು ತಪ್ಪಿಸಿ ದಾಳಿ ಮಾಡಲು ಸಿದ್ಧತೆ ನಡೆಸುತ್ತಿದ್ದೇವೆ ಎಂದು ಉಗ್ರರು ಎಚ್ಚರಿಕೆ ನೀಡಿದ್ದಾರೆ. 

2022ರ ನವೆಂಬರ್ 9ರಂದು ಮಂಗಳೂರಿನಲ್ಲಿ ಆಟೋದಲ್ಲಿ ಕುಕ್ಕರ್ ಬಾಂಬ್ ಸ್ಫೋಟ ಸಂಭವಿಸಿದ್ದು ಇದು ಇಡೀ ರಾಜ್ಯವನ್ನೇ ಬೆಚ್ಚಿ ಬೀಳಿಸಿತ್ತು. 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ನನ್ನ-ಕಾಂಗ್ರೆಸ್ ಮಧ್ಯೆ ಭಕ್ತ-ಭಗವಂತನ ಸಂಬಂಧ ಇದೆ; RSS ಗೀತೆ ಹಾಡಿದ್ದಕ್ಕೆ ನೋವಾಗಿದ್ದರೆ ಕ್ಷಮೆ ಕೇಳುತ್ತೇನೆ: ಡಿ.ಕೆ ಶಿವಕುಮಾರ್; Video

ಭಾರತದ ಮೇಲೆ ಶೇ. 50 ರಷ್ಟು ಸುಂಕ ನಾಳೆ ಜಾರಿ, ಅಮೆರಿಕ ಕರಡು ಸೂಚನೆ; ಔಷಧ, ಎಲೆಕ್ಟ್ರಾನಿಕ್ಸ್‌ ವಸ್ತುಗಳಿಗೆ ವಿನಾಯಿತಿ

Ragigudda Metro ಮೆಟ್ರೋ ನಿಲ್ದಾಣದಲ್ಲಿ ತಪ್ಪಿದ ದುರಂತ, ಆಯತಪ್ಪಿ ಹಳಿ ಮೇಲೆ ಬಿದ್ದ ಸಿಬ್ಬಂದಿ!... ಮುಂದೇನಾಯ್ತು? Video

ಪದಕ ಹಾಕಿಸಿಕೊಳ್ಳಲು ನಿರಾಕರಿಸಿದ DMK ಸಚಿವನ ಪುತ್ರ, BJP ನಾಯಕ Annamalai ಹೇಳಿದ್ದೇನು? Video

'ಶಾಂತಿ ಬೇಕಾದರೆ ಯುದ್ಧಕ್ಕೆ ಸಿದ್ಧರಾಗಿ.. Sudarshan Chakra ವಾಯುರಕ್ಷಣಾ ವ್ಯವಸ್ಥೆಗೆ ಮೂರೂ ಸೇನೆಗಳ ಬೃಹತ್ ಪ್ರಯತ್ನ ಬೇಕು': CDS Chauhan

SCROLL FOR NEXT