ಸಂಗ್ರಹ ಚಿತ್ರ 
ರಾಜ್ಯ

ಕರ್ನಾಟಕದೊಂದಿಗೆ ಕೆಲಸ ಮಾಡಲು ಸಿದ್ಧ: ಗೊಂದಲಗಳಿಗೆ ತೆರೆ ಎಳೆದ ಫಾಕ್ಸ್‌ಕಾನ್

ಕರ್ನಾಟಕದಲ್ಲಿ ಐಫೋನ್‌ ಉತ್ಪಾದನಾ ಘಟಕವನ್ನು ಸ್ಥಾಪಿಸಿ ಒಂದು ಲಕ್ಷ ಉದ್ಯೋಗ ಸೃಷ್ಟಿಯಾಗುವ ವಿಚಾರ ಸಂಬಂಧ ಎದ್ದಿದ್ದ ಗೊಂದಲಗಳಿಗೆ ಫಾಕ್ಸ್‌ಕಾನ್ ತೆರೆ ಎಳೆದಿದೆ.

ಬೆಂಗಳೂರು: ಕರ್ನಾಟಕದಲ್ಲಿ ಐಫೋನ್‌ ಉತ್ಪಾದನಾ ಘಟಕವನ್ನು ಸ್ಥಾಪಿಸಿ ಒಂದು ಲಕ್ಷ ಉದ್ಯೋಗ ಸೃಷ್ಟಿಯಾಗುವ ವಿಚಾರ ಸಂಬಂಧ ಎದ್ದಿದ್ದ ಗೊಂದಲಗಳಿಗೆ ಫಾಕ್ಸ್‌ಕಾನ್ ತೆರೆ ಎಳೆದಿದೆ.

ಕರ್ನಾಟಕದೊಂದಿಗೆ ಕೆಲಸ ಮಾಡಲು ಸಿದ್ಧರಿದ್ದೇವೆ ಎಂದು ಫಾಕ್ಸ್‌ಕಾನ್ ಹೇಳಿದ್ದು, ಈ ಸಂಬಂಧ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರಿಗೆ ಪತ್ರವೊಂದನ್ನು ಬರೆದಿದೆ.

ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಎರಡು ಪುಟಗಳ ಪತ್ರ ಬರೆದಿರುವ ಫಾಕ್ಸ್‌ಕಾನ್ ಅಧ್ಯಕ್ಷ ಯಂಗ್ ಲಿಯು, ಬೆಂಗಳೂರಿನಲ್ಲಿ ‘ಪ್ರಾಜೆಕ್ಟ್ ಎಲಿಫೆಂಟ್’ ಅನ್ನು ಯಶಸ್ವಿಯಾಗಿ ಆರಂಭಿಸುವುದಾಗಿ ಹೇಳಿದ್ದಾರೆ. ಈ ಮೂಲಕ ಒಪ್ಪಂದದ ಬಗೆಗಿನ ಗೊಂದಲಗಳಿಗೆ ತೆರೆ ಎಳೆದಿದ್ದಾರೆ.

ಈ ಯೋಜನೆಗೆ ನಿಮ್ಮ ರಾಜ್ಯವನ್ನು ಸಂಭಾವ್ಯ ಹೂಡಿಕೆಯ ತಾಣವಾಗಿ ಪರಿಗಣಿಸುವುದರಿಂದ, ಯಾಂತ್ರಿಕ/ನಿಖರವಾದ ಯಂತ್ರೋಪಕರಣಗಳು, ಕೆ ಎಲೆಕ್ಟ್ರಿಕ್ ವಾಹನ, ಐಸಿ ವಿನ್ಯಾಸ ಮತ್ತು ಸೆಮಿಕಂಡಕ್ಟರ್ ವಿಭಾಗಗಳನ್ನು ವ್ಯಾಪಿಸಿರುವ ನಮ್ಮ ಇತರ ಬಹು ಯೋಜನೆಗಳಿಗೆ ಬಲವಾದ ಅಡಿಪಾಯ ಸಿಗುತ್ತದೆ ಎಂಬ ವಿಶ್ವಾಸ ನನಗಿದೆ ಎಂದು ಪತ್ರದಲ್ಲಿ ತಿಳಿಸಿದ್ದಾರೆ.

"ವಿಮಾನ ನಿಲ್ದಾಣದಲ್ಲಿನ ಸರಕು ನಿರ್ವಹಣೆಯ ದಕ್ಷತೆ ನಮ್ಮ ಕಾರ್ಯಾಚರಣೆಗಳ ಮೇಲೆ ಗಮನಾರ್ಹವಾದ ಪ್ರಭಾವವನ್ನು ಹೊಂದಿರುತ್ತದೆ. ನಾವು ನಮ್ಮ ಹಲವು ಉತ್ಪನ್ನಗಳಿಗೆ ಸಾಕಷ್ಟು ಪ್ರಮಾಣದಲ್ಲಿ ವಿಮಾನದ ಮೂಲಕ ಸರಕು ಸಾಗಣೆಯನ್ನು ಅವಲಂಬಿಸಿರುತ್ತೇವೆ.

"ಮೂಲಸೌಕರ್ಯ ಸನ್ನದ್ಧತೆಯ ಕಾಲಾವಧಿ, ಕೌಶಲ್ಯ ಮತ್ತು ಪ್ರತಿಭೆಗಳ ನೇಮಕ, ಕರ್ನಾಟಕ ಸರ್ಕಾರದ ಬೆಂಬಲ ಮತ್ತು ಯೋಜನೆಗೆ ಮೀಸಲಿಟ್ಟ ಪ್ರದೇಶದ ಸುತ್ತಮುತ್ತಲಿನ ಸಾಮಾಜಿಕ ಮೂಲಸೌಕರ್ಯಗಳ ಲಭ್ಯತೆಯನ್ನು ಗಮನಿಸುವುದು ಉತ್ತಮ,” ಎಂದು ಹೇಳಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ರಾಜ್ಯ ಸರ್ಕಾರದ 'ದ್ವೇಷ ಭಾಷಣ' ಮಸೂದೆಗೆ ಅಮಿತ್ ಶಾ ಅಡ್ಡಗಾಲು; ಅಸ್ತಿತ್ವದಲ್ಲಿರುವ ಕಾನೂನೇ ಸಾಕು: ಕೇಂದ್ರ

Mekedatu row: ಕರ್ನಾಟಕದ DPR ತಿರಸ್ಕರಿಸಿ; ಪ್ರಧಾನಿ ಮೋದಿಗೆ ತಮಿಳುನಾಡು ಸಿಎಂ ವಿಜಯ್ ಮನವಿ

IPL 2026: ನಾವೇನು ಸಿನಿಮಾ ಸ್ಟಾರ್‌ಗಳಲ್ಲ: ವಿಮಾನ ನಿಲ್ಗಾಣದಲ್ಲಿ Riyan Parag ಗರಂ, ವೈಭವ್ ಸೂರ್ಯವಂಶಿ ಶಾಕ್! Video

Video: 'ಕಾಂತಾರ' ಕೆಂಗಣ್ಣಿಗೆ ಗುರಿ, ಬಾಲಿವುಡ್​ನಿಂದ ಬ್ಯಾನ್; ಚಾಮುಂಡೇಶ್ವರಿಗೆ ತಲೆಬಾಗಿ ಕ್ಷಮೆಯಾಚಿಸಿದ ರಣವೀರ್ ಸಿಂಗ್!

IPL 2026: RCB vs GT ನಡುವಿನ ಕ್ವಾಲಿಫೈಯರ್ ಪಂದ್ಯಕ್ಕೆ ಮಳೆ ಆತಂಕ, ರಿಸರ್ವ್ ಡೇ ಕೂಡ ಇಲ್ಲ.. ಪಂದ್ಯ ರದ್ದಾದರೆ ಯಾರು ಫೈನಲ್ ಗೆ?

SCROLL FOR NEXT