ಸಂಗ್ರಹ ಚಿತ್ರ 
ರಾಜ್ಯ

ಕರ್ನಾಟಕದೊಂದಿಗೆ ಕೆಲಸ ಮಾಡಲು ಸಿದ್ಧ: ಗೊಂದಲಗಳಿಗೆ ತೆರೆ ಎಳೆದ ಫಾಕ್ಸ್‌ಕಾನ್

ಕರ್ನಾಟಕದಲ್ಲಿ ಐಫೋನ್‌ ಉತ್ಪಾದನಾ ಘಟಕವನ್ನು ಸ್ಥಾಪಿಸಿ ಒಂದು ಲಕ್ಷ ಉದ್ಯೋಗ ಸೃಷ್ಟಿಯಾಗುವ ವಿಚಾರ ಸಂಬಂಧ ಎದ್ದಿದ್ದ ಗೊಂದಲಗಳಿಗೆ ಫಾಕ್ಸ್‌ಕಾನ್ ತೆರೆ ಎಳೆದಿದೆ.

ಬೆಂಗಳೂರು: ಕರ್ನಾಟಕದಲ್ಲಿ ಐಫೋನ್‌ ಉತ್ಪಾದನಾ ಘಟಕವನ್ನು ಸ್ಥಾಪಿಸಿ ಒಂದು ಲಕ್ಷ ಉದ್ಯೋಗ ಸೃಷ್ಟಿಯಾಗುವ ವಿಚಾರ ಸಂಬಂಧ ಎದ್ದಿದ್ದ ಗೊಂದಲಗಳಿಗೆ ಫಾಕ್ಸ್‌ಕಾನ್ ತೆರೆ ಎಳೆದಿದೆ.

ಕರ್ನಾಟಕದೊಂದಿಗೆ ಕೆಲಸ ಮಾಡಲು ಸಿದ್ಧರಿದ್ದೇವೆ ಎಂದು ಫಾಕ್ಸ್‌ಕಾನ್ ಹೇಳಿದ್ದು, ಈ ಸಂಬಂಧ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರಿಗೆ ಪತ್ರವೊಂದನ್ನು ಬರೆದಿದೆ.

ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಎರಡು ಪುಟಗಳ ಪತ್ರ ಬರೆದಿರುವ ಫಾಕ್ಸ್‌ಕಾನ್ ಅಧ್ಯಕ್ಷ ಯಂಗ್ ಲಿಯು, ಬೆಂಗಳೂರಿನಲ್ಲಿ ‘ಪ್ರಾಜೆಕ್ಟ್ ಎಲಿಫೆಂಟ್’ ಅನ್ನು ಯಶಸ್ವಿಯಾಗಿ ಆರಂಭಿಸುವುದಾಗಿ ಹೇಳಿದ್ದಾರೆ. ಈ ಮೂಲಕ ಒಪ್ಪಂದದ ಬಗೆಗಿನ ಗೊಂದಲಗಳಿಗೆ ತೆರೆ ಎಳೆದಿದ್ದಾರೆ.

ಈ ಯೋಜನೆಗೆ ನಿಮ್ಮ ರಾಜ್ಯವನ್ನು ಸಂಭಾವ್ಯ ಹೂಡಿಕೆಯ ತಾಣವಾಗಿ ಪರಿಗಣಿಸುವುದರಿಂದ, ಯಾಂತ್ರಿಕ/ನಿಖರವಾದ ಯಂತ್ರೋಪಕರಣಗಳು, ಕೆ ಎಲೆಕ್ಟ್ರಿಕ್ ವಾಹನ, ಐಸಿ ವಿನ್ಯಾಸ ಮತ್ತು ಸೆಮಿಕಂಡಕ್ಟರ್ ವಿಭಾಗಗಳನ್ನು ವ್ಯಾಪಿಸಿರುವ ನಮ್ಮ ಇತರ ಬಹು ಯೋಜನೆಗಳಿಗೆ ಬಲವಾದ ಅಡಿಪಾಯ ಸಿಗುತ್ತದೆ ಎಂಬ ವಿಶ್ವಾಸ ನನಗಿದೆ ಎಂದು ಪತ್ರದಲ್ಲಿ ತಿಳಿಸಿದ್ದಾರೆ.

"ವಿಮಾನ ನಿಲ್ದಾಣದಲ್ಲಿನ ಸರಕು ನಿರ್ವಹಣೆಯ ದಕ್ಷತೆ ನಮ್ಮ ಕಾರ್ಯಾಚರಣೆಗಳ ಮೇಲೆ ಗಮನಾರ್ಹವಾದ ಪ್ರಭಾವವನ್ನು ಹೊಂದಿರುತ್ತದೆ. ನಾವು ನಮ್ಮ ಹಲವು ಉತ್ಪನ್ನಗಳಿಗೆ ಸಾಕಷ್ಟು ಪ್ರಮಾಣದಲ್ಲಿ ವಿಮಾನದ ಮೂಲಕ ಸರಕು ಸಾಗಣೆಯನ್ನು ಅವಲಂಬಿಸಿರುತ್ತೇವೆ.

"ಮೂಲಸೌಕರ್ಯ ಸನ್ನದ್ಧತೆಯ ಕಾಲಾವಧಿ, ಕೌಶಲ್ಯ ಮತ್ತು ಪ್ರತಿಭೆಗಳ ನೇಮಕ, ಕರ್ನಾಟಕ ಸರ್ಕಾರದ ಬೆಂಬಲ ಮತ್ತು ಯೋಜನೆಗೆ ಮೀಸಲಿಟ್ಟ ಪ್ರದೇಶದ ಸುತ್ತಮುತ್ತಲಿನ ಸಾಮಾಜಿಕ ಮೂಲಸೌಕರ್ಯಗಳ ಲಭ್ಯತೆಯನ್ನು ಗಮನಿಸುವುದು ಉತ್ತಮ,” ಎಂದು ಹೇಳಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

'ಸದನದಲ್ಲಿ ಹುಲಿ, ಹೈಕಮಾಂಡ್‌ ಮುಂದೆ ಇಲಿ'.. 'ಅಧಿಕಾರದಲ್ಲಿ ಉಳಿಯಲು DK Shivakumar ಕ್ಷಮೆಯಾಚನೆ': BJP-JDS ಟೀಕಾ ಪ್ರಹಾರ!

RSS ಅನ್ನು ಯಾರೂ "ಸಮರ್ಥಿಸಿಕೊಳ್ಳಬಾರದು": ಡಿಕೆಶಿ ಕ್ಷಮೆಯಾಚನೆ ಸ್ವಾಗತಿಸಿದ ಬಿ.ಕೆ ಹರಿಪ್ರಸಾದ್

Indian Stock Market: ಸತತ ಕುಸಿತ, ಬರೊಬ್ಬರಿ ಶೇ.1ರಷ್ಟು ಕುಸಿದ Sensex, Nifty 50, ರೂಪಾಯಿ ಮೌಲ್ಯ ಇಳಿಕೆ!

'ನನ್ನ ಕುರ್ಚಿ'ಗೆ ಪ್ರಧಾನಿ ಮೋದಿ ಗೌರವ ನೀಡಬೇಕು: ಪಶ್ಚಿಮ ಬಂಗಾಳ ಸಿಎಂ ಮಮತಾ ಬ್ಯಾನರ್ಜಿ ಕಿಡಿ!

Indian Navy ಗೆ ಮತ್ತಷ್ಟು ಬಲ: INS Udaygiri, INS Himgiri ಯುದ್ಧನೌಕೆಗಳು ಸೇರ್ಪಡೆ! Video

SCROLL FOR NEXT