ಮಾಡಾಳ್ ವಿರೂಪಾಕ್ಷಪ್ಪ ಮತ್ತು ಮಾಡಾಳ್ ಪ್ರಶಾಂತ್(ಸಂಗ್ರಹ ಚಿತ್ರ) 
ರಾಜ್ಯ

ಮಾಡಾಳ್ ವಿರೂಪಾಕ್ಷಪ್ಪ ಹುಟ್ಟುತ್ತಲೇ ಆಗರ್ಭ ಶ್ರೀಮಂತ, ಇದು ಕಾಂಗ್ರೆಸ್ ಷಡ್ಯಂತ್ರ: ಬೆಂಬಲಿಗರ ವಾದ; ತನಿಖಾಧಿಕಾರಿ ಬದಲಾವಣೆ

ದಾವಣಗೆರೆ ಜಿಲ್ಲೆಯ ಚನ್ನಗಿರಿ ಕ್ಷೇತ್ರದ ಬಿಜೆಪಿ ಶಾಸಕ ಮಾಡಾಳ್​​​​​ ವಿರೂಪಾಕ್ಷಪ್ಪ ಪುತ್ರ ಮಾಡಾಳ್ ಪ್ರಶಾಂತ್ ಲಂಚ ಪ್ರಕರಣದಲ್ಲಿ ಲೋಕಾಯುಕ್ತ ಪೊಲೀಸರ ಬಲೆಗೆ ಬಿದ್ದು ಜೈಲುಪಾಲಾಗಿರುವಾಗಲೇ ಇಂದು ಅವರ ಜಾಮೀನು ಭವಿಷ್ಯ ಹೈಕೋರ್ಟ್ ನಲ್ಲಿ ನಿರ್ಧಾರವಾಗಲಿದೆ.

ಬೆಂಗಳೂರು: ದಾವಣಗೆರೆ ಜಿಲ್ಲೆಯ ಚನ್ನಗಿರಿ ಕ್ಷೇತ್ರದ ಬಿಜೆಪಿ ಶಾಸಕ ಮಾಡಾಳ್​​​​​ ವಿರೂಪಾಕ್ಷಪ್ಪ ಪುತ್ರ ಮಾಡಾಳ್ ಪ್ರಶಾಂತ್ ಲಂಚ ಪ್ರಕರಣದಲ್ಲಿ ಲೋಕಾಯುಕ್ತ ಪೊಲೀಸರ ಬಲೆಗೆ ಬಿದ್ದು ಜೈಲುಪಾಲಾಗಿರುವಾಗಲೇ ಇಂದು ಅವರ ಜಾಮೀನು ಭವಿಷ್ಯ ಹೈಕೋರ್ಟ್ ನಲ್ಲಿ ನಿರ್ಧಾರವಾಗಲಿದೆ. ಅವರ ನಿವಾಸ ಮತ್ತು ಕಚೇರಿಯಲ್ಲಿ ಸಿಕ್ಕಿದ 8 ಕೋಟಿಗೂ ಅಧಿಕ ಲೆಕ್ಕ ಸಿಗದ ಹಣದ ಹಿನ್ನೆಲೆಯಲ್ಲಿ ಶಾಸಕ ಮತ್ತು ಅವರ ಪುತ್ರನ ವಿರುದ್ಧ ಕೇಸು ದಾಖಲಾಗಿದೆ.

ನಾಪತ್ತೆಯಾಗಿರುವ ಶಾಸಕ ಮಾಡಾಳ್ ವಿರೂಪಾಕ್ಷಪ್ಪ ಹುಡುಕಾಟ ಮುಂದುವರಿದಿದ್ದು, ನಿರೀಕ್ಷಣಾ ಜಾಮೀನು ಕೋರಿ ಅಜ್ಞಾತ ಸ್ಥಳದಿಂದ ಹೈಕೋರ್ಟ್ ಗೆ ಅರ್ಜಿ ಸಲ್ಲಿಸಿದ್ದಾರೆ. ಪುತ್ರ ಪ್ರಶಾಂತ್​​​​​ ಟ್ರ್ಯಾಪ್​​ ಕೇಸ್​ನಲ್ಲಿ ಅಪ್ಪನಿಗೆ ಅರೆಸ್ಟ್ ಸಂಕಷ್ಟ ಎದುರಾಗಿದ್ದು, ಬಂಧನ ಭೀತಿಯಿಂದ ತಲೆಮರೆಸಿಕೊಂಡಿದ್ದಾರೆ. 

ಇಂದು ಹೈಕೋರ್ಟ್​ನಲ್ಲಿ ಎರಡು ಪ್ರತ್ಯೇಕ ಅರ್ಜಿಗಳ ವಿಚಾರಣೆ ನಡೆಸಲಾಗುತ್ತದೆ. ನಿರೀಕ್ಷಣಾ ಜಾಮೀನು ಹಾಗು FIR ರದ್ದು ಕೋರಿ ವಿರೂಪಾಕ್ಷಪ್ಪ ಅರ್ಜಿ ಸಲ್ಲಿಸಿದ್ದಾರೆ. 

ಪ್ರಕರಣದ A-1 ಆರೋಪಿ ಚನ್ನಗಿರಿ ಶಾಸಕ ಮಾಡಾಳ್ ವಿರೂಪಾಕ್ಷಪ್ಪ ಆಗಿದ್ದಾರೆ. ವಿರೂಪಾಕ್ಷಪ್ಪ ಪರ ಸುಪ್ರೀಂ ಕೋರ್ಟ್ ವಕೀಲ ಸಂದೀಪ್ ಪಾಟೀಲ್ ವಾದ ಮಾಡಲಿದ್ದಾರೆ. ಲೋಕಾಯುಕ್ತ ಪರ SPP ಬಿ.ಬಿ‌ ಪಾಟೀಲ್ ಪ್ರತಿವಾದ ನಡೆಸಲಿದ್ದಾರೆ. ಈಗಾಗಲೇ ವಿರೂಪಾಕ್ಷಪ್ಪಗೆ CRPC-41(A)ರಡಿ ಲೋಕಾ ನೋಟಿಸ್  ನೀಡಿದೆ. ವಿರೂಪಾಕ್ಷಪ್ಪಗೆ ಬೇಲ್​​ ನೀಡದಂತೆ ಪ್ರಬಲ ವಾದಕ್ಕೆ ಲೋಕಾ ತಯಾರಿ ನಡೆಸಿದೆ. ಮಾಡಾಳ್ ಪರ ವಕೀಲರು ತುರ್ತು ವಿಚಾರಣೆ ನಡೆಸಲು ಅರ್ಜಿ ಸಲ್ಲಿಸಿದ್ದಾರೆ. 

ತನಿಖಾಧಿಕಾರಿಗಳ ಬದಲಾವಣೆ: ಮಾಡಾಳ್​​​ ಪುತ್ರ ಪ್ರಶಾಂತ್​ ಟ್ರ್ಯಾಪ್​​ ಪ್ರಕರಣದಲ್ಲಿ ತನಿಖಾಧಿಕಾರಿಗಳ ಬದಲಾವಣೆಯಾಗಿದೆ. ಟ್ರ್ಯಾಪ್​​ ತನಿಖಾಧಿಕಾರಿಗಳಾದ ಡಿವೈಎಸ್ಪಿ ಪ್ರಮೋದ್​ ಕುಮಾರ್​​, ಇನ್ಸ್​ಪೆಕ್ಟರ್​​​​​​​​ ಕುಮಾರಸ್ವಾಮಿ ಚೇಂಜ್​​ ಆಗಿದ್ದು, ನೂತನ ತನಿಖಾಧಿಕಾರಿಯಾಗಿ ಡಿವೈಎಸ್ಪಿ ಆಂಥೋಣಿ ಜಾನ್​​​​, ಇನ್ಸ್​ಪೆಕ್ಟರ್​​​​ ಬಾಲಾಜಿ ಬಾಬು ತನಿಖಾಧಿಕಾರಿಗಳಾಗಿ ನೇಮಕವಾಗಿದ್ದಾರೆ. ತನಿಖಾಧಿಕಾರಿಗಳ ಬದಲಾವಣೆ ಭಾರೀ ಕುತೂಹಲ ಕೆರಳಿಸಿದೆ.

ವಿರೂಪಾಕ್ಷಪ್ಪ ಹುಟ್ಟಾ ಆಗರ್ಭ ಶ್ರೀಮಂತ: ಈ ಮಧ್ಯೆ ದಾವಣಗೆರೆಯ ಚನ್ನಗಿರಿಯಲ್ಲಿ ವಿರೂಪಾಕ್ಷಪ್ಪನವರ ಬೆಂಬಲಿಗರ ಪ್ರತಿಭಟನೆ, ತಮ್ಮ ನಾಯಕನನ್ನು ರಕ್ಷಿಸುವ ಪ್ರಯತ್ನ ಮುಂದುವರಿದಿದೆ. ಲಂಚ, ಭ್ರಷ್ಟಾಚಾರ ಪ್ರಕರಣದಲ್ಲಿ ಮಾಡಾಳ್ ಸಿಲುಕಿರುವುದರಿಂದ ಚನ್ನಗಿರಿಯಲ್ಲಿ ಈ ಬಾರಿ ಬಿಜೆಪಿಯ ಟಿಕೆಟ್ ಕೈತಪ್ಪಿ ಬೇರೆಯವರಿಗೆ ಬಿಜೆಪಿ ಹೈಕಮಾಂಡ್ ಮಣೆ ಹಾಕಲಿದೆ ಎಂಬ ಮಾತುಗಳು ದಟ್ಟವಾಗಿ ಕೇಳಿಬರುತ್ತಿವೆ.

ಮಾಡಾಳ್​​ಗೆ ಟಿಕೆಟ್​ ತಪ್ಪುತ್ತೆ ಎನ್ನುವ ಹಿನ್ನೆಲೆಯಲ್ಲಿ ನಿನ್ನೆಯಿಂದ ಕ್ಷೇತ್ರದಲ್ಲಿ ಬೆಂಬಲಿಗರು ಮಹತ್ವದ ಸಭೆ ನಡೆಸುತ್ತಿದ್ದು, ಬಿಜೆಪಿ ಕಾರ್ಯಕರ್ತರು ಹಾಗೂ ಮಾಡಾಳ್​​ ಅಭಿಮಾನಿಗಳೂ ನಿನ್ನೆ ಭಾಗಿಯಾಗಿದ್ದರು. ಚನ್ನಗಿರಿ ಬಿಜೆಪಿ ಕಚೇರಿಯಲ್ಲಿ ನಿನ್ನೆ ನಡೆದಿರುವ ಸಭೆಯಾಗಿದೆ. ಮಾಡಾಳ್​ ಪರ ನಿಲ್ಲಬೇಕು ಎಂದು ಕೆಲವು ಬೆಂಬಲಿಗರು ವಾದ ನಡೆಸಿದ್ದಾರೆ.

ಎಲೆಕ್ಷನ್​​​​ ಹೊತ್ತಿನಲ್ಲಿ ಸಂಕಷ್ಟಕ್ಕೆ ಮಾಡಾಳ್​​​ ಸಿಲುಕಿದ್ದಾರೆ. ಮಾಡಾಳ್ ವಿರೂಪಾಕ್ಷಪ್ಪ ಹುಟ್ಟುತ್ತಲೇ ಆಗರ್ಭ ಶ್ರೀಮಂತರು, ಅಡಿಕೆ ಸೇರಿದಂತೆ ಹಲವಾರು ವ್ಯವಹಾರಗಳಿವೆ, ಇದು ಕಾಂಗ್ರೆಸ್ ಷಡ್ಯಂತ್ರ ಎಂದು ಕೆಲವು ಬೆಂಬಲಿಗರ ವಾದ ನಡೆಸಿದ್ದಾರೆ.

ಮತ್ತೊಂದು ಕಡೆ ಮಾಡಾಳ್​​ಗೆ ಟಿಕೆಟ್​ ತಪ್ಪಿದರೆ ಕಣಕ್ಕಿಳಿಯಲು ಕೆಲವರ ತಯಾರಿ ನಡೆಸಿದ್ದು, ಸ್ಥಳೀಯ ಮುಖಂಡರು ಈಗಾಗಲೇ ಕ್ಷೇತ್ರದ ಹಲವು ಭಾಗದಲ್ಲಿ ಸಂಚರಿಸುತ್ತಿದ್ದಾರೆ. ಚನ್ನಗಿರಿ ಬಿಜೆಪಿ ಟಿಕೆಟ್​ ಭಾರೀ ಕುತೂಹಲಕ್ಕೆ ಕಾರಣವಾಗುತ್ತಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಜಮ್ಮುವಿನಾದ್ಯಂತ ಭಾರೀ ಮಳೆ: ಪ್ರವಾಹ, ಭೂಕುಸಿತದಿಂದ ಮೂವರು ಸಾವು; ಕೊಚ್ಚಿ ಹೋದ ಸೇತುವೆ; Video

Indian Navyಗೆ ಮತ್ತಷ್ಟು ಬಲ: INS Udaygiri, INS Himgiri ಯುದ್ಧನೌಕೆಗಳು ಸೇರ್ಪಡೆ!

ಬಿಹಾರ: ಇನ್ನು 40-50 ವರ್ಷ ಅಧಿಕಾರದಲ್ಲಿ ಇರ್ತೀವಿ ಅಂತಾ ಅಮಿತ್ ಶಾ ಗೆ ಹೇಗೆ ಗೊತ್ತು? ರಾಹುಲ್ ಗಾಂಧಿ

ನನ್ನ-ಕಾಂಗ್ರೆಸ್ ಮಧ್ಯೆ ಭಕ್ತ-ಭಗವಂತನ ಸಂಬಂಧ ಇದೆ; RSS ಗೀತೆ ಹಾಡಿದ್ದಕ್ಕೆ ನೋವಾಗಿದ್ದರೆ ಕ್ಷಮೆ ಕೇಳುತ್ತೇನೆ: ಡಿ.ಕೆ ಶಿವಕುಮಾರ್; Video

Tariff ಬೆನ್ನಲ್ಲೇ ಅಮೆರಿಕ ಅಧ್ಯಕ್ಷರಿಗೆ ಯುದ್ಧೋನ್ಮಾದ: "ಯುದ್ಧ ಇಲಾಖೆ" ಬಗ್ಗೆ ಟ್ರಂಪ್ ಒಲವು!

SCROLL FOR NEXT