ದಲಿತರ ಮನೆಗೆ ಹಚ್ಚಿದ ಬೆಂಕಿ ನಂದಿಸುತ್ತಿರುವ ಗ್ರಾಮಸ್ಥರು 
ರಾಜ್ಯ

ಹಾವೇರಿ: ದಲಿತ ಕುಟುಂಬಗಳ ಮನೆಗಳಿಗೆ ಬೆಂಕಿ ಹಚ್ಚಿದ 25 ಮಂದಿ ವಿರುದ್ಧ ಪ್ರಕರಣ ದಾಖಲು

ರಾಣೇಬೆನ್ನೂರು ತಾಲೂಕಿನ ನಂದಿಹಳ್ಳಿ ಗ್ರಾಮದ ದಲಿತ ಕುಟುಂಬಗಳ ಎರಡು ಮನೆಗಳಿಗೆ ಬೆಂಕಿ ಹಚ್ಚಿದ ಆರೋಪದ ಮೇಲೆ ಹಾವೇರಿ ಪೊಲೀಸರು 25 ಜನರ ವಿರುದ್ಧ ಪ್ರಕರಣ ದಾಖಲಿಸಿಕೊಂಡಿದ್ದಾರೆ.

ಹುಬ್ಬಳ್ಳಿ: ರಾಣೇಬೆನ್ನೂರು ತಾಲೂಕಿನ ನಂದಿಹಳ್ಳಿ ಗ್ರಾಮದ ದಲಿತ ಕುಟುಂಬಗಳ ಎರಡು ಮನೆಗಳಿಗೆ ಬೆಂಕಿ ಹಚ್ಚಿದ ಆರೋಪದ ಮೇಲೆ ಹಾವೇರಿ ಪೊಲೀಸರು 25 ಜನರ ವಿರುದ್ಧ ಪ್ರಕರಣ ದಾಖಲಿಸಿಕೊಂಡಿದ್ದಾರೆ.

ಭಾನುವಾರ ತಡರಾತ್ರಿ ಈ ಘಟನೆ ನಡೆದಿದ್ದು, ಅಕ್ಕ ಪಕ್ಕದಲ್ಲಿರುವ ಎರಡು ಮನೆಗಳಲ್ಲಿ 12 ಮಂದಿ ಕುಟುಂಬ ಸದಸ್ಯರು ಮಲಗಿದ್ದರು. ಗ್ರಾಮಸ್ಥರ ಗುಂಪು ದಲಿತ ಕಾಲೋನಿಯ ಮನೆಗಳಿಗೆ ನುಗ್ಗಿ ಪೆಟ್ರೋಲ್, ಕಟ್ಟಿಗೆ ಎಸೆಯಲು ಆರಂಭಿಸಿತು ಎಂದು ಪ್ರತ್ಯಕ್ಷದರ್ಶಿಗಳು ತಿಳಿಸಿದ್ದಾರೆ.

ಆರೋಪಿಗಳು ಮೊದಲ ಮನೆಯನ್ನು ಸುಟ್ಟು ಹಾಕಿದರು. ಹೊಗೆಯನ್ನು ಗಮನಿಸಿದ ಕುಟುಂಬಸ್ಥರು ಮನೆಯಿಂದ ಹೊರಬಂದು ಪ್ರಾಣ ರಕ್ಷಣೆಗಾಗಿ ಗ್ರಾಮದಿಂದ ಓಡಿ  ಹೋದರು. ಇದೀಗ ಜಿಲ್ಲೆಯ ವಿವಿಧ ಗ್ರಾಮಗಳ ಸಂಬಂಧಿಕರ ಮನೆಗಳಲ್ಲಿ ನೆಲೆಸಿದ್ದಾರೆ.  ಹಾವೇರಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ  ಅವರ  ತವರು ಜಿಲ್ಲೆಯಾಗಿದ್ದು ಪೊಲೀಸರು ತನಿಖೆ ಚುರುಕುಗೊಳಿಸಿದ್ದಾರೆ.

ಈ ಬಗ್ಗೆ ಪೊಲೀಸರು ತನಿಖೆ ಆರಂಭಿಸಿದ್ದಾರೆ. ಪ್ರಕರಣ ದಾಖಲಿಸಿಕೊಂಡಿರುವ ಹಾವೇರಿಯ ಹಿರಿಯ ಪೊಲೀಸ್ ಅಧಿಕಾರಿಗಳು ಇದೀಗ ರಾಣೆಬೆನ್ನೂರಿಗೆ ಬಂದಿಳಿದಿದ್ದಾರೆ. ಈವರೆಗೆ ಇಬ್ಬರು ಶರಣಾಗಿದ್ದು, ಪೊಲೀಸರು ವಿಚಾರಣೆ ನಡೆಸುತ್ತಿದ್ದಾರೆ.

ಮನೆಗೆ ಬೆಂಕಿ ಹಚ್ಚಿದ ಘಟನೆಯಲ್ಲಿ ಭಾಗಿಯಾದ ಗ್ರಾಮಸ್ಥರ ವಿರುದ್ಧ ಪ್ರಕರಣಗಳನ್ನು ದಾಖಲಿಸಲಾಗಿದೆ ಎಂದು ಹಿರಿಯ ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ. ಎಸ್‌ಸಿ ಎಸ್‌ಟಿ ದೌರ್ಜನ್ಯ ತಡೆ ಕಾಯ್ದೆ ಅಡಿ ಪ್ರಕರಣಗಳು ದಾಖಲಾಗಿವೆ.

ಬಹುತೇಕ ಆರೋಪಿಗಳು ತಲೆಮರೆಸಿಕೊಂಡಿದ್ದು, ಪೊಲೀಸರು ಇನ್ನೂ ತಲೆಮರೆಸಿಕೊಂಡಿರುವ ಆರೋಪಿಗಳ ಬಗ್ಗೆ ಮಾಹಿತಿ ಸಂಗ್ರಹಿಸಲು ಪ್ರಾರಂಭಿಸಿದ್ದಾರೆ. ಇನ್ನೂ ಹಲವು ಮಂದಿ ಪೊಲೀಸರಿಗೆ ಶರಣಾಗುವ ಸಾಧ್ಯತೆಯಿದೆ ಎಂದು ಪೊಲೀಸ್ ಅಧಿಕಾರಿಗಳು ತಿಳಿಸಿದ್ದಾರೆ.

ಪ್ರಾಥಮಿಕ ತನಿಖೆಯ ಪ್ರಕಾರ, ಭಾನುವಾರ ಗ್ರಾಮದ ದಲಿತ ಕಾಲೋನಿಯಿಂದ ಧಾರ್ಮಿಕ ಮೆರವಣಿಗೆ ಸಾಗುತ್ತಿದ್ದಾಗ ಜಗಳ ಪ್ರಾರಂಭವಾಯಿತು. ದ್ಯಾಮವ್ವ ದೇವಿಯ ಗ್ರಾಮ ಜಾತ್ರೆ ಇದ್ದು, ಸಂಜೆ ವೇಳೆಗೆ ಮೆರವಣಿಗೆ ಏರ್ಪಡಿಸಲಾಗಿತ್ತು.

ದಲಿತ ಕಾಲೋನಿಯಲ್ಲಿ ಮೆರವಣಿಗೆ ಸಾಗುತ್ತಿದ್ದಾಗ ಚಿಕ್ಕಮಕ್ಕಳು ಹಾಗೂ ಯುವಕರು ಮೆರವಣಿಗೆಯ ಜತೆಗೆ ಕುಣಿಯಲು ಮುಂದಾದಾಗ ಗ್ರಾಮಸ್ಥರು ಆಕ್ಷೇಪ ವ್ಯಕ್ತಪಡಿಸಿ, ಜಾತ್ರೆಗೆ  ದಲಿತ ಕುಟುಂಬಗಳು ಸೇರಬಾರದು ಎಂದು ಹೇಳಿದರು. ಇದರಿಂದ  ಎರಡೂ ಕಡೆಯವರಿಗೆ ಉಂಟಾದ ಜಗಳದಿಂದಾಗಿ, ರಾತ್ರಿಯಲ್ಲಿ ಆರೋಪಿ ಗ್ರಾಮಸ್ಥರು  ದಲಿತರ ಮನೆಯನ್ನು ಸುಡಲು ಪ್ರಯತ್ನಿಸಿದರು. ನೆರೆಹೊರೆಯವರು ಸಮಯಕ್ಕೆ ಬಂದು ಯಾವುದೇ ದುರಂತದ ಮೊದಲು ಬೆಂಕಿಯನ್ನು ನಂದಿಸಿದರು ಎಂದು ಪೊಲೀಸ್ ಅಧಿಕಾರಿಗಳು ತಿಳಿಸಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಜೂನ್ 30ರೊಳಗೆ ಮುಗಿಸಿ: ರಾಜ್ಯ ಸರ್ಕಾರಕ್ಕೆ 'ಸುಪ್ರೀಂ' ಗಡುವು

'ಆ ದೇಶಕ್ಕೂ ನಾನೇ 'ಹಂಗಾಮಿ' ಸರ್ವೋಚ್ಛ ನಾಯಕ': Donald Trump ಘೋಷಣೆ, ಬೆಚ್ಚಿಬಿದ್ದ ವೆನೆಜುವೆಲಾ!

ಕ್ರಿಕೆಟ್ ಇತಿಹಾಸದಲ್ಲೇ ಮೊದಲು: ಅಂತಾರಾಷ್ಟ್ರೀಯ ಕ್ರಿಕೆಟ್ ಲೀಗ್ ನಲ್ಲಿ ಜೊತೆಯಾಗಿ ಕಣಕ್ಕಿಳಿದ ಅಪ್ಪ-ಮಗ.. ಯಾರಿವರು?

PSLV-C62 ಮಿಷನ್ ವಿಫಲ: ಕೊನೆಯ ಹಂತದಲ್ಲಿ ಎದುರಾದ ಸಮಸ್ಯೆ, ISROಗೆ ಹಿನ್ನಡೆ

ಇತಿಹಾಸ ಕಲಿಯಬೇಕಿದ್ದರೆ ಕಾಲೇಜಿಗೆ ಹೋಗುತ್ತಾರೆ, ನಿಮ್ಮ ಬೋಧನೆಯ ಅಗತ್ಯವಿಲ್ಲ: ಪ್ರಧಾನಿ ಮೋದಿ ವಿರುದ್ಧ ಪ್ರಿಯಾಂಕ್ ಖರ್ಗೆ ವಾಗ್ದಾಳಿ

SCROLL FOR NEXT