ಶೋಭಾ ಕರಂದ್ಲಾಜೆ 
ರಾಜ್ಯ

ಕರಾವಳಿ ಜಿಲ್ಲೆಗಳಲ್ಲಿ ತಾಳೆ ಎಣ್ಣೆ ಸಂಸ್ಕರಣಾ ಘಟಕ: ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ

ಕರಾವಳಿ ಜಿಲ್ಲೆಗಳಲ್ಲಿ ಶೀಘ್ರದಲ್ಲೇ ತಾಳೆ ಎಣ್ಣೆ ಸಂಸ್ಕರಣಾ ಘಟಕ ತೆರೆಯಲಾಗುತ್ತದೆ ಎಂದು ಕೇಂದ್ರ ಕೃಷಿ ಮತ್ತು ರೈತ ಕಲ್ಯಾಣ ಖಾತೆ ರಾಜ್ಯ ಸಚಿವೆ ಶೋಭಾ ಕರಂದ್ಲಾಜೆ ಹೇಳಿದ್ದಾರೆ.

ಕಲಬುರಗಿ: ಕರಾವಳಿ ಜಿಲ್ಲೆಗಳಲ್ಲಿ ಶೀಘ್ರದಲ್ಲೇ ತಾಳೆ ಎಣ್ಣೆ ಸಂಸ್ಕರಣಾ ಘಟಕ ತೆರೆಯಲಾಗುತ್ತದೆ ಎಂದು ಕೇಂದ್ರ ಕೃಷಿ ಮತ್ತು ರೈತ ಕಲ್ಯಾಣ ಖಾತೆ ರಾಜ್ಯ ಸಚಿವೆ ಶೋಭಾ ಕರಂದ್ಲಾಜೆ ಹೇಳಿದ್ದಾರೆ.

ಕಲಬುರಗಿ ನಗರದಲ್ಲಿ ನಡೆಯಲಿರುವ ಬಿಜೆಪಿ ವಿಜಯ ಸಂಕಲ್ಪ ಯಾತ್ರೆಯಲ್ಲಿ ಭಾಗವಹಿಸುವುದಕ್ಕೂ ಮುನ್ನ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, 'ಪ್ರಸ್ತುತ ದೇಶದ ಒಟ್ಟು ಬೇಡಿಕೆಯ ಶೇ 70ರಷ್ಟು ಬೇಳೆ ಕಾಳು ಹಾಗೂ ಎಣ್ಣೆಕಾಳುಗಳನ್ನು ವಿದೇಶಗಳಿಂದ ಆಮದು ಮಾಡಿಕೊಳ್ಳಲಾಗುತ್ತಿದೆ. ಇದರಲ್ಲಿ ಸ್ವಾವಲಂಬನೆ ಸಾಧಿಸಲು ಕರಾವಳಿ ಜಿಲ್ಲೆಗಳಲ್ಲಿ ತಾಳೆ ಎಣ್ಣೆ ಸಂಸ್ಕರಣಾ ‌ಘಟಕ ಆರಂಭಿಸಲು ಕ್ಯಾಂಪ್ಕೊಗೆ ಸೂಚಿಸಲಾಗಿದೆ‌ ಎಂದು ತಿಳಿಸಿದರು.

ಅಂತೆಯೇ, 'ಎಲ್ಲೆಲ್ಲಿ ಹೆಚ್ಚು ತೆಂಗು ಬೆಳೆಯಲಾಗುತ್ತದೋ ಅಲ್ಲಿ ತಾಳೆ ಮರಗಳನ್ನು ಬೆಳೆಸಲು ಅನುಕೂಲಕರ ವಾತಾವರಣ ಇರುತ್ತದೆ. ಈಶಾನ್ಯ ರಾಜ್ಯಗಳಲ್ಲಿ ಎಣ್ಣೆ ಬೀಜಗಳನ್ನು ಒದಗಿಸಲಾಗುತ್ತದೆ. ರೈತ ಉತ್ಪಾದಕ ಸಂಘ (ಎಫ್ ಪಿಒ)ಗಳನ್ನು ನೋಂದಣಿ ಮಾಡಿಕೊಂಡವರಿಗೆ ಸಂಸ್ಕರಣಾ ಘಟಕ, ಕಚೇರಿ ಸ್ಥಾಪಿಸಲು 18ರಿಂದ 20 ಲಕ್ಷ ರೂ ಸಾಲ ಸೌಲಭ್ಯ ನೀಡಲಾಗುವುದು. ಉಕ್ರೇನ್ ನಲ್ಲಿ ಯುದ್ಧ ನಡೆಯುತ್ತಿರುವುದರಿಂದ ಅಲ್ಲಿಂದ ಬರಬೇಕಿದ್ದ ಎಣ್ಣೆ ಪದಾರ್ಥಗಳು ಬರುತ್ತಿಲ್ಲ.‌ ಖಾದ್ಯ ತೈಲ ಉತ್ಪಾದನೆಯಲ್ಲಿ ಆತ್ಮ ನಿರ್ಭರ (ಸ್ವಾವಲಂಬನೆ)ವಾಗಲು ಎಣ್ಣೆ ಬೀಜಗಳ‌ ಕಿಟ್ ನೀಡಲಾಗುತ್ತಿದೆ' ಎಂದರು. 

ಬೆಳೆ ಪ್ರಮಾಣ ಕುಸಿತ
ರಾಜ್ಯದಲ್ಲಿ ಮೊದಲು 13 ಲಕ್ಷ ‌ಎಕರೆ ಪ್ರದೇಶದಲ್ಲಿ ಸೂರ್ಯಕಾಂತಿ, ಕುಸುಬೆ, ಸಾಸಿವೆಯಂತಹ ಎಣ್ಣೆ ಕಾಳುಗಳನ್ನು ಬೆಳೆಯುತ್ತಿದ್ದರು. ಈಗ ಆ ಪ್ರಮಾಣ 3 ಲಕ್ಷ ಎಕರೆಗೆ ಕುಸಿದಿದೆ. ರೈತರಿಗೆ ಅಗತ್ಯವಿರುವ ಎಲ್ಲ ನೆರವು ನೀಡುವ ಮೂಲಕ ಉತ್ಪಾದನಾ ಕ್ಷೇತ್ರವನ್ನು ಹೆಚ್ಚಿಸಲಾಗುವುದು ಎಂದು ಶೋಭಾ ಕರಂದ್ಲಾಜೆ ತಿಳಿಸಿದರು.
 

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಅಯೋಧ್ಯೆ ರಾಮ ಮಂದಿರ ನಿರ್ಮಾಣ ಪೂರ್ಣ: ರಾಮ-ಸೀತೆ ವಿವಾಹ ಪರ್ವದಂದೇ ದೇಗುಲದ ಶಿಖರದ ಮೇಲೆ ಧ್ವಜಾರೋಹಣ ನೆರವೇರಿಸಿದ ಪ್ರಧಾನಿ ಮೋದಿ

ಭ್ರಷ್ಟರಿಗೆ ಬೆಳ್ಳಂಬೆಳಗ್ಗೆ ಲೋಕಾಯುಕ್ತ ಶಾಕ್: ಏಕ ಕಾಲದಲ್ಲಿ ರಾಜ್ಯದ 10 ಕಡೆ ದಾಳಿ- ಪರಿಶೀಲನೆ

ರಾಜ್ಯ ಕಾಂಗ್ರೆಸ್ ನಲ್ಲಿ ಸಿಎಂ ಗದ್ದುಗೆ ಗುದ್ದಾಟ: 'ಹೈಕಮಾಂಡ್' ನತ್ತ ಎಲ್ಲರ ಚಿತ್ತ, ಮುಂದೇನು?

ಕೇರಳ: ರೂ. 50 ಲಕ್ಷ ಮೌಲ್ಯದ 'ಐಷಾರಾಮಿ ಬೈಕ್' ಬೇಕೆಂದು ಗಲಾಟೆ, ತಂದೆಯಿಂದ ಹಲ್ಲೆಗೊಳಗಾದ ಯುವಕ ಸಾವು!

Kabaddi World Cup 2025: ಭಾರತದ ಸಿಂಹಿಣಿಯರ ಮುಡಿಗೇರಿದ ವಿಶ್ವಕಪ್‌ ಕಿರೀಟ, ಸತತ 2ನೇ ಬಾರಿಗೆ ಪ್ರಶಸ್ತಿ ಗೆದ್ದ ಭಾರತ

SCROLL FOR NEXT