ಅಂಗಡಿ ತೆರವುಗೊಳಿಸುತ್ತಿರುವ ಅಧಿಕಾರಿಗಳು. 
ರಾಜ್ಯ

ಗಾಂಧಿ ಬಜಾರ್‌ನಲ್ಲಿ ಪಾರ್ಕಿಂಗ್ ಕಾಂಪ್ಲೆಕ್ಸ್ ನಿರ್ಮಾಣ: ಅಂಗಡಿ ಕಳೆದುಕೊಳ್ಳುವ ಭಯ, ಪಾಲಿಕೆ ಅಧಿಕಾರಿಗಳೊಂದಿಗೆ ವ್ಯಾಪಾರಿಗಳ ಸಂಘರ್ಷ

ಮಲ್ಟಿಲೆವೆಲ್ ಪಾರ್ಕಿಂಗ್ ಕಾಂಪ್ಲೆಕ್ಸ್ ನಿರ್ಮಿಸಲು ಗಾಂಧಿ ಬಜಾರ್‌ನಲ್ಲಿರುವ ಹಳೆಯ ಅಂಗಡಿಗಳನ್ನು ನೆಲಸಮಗೊಳಿಸಲು ಬಿಬಿಎಂಪಿ ಮುಂದಾಗಿದ್ದು, ಅಧಿಕಾರಿಗಳ ಈ ಕ್ರಮಕ್ಕೆ ವ್ಯಾಪಾರಿಗಳು ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಬೆಂಗಳೂರು: ಮಲ್ಟಿಲೆವೆಲ್ ಪಾರ್ಕಿಂಗ್ ಕಾಂಪ್ಲೆಕ್ಸ್ ನಿರ್ಮಿಸಲು ಗಾಂಧಿ ಬಜಾರ್‌ನಲ್ಲಿರುವ ಹಳೆಯ ಅಂಗಡಿಗಳನ್ನು ನೆಲಸಮಗೊಳಿಸಲು ಬಿಬಿಎಂಪಿ ಮುಂದಾಗಿದ್ದು, ಅಧಿಕಾರಿಗಳ ಈ ಕ್ರಮಕ್ಕೆ ವ್ಯಾಪಾರಿಗಳು ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಅಂಗಡಿಗಳ ತೆರವುಗೊಳಿಸಲು ಅಧಿಕಾರಿಗಳು ಮುಂದಾಗುತ್ತಿದ್ದಂತೆಯೇ ಇದಕ್ಕೆ ವ್ಯಾಪಾರಿಗಳು ತೀವ್ರ ವಿರೋಧ ವ್ಯಕ್ತಪಡಿಸಿ, ತಮ್ಮ ಅಂಗಡಿಗಳನ್ನು ಮರುಹಂಚಿಕೆ ಮಾಡುವುದಾಗಿ ಬಿಬಿಎಂಪಿ ಆಯುಕ್ತರು ಲಿಖಿತ ಭರವಸೆ ನೀಡಬೇಕೆಂದು ಒತ್ತಾಯಿಸಿದರು.

ಸ್ಮಾರ್ಟ್ ಸಿಟಿ ಯೋಜನೆಯಡಿ, ಬಿಬಿಎಂಪಿಯು ನೆಲಮಾಳಿಗೆಯಲ್ಲಿ ಅಂಗಡಿಗಳೊಂದಿಗೆ ಮಲ್ಟಿಲೆವೆಲ್ ಕಾರ್ ಪಾರ್ಕ್ ನಿರ್ಮಿಸುವ ಗುರಿಯನ್ನು ಹೊಂದಿದೆ.

ಈ ಕುರಿತು ಗಾಂಧಿ ಬಜಾರ್ ವರ್ತಕರ ಸಂಘದ ಸದಸ್ಯ ಗೋಪಿನಾಥ್ ಅವರು ಮಾತನಾಡಿ, ಬಿಬಿಎಂಪಿಯು ಯೋಜನೆಯನ್ನು ಬೆಂಗಳೂರು ಸ್ಮಾರ್ಟ್ ಸಿಟಿ ಲಿಮಿಟೆಡ್‌ಗೆ (ಬಿಎಸ್‌ಸಿಎಲ್) ವರ್ಗಾಯಿಸಿದ್ದು, ಸೋಮವಾರ ಎರಡು ಅಂಗಡಿಗಳ ಗೋಡೆಗಳನ್ನು ಜೆಸಿಬಿ ಯಂತ್ರಗಳು ನೆಲಸಮಗೊಳಿಸಿವೆ. ದೂರು ಹಿಡಿದು ಜಂಟಿ ಆಯುಕ್ತರ ಕಚೇರಿಯನ್ನು ಸಂಪರ್ಕಿಸಿದ್ದೆವು. ಈ ನಡುವೆ ಇದ್ದಕ್ಕಿದ್ದಂತೆ ಅಂಗಡಿಗಳ ತೆರವು ಕಾರ್ಯಾಚರಣೆ ನಡೆಸಿದ್ದ ಹಿನ್ನೆಲೆಯಲ್ಲಿ ವಾಹನವನ್ನು ತಡೆಹಿಡಿಯಲಾಯಿತು. ಯೋಜನೆ ಪೂರ್ಣಗೊಂಡ ನಂತರ ಅಂಗಡಿಗಳ ಹಂಚಿಕೆ ಮಾಡುವುದಾಗಿ ತಿಳಿಸಿದರು. ಆದರೆ, ಬಿಬಿಎಂಪಿ ಮುಖ್ಯ ಆಯುಕ್ತರು ಅಥವಾ ದಕ್ಷಿಣ ವಲಯದ ಜಂಟಿ ಆಯುಕ್ತರಿಂದಲೇ ಪತ್ರ ನೀಡಬೇಕೆಂಬುದು ನಮ್ಮ ಬೇಡಿಕೆಯಾಗಿದೆ ಎಂದು ಹೇಳಿದ್ದಾರೆ.

ಬೆಂಗಳೂರು ಸ್ಮಾರ್ಟ್ ಸಿಟಿ ಲಿಮಿಟೆಡ್ ಅಧಿಕಾರಿಗಳು ಮಾತನಾಡಿ, ಮಾರುಕಟ್ಟೆ ಶಿಥಿಲಾವಸ್ಥೆಯಲ್ಲಿದ್ದು, ತಕ್ಷಣ ಮಧ್ಯಪ್ರವೇಶಿಸುವ ಅಗತ್ಯವಿರುವುದರಿಂದ ಪಾಲಿಕೆಯು ಈ ಹಿಂದೆ 37 ಅಂಗಡಿಗಳಿಗೆ ನೋಟಿಸ್ ನೀಡಿತ್ತು. “ಬಿಎಸ್‌ಸಿಎಲ್ ಯೋಜನೆಯಡಿ ಬಹುಮಟ್ಟದ ಕಟ್ಟಡ ಬರಲಿದ್ದು, 180 ಕಾರುಗಳನ್ನು ನಿಲುಗಡೆ ಮಾಡಬಹುದಾಗಿದೆ. ಯೋಜನೆಯು ನೆಲಮಾಳಿಗೆಯ ಮಟ್ಟದಲ್ಲಿ ಅಂಗಡಿಗಳನ್ನು ಹೊಂದಿದ್ದು, 20 ಕೋಟಿ ರೂಪಾಯಿ ವೆಚ್ಚದಲ್ಲಿ 47 ಮಳಿಗೆಗಳನ್ನು ನಿರ್ಮಿಸಲಾಗುವುದು ಎಂದು ಮಾಹಿತಿ ನೀಡಿದ್ದಾರೆ.

ಬಿಬಿಎಂಪಿ ಟೆಂಡರ್ ಪ್ರಕ್ರಿಯೆಗೆ ಮುಂದಾಗುವುದರಿಂದ ಯೋಜನೆ ಪೂರ್ಣಗೊಂಡರೆ ಅಂಗಡಿಗಳು ಸಿಗುವುದಿಲ್ಲ ಎಂಬುದು ವ್ಯಾಪಾಸ್ಥರ ಆತಂಕವಾಗಿದೆ.

ಈ ನಡುವೆ ಬಿಬಿಎಂಪಿ ಅಧಿಕಾರಿಗಳು ಮಾತನಾಡಿ, ಅನೇಕ ವ್ಯಾಪಾರಿಗಳು ದಶಕಗಳಿಂದ ಬಾಡಿಗೆ ಪಾವತಿಸಿಲ್ಲ. ಹೀಗಾಗಿ ಕಠಿಣ ಕ್ರಮದ ಅಗತ್ಯವಿದೆ ಎಂದು ಹೇಳಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಅಮೆರಿಕ ನಿಯೋಜಿತ ರಾಯಭಾರಿ ಸೆರ್ಗಿಯೊ ಗೋರ್- ಮೋದಿ, ಜೈಶಂಕರ್ ಭೇಟಿ; Tariff ಒತ್ತಡದ ನಡುವೆ ಭಾರತ-ಅಮೆರಿಕ ಸಂಬಂಧ ಸುಧಾರಣೆಯ ಸೂಚನೆ?

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

ಅಬ್ಬಬ್ಬಾ ರೋಮಾಂಚನ: ಅದ್ಭುತ ಸೃಷ್ಟಿಸಿದ ರಿಷಬ್ ಶೆಟ್ಟಿಗೆ ರಾಷ್ಟ್ರಪ್ರಶಸ್ತಿ ಕೊಡಲೇಬೇಕು - ತಮಿಳು ನಿರ್ದೇಶಕ ಅಟ್ಲೀ

Pakistan: ಇಸ್ರೇಲ್ ವಿರೋಧಿ ಪ್ರತಿಭಟನಾ ಜಾಥಾ, ಪೋಲೀಸರ ಗುಂಡೇಟಿಗೆ 11 ಮಂದಿ ಬಲಿ! Video

ಉತ್ತರ ಪ್ರದೇಶಕ್ಕೆ ಭೇಟಿ ನೀಡಿದ ತಾಲಿಬಾನ್ ಸಚಿವನಿಗೆ ಅದ್ಧೂರಿ ಸ್ವಾಗತ, ಸರ್ಕಾರದ ಭದ್ರತೆ; ಯೋಗಿಗೆ ನಾಚಿಕೆಯಾಗಬೇಕು- SP ಸಂಸದ ಶಫೀಕರ್

SCROLL FOR NEXT