ಮಾಡಾಳ್‌ ವಿರೂಪಾಕ್ಷಪ್ಪ 
ರಾಜ್ಯ

ಲಂಚ ಪ್ರಕರಣ: ಬಿಜೆಪಿ ಶಾಸಕನ ಬಂಧನಕ್ಕೆ ವಿಶೇಷ ತಂಡ ರಚಿಸಿದ ಕರ್ನಾಟಕ ಲೋಕಾಯುಕ್ತ

ಲಂಚ ಪ್ರಕರಣದಲ್ಲಿ ಪ್ರಮುಖ ಆರೋಪಿಯಾಗಿರುವ ಬಿಜೆಪಿ ಶಾಸಕ ಮಾಡಾಳ್ ವಿರೂಪಾಕ್ಷಪ್ಪ ಅವರನ್ನು ಬಂಧಿಸಲು ಕರ್ನಾಟಕ ಲೋಕಾಯುಕ್ತ ಉಪ ವರಿಷ್ಠಾಧಿಕಾರಿಗಳ ನೇತೃತ್ವದಲ್ಲಿ ಏಳು ತಂಡಗಳನ್ನು ರಚಿಸಿದೆ.

ಬೆಂಗಳೂರು: ಲಂಚ ಪ್ರಕರಣದಲ್ಲಿ ಪ್ರಮುಖ ಆರೋಪಿಯಾಗಿರುವ ಬಿಜೆಪಿ ಶಾಸಕ ಮಾಡಾಳ್ ವಿರೂಪಾಕ್ಷಪ್ಪ ಅವರನ್ನು ಬಂಧಿಸಲು ಕರ್ನಾಟಕ ಲೋಕಾಯುಕ್ತ ಉಪ ವರಿಷ್ಠಾಧಿಕಾರಿಗಳ ನೇತೃತ್ವದಲ್ಲಿ ಏಳು ತಂಡಗಳನ್ನು ರಚಿಸಿದೆ.

ತಂಡಗಳು ಈಗಾಗಲೇ ರಾಜ್ಯದಾದ್ಯಂತ ಟ್ರ್ಯಾಕಿಂಗ್ ಮತ್ತು ಶೋಧ ಕಾರ್ಯಾಚರಣೆಯನ್ನು ಆರಂಭಿಸಿವೆ ಎಂದು ಮೂಲಗಳು ತಿಳಿಸಿವೆ.

ಬೆಂಗಳೂರು ಮತ್ತು ದಾವಣಗೆರೆ ನಗರಗಳ ವಿವಿಧೆಡೆ ತಂಡಗಳು ಬೇಟೆ ಆರಂಭಿಸಿವೆ ಎಂದು ಮೂಲಗಳು ತಿಳಿಸಿವೆ. ಇದೇ ವೇಳೆ ಲೋಕಾಯುಕ್ತ ಪೊಲೀಸರ ಮುಂದೆ ವಿಚಾರಣೆಗೆ ಹಾಜರಾಗುವಂತೆ ನೋಟಿಸ್ ನೀಡಲು ಸಿದ್ಧತೆ ನಡೆಸಿದ್ದಾರೆ.

ಬೆಂಗಳೂರು, ದಾವಣಗೆರೆಯಲ್ಲಿರುವ ಬಿಜೆಪಿ ಶಾಸಕರ ನಿವಾಸ, ಶಾಸಕರ ಭವನ ಮತ್ತು ಕರ್ನಾಟಕ ಸಾಬೂನು ಮತ್ತು ಮಾರ್ಜಕ ಕಾರ್ಖಾನೆ (ಕೆಎಸ್‌ಡಿಎಲ್) ಕಚೇರಿಗೆ ನೋಟಿಸ್ ಕಳುಹಿಸಲಾಗುವುದು. ಕೆಎಸ್‌ಡಿಎಲ್‌ನ ಅಧ್ಯಕ್ಷರಾಗಿದ್ದ ಶಾಸಕ ವಿರೂಪಾಕ್ಷಪ್ಪ ಅವರು ಘಟನೆಯ ನಂತರ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ.

ಲೋಕಾಯುಕ್ತ ಅಧಿಕಾರಿಗಳು ವಿರೂಪಾಕ್ಷಪ್ಪ ಮಾಡಾಳ್ ಅವರ ಪುತ್ರ ಪ್ರಶಾಂತ್ ಮಾಡಾಳ್ ಅವರ ನಿವಾಸದಲ್ಲಿ ಪತ್ತೆಯಾದ 6 ಕೋಟಿ ರೂ.ಗೂ ಹೆಚ್ಚು ನಗದು ಮತ್ತು ಖಾಸಗಿ ಕಚೇರಿಯಲ್ಲಿ 2 ಕೋಟಿ ರೂ.ಗೂ ಹೆಚ್ಚು ನಗದು ಮೂಲದ ಬಗ್ಗೆಯೂ ತನಿಖೆ ನಡೆಸುತ್ತಿದ್ದಾರೆ.

ಪ್ರಶಾಂತ್ ಮಾಡಾಳ್ ತನ್ನ ತಂದೆಯ ಪರವಾಗಿ ಕೆಎಸ್‌ಡಿಎಲ್‌ಗೆ ಕಚ್ಚಾ ಸಾಮಗ್ರಿಗಳನ್ನು ಖರೀದಿಸಲು ಟೆಂಡರ್ ಮಂಜೂರು ಮಾಡಲು 40 ಲಕ್ಷ ರೂಪಾಯಿ ನಗದು ಸ್ವೀಕರಿಸುವಾಗ ರೆಡ್ ಹ್ಯಾಂಡ್ ಆಗಿ ಸಿಕ್ಕಿಬಿದ್ದಿದ್ದಾರೆ. ಪ್ರಶಾಂತ್ ಮಾಡಲ್ ಅವರನ್ನು ಬಂಧಿಸಲಾಗಿದ್ದು, ಸದ್ಯ ನ್ಯಾಯಾಂಗ ಬಂಧನದಲ್ಲಿದ್ದಾರೆ. ಬಳಿಕ ಅಧಿಕಾರಿಗಳು ನಿವಾಸ ಮತ್ತು ಕಚೇರಿಗಳಿಂದ 8 ಕೋಟಿ ರೂ.ಗಳನ್ನು ವಶಪಡಿಸಿಕೊಂಡಿದ್ದಾರೆ. ಈ ಬೆಳವಣಿಗೆಯು ಆಡಳಿತಾರೂಢ ಬಿಜೆಪಿ ಸರ್ಕಾರಕ್ಕೆ ತೀವ್ರ ಹಿನ್ನಡೆಯಾಗಿ ಪರಿಣಮಿಸಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಜಮ್ಮು-ಕಾಶ್ಮೀರ: ಮಸೂದ್ ಅಜರ್ ಆಡಿಯೋ ಬೆನ್ನಲ್ಲೇ ಭಾರತದ ಗಡಿಗೆ ನುಗ್ಗಲು 'ಪಾಕ್ ಡ್ರೋನ್' ಗಳು ಯತ್ನ!

1st ODI: ಕೊಹ್ಲಿ ಅರ್ಧಶತಕ: ನ್ಯೂಜಿಲ್ಯಾಂಡ್ ವಿರುದ್ಧದ ಪಂದ್ಯದಲ್ಲಿ ಭಾರತಕ್ಕೆ ರೋಚಕ ಜಯ!

ಕಾಂಗ್ರೆಸ್ ಶಾಸಕಿ ನಯನಾ ಮೋಟಮ್ಮಗೆ ಅಶ್ಲೀಲ ಕಾಮೆಂಟ್! ಕಿಡಿಗೇಡಿಗಳಿಗೆ ಕೊಟ್ಟ ವಾರ್ನಿಂಗ್ ಏನು?

ಮಿಲಿಟರಿ ದಾಳಿಗೆ ಟ್ರಂಪ್, ನೆತನ್ಯಾಹು ಸಜ್ಜು: ತಿರುಗೇಟು ನೀಡಿದ ಇರಾನ್! ಹೇಳಿದ್ದೇನು ಗೊತ್ತಾ?

ಪಾಕಿಸ್ತಾನದಲ್ಲಿ 'ಗುಂಡಿಟ್ಟು' ಹಿಂದೂ ರೈತನ ಕಗ್ಗೊಲೆ! ಹೈದರಾಬಾದಿನಲ್ಲಿ ಆರೋಪಿಗಳ ಬಂಧನ

SCROLL FOR NEXT