ನಟ ಚೇತನ್, ಸಂಸದ ನಳಿನ್ ಕುಮಾರ್ ಕಟೀಲ್ ಸಾಂದರ್ಭಿಕ ಚಿತ್ರ 
ರಾಜ್ಯ

ಮಕ್ಕಳಾಗದ ಕಾರಣ ರಾಹುಲ್ ಗಾಂಧಿ ಮದುವೆಯಾಗುತ್ತಿಲ್ಲ: ಕಟೀಲ್ ಹೇಳಿಕೆಗೆ ನಟ ಚೇತನ್ ಆಕ್ಷೇಪ

ರಾಜ್ಯ ವಿಧಾನಸಭಾ ಚುನಾವಣೆ ಸನ್ನಿಹದಲ್ಲಿರುವಂತೆಯೇ, ಕೆಲ ರಾಜಕೀಯ ಪಕ್ಷಗಳ ನಾಯಕರು ನೀಡುವ ಹೇಳಿಕೆ ವಿವಾದ ಹಾಗೂ ಆಕ್ಷೇಪಕ್ಕೆ ಎಡೆ ಮಾಡಿಕೊಡುತ್ತಿದೆ. ರಾಹುಲ್ ಗಾಂಧಿ ಕುರಿತು ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ನೀಡಿರುವ  ಹೇಳಿಕೆ ಕೂಡಾ ಸಾರ್ವಜನಿಕ ವಲಯದಲ್ಲಿ ಟೀಕೆಗೆ ಗುರಿಯಾಗಿದೆ. 

ಬೆಂಗಳೂರು: ರಾಜ್ಯ ವಿಧಾನಸಭಾ ಚುನಾವಣೆ ಸನ್ನಿಹದಲ್ಲಿರುವಂತೆಯೇ, ಕೆಲ ರಾಜಕೀಯ ಪಕ್ಷಗಳ ನಾಯಕರು ನೀಡುವ ಹೇಳಿಕೆ ವಿವಾದ ಹಾಗೂ ಆಕ್ಷೇಪಕ್ಕೆ ಎಡೆ ಮಾಡಿಕೊಡುತ್ತಿದೆ. ರಾಹುಲ್ ಗಾಂಧಿ ಕುರಿತು ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ನೀಡಿರುವ  ಹೇಳಿಕೆ ಕೂಡಾ ಸಾರ್ವಜನಿಕ ವಲಯದಲ್ಲಿ ಟೀಕೆಗೆ ಗುರಿಯಾಗಿದೆ. 

ಸಾಗರದಲ್ಲಿ ಸೋಮವಾರ ಮಾತನಾಡಿದ್ದ ಕಟೀಲ್ , ಕೊರೊನಾ ಲಸಿಕೆ ಹಾಕಿಸಿಕೊಂಡರೆ ಮಕ್ಕಳಾಗುವುದಿಲ್ಲ ಎಂದು ಸಿದ್ದರಾಮಯ್ಯ ಜನರಿಗೆ ತಪ್ಪು ಮಾಹಿತಿ ನೀಡಿದ್ದರು. ಆದರೂ, ಕಾಂಗ್ರೆಸ್ ನಾಯಕರು ಕೊರೊನಾ ಹೆದರಿ ಲಸಿಕೆ ಹಾಕಿಸಿಕೊಂಡರು. ಲಸಿಕೆ ಪಡೆದರೆ ಮಕ್ಕಳಾಗುವುದಿಲ್ಲ ಎಂಬ ಸಿದ್ದರಾಮಯ್ಯ ಮಾತು ಕೇಳಿ ರಾಹುಲ್ ಗಾಂಧಿ ಮದುವೆ ಆಗುತ್ತಿಲ್ಲ ಎಂದು ವ್ಯಂಗ್ಯ ವಾಡಿದ್ದರು.

ಮಕ್ಕಳಾಗದ ಕಾರಣ ರಾಹುಲ್ ಗಾಂಧಿ ಮದುವೆಯಾಗುತ್ತಿಲ್ಲ ಎಂಬ  ನಳಿನ್ ಕುಮಾರ್ ಕಟೀಲ್ ಅವರ ಹೇಳಿಕೆಗೆ ನಟ ಚೇತನ್ ಅಹಿಂಸಾ ತೀವ್ರ ಆಕ್ಷೇಪ ವ್ಯಕ್ತಪಡಿಸಿದ್ದಾರೆ. ಈ ಕುರಿತು ಟ್ವೀಟ್ ಮಾಡಿರುವ ನಟ ಚೇತನ್, ಮಕ್ಕಳಾಗದ ಕಾರಣ ರಾಹುಲ್ ಗಾಂಧಿ ಮದುವೆಯಾಗುತ್ತಿಲ್ಲ ಎಂದು ಬಿಜೆಪಿ ಸಂಸದ ಕಟೀಲ್ ಹೇಳಿಕೆ ನೀಡಿದ್ದಾರೆ. ಇದು ಅತ್ಯಂತ ಕೆಳಮಟ್ಟದ್ದು ಮತ್ತು ತಾರ್ಕಿಕವಾಗಿ ದೋಷಪೂರಿತ ಹೇಳಿಕೆ ಎಂದಿದ್ದಾರೆ. ರಾಹುಲ್ ಗಾಂಧಿ ಅವರು ಪುರುಷನಿಗಿಂತ ಕಡಿಮೆ ಎಂದು ಬಿಂಬಿಸುವ ಪುರುಷ ಪ್ರಧಾನದ ಪ್ರಚೋದನೆಯು ಹಿಮ್ಮೆಟಿಸುವಿಕೆ ಮತ್ತು ಅನುಚಿತವಾಗಿದೆ ಎಂದು ಹೇಳಿದ್ದಾರೆ.

ಎರಡನೇಯದಾಗಿ ಮಕ್ಕಳನ್ನು ಹೊಂದಲೆಂದೇ ಮದುವೆಯಾಗಬೇಕೇ ಎಂದು ನಳೀನ್ ಕುಮಾರ್ ಕಟೀಲ್ ಅವರನ್ನು ಚೇತನ್ ಪ್ರಶ್ನಿಸಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ನನ್ನ-ಕಾಂಗ್ರೆಸ್ ಮಧ್ಯೆ ಭಕ್ತ- ಭಗವಂತನ ಸಂಬಂಧ ಇದೆ, RSS ಗೀತೆ ಹಾಡಿದ್ದಕ್ಕೆ ನೋವಾಗಿದ್ದರೆ ಕ್ಷಮೆ ಕೇಳುತ್ತೇನೆ: ಡಿಕೆ ಶಿವಕುಮಾರ್

ಭಾರತದ ಮೇಲೆ ಶೇ. 50 ರಷ್ಟು ಸುಂಕ ನಾಳೆ ಜಾರಿ, ಅಮೆರಿಕ ಕರಡು ಸೂಚನೆ; ಔಷಧ, ಎಲೆಕ್ಟ್ರಾನಿಕ್ಸ್‌ ವಸ್ತುಗಳಿಗೆ ವಿನಾಯಿತಿ

ಪದಕ ಹಾಕಿಸಿಕೊಳ್ಳಲು ನಿರಾಕರಿಸಿದ DMK ಸಚಿವನ ಪುತ್ರ, BJP ನಾಯಕ Annamalai ಹೇಳಿದ್ದೇನು? Video

'ಶಾಂತಿ ಬೇಕಾದರೆ ಯುದ್ಧಕ್ಕೆ ಸಿದ್ಧರಾಗಿ.. Sudarshan Chakra ವಾಯುರಕ್ಷಣಾ ವ್ಯವಸ್ಥೆಗೆ ಮೂರೂ ಸೇನೆಗಳ ಬೃಹತ್ ಪ್ರಯತ್ನ ಬೇಕು': CDS Chauhan

ಧರ್ಮಸ್ಥಳ ಬುರುಡೆ ಕೇಸು: ಮಹೇಶ್ ತಿಮರೋಡಿ ನಿವಾಸದಲ್ಲಿ ಆರೋಪಿ ಚಿನ್ನಯ್ಯನ ಮೊಬೈಲ್ ಪತ್ತೆ

SCROLL FOR NEXT