ಬೆಂಗಳೂರಿನಲ್ಲಿ ಬುಧವಾರ ನಡೆದ ಸಾರ್ವಜನಿಕ ಕುಂದುಕೊರತೆಗಳ ಸಭೆಯಲ್ಲಿ ಬಿಡಿಎ ಆಯುಕ್ತ ಕುಮಾರ್ ಜಿ ನಾಯಕ್ ಮತ್ತು ಇತರ ಅಧಿಕಾರಿಗಳು ಹಾಜರಿರುವುದು. 
ರಾಜ್ಯ

ಕಡತಗಳ ವಿಲೇವಾರಿ ವಿಳಂಬ: ಅಧಿಕಾರಿಗಳ ವಿರುದ್ಧ ಕ್ರಮದ ಎಚ್ಚರಿಕೆ ನೀಡಿದ ಬಿಡಿಎ

ಉದ್ದೇಶಪೂರ್ವಕವಾಗಿ ಕಡತಗಳನ್ನು ವಿಲೇವಾರಿ ವಿಳಂಬ ಮಾಡುತ್ತಿರುವ ಅಧಿಕಾರಿಗಳ ವಿರುದ್ಧ ಸೂಕ್ರ ಕ್ರಮ ಕೈಗೊಳ್ಳುವುದಾಗಿ ಬಿಡಿಎ ಬುಧವಾರ ಎಚ್ಚರಿಕೆ ನೀಡಿದೆ.

ಬೆಂಗಳೂರು: ಉದ್ದೇಶಪೂರ್ವಕವಾಗಿ ಕಡತಗಳನ್ನು ವಿಲೇವಾರಿ ವಿಳಂಬ ಮಾಡುತ್ತಿರುವ ಅಧಿಕಾರಿಗಳ ವಿರುದ್ಧ ಸೂಕ್ರ ಕ್ರಮ ಕೈಗೊಳ್ಳುವುದಾಗಿ ಬಿಡಿಎ ಬುಧವಾರ ಎಚ್ಚರಿಕೆ ನೀಡಿದೆ.

ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರದ ಆಯುಕ್ತ ಕುಮಾರ್ ಜಿ ನಾಯಕ್ ಅವರು ಬುಧವಾರ ಸಾರ್ವಜನಿಕರ ಕುಂದುಕೊರತೆಗಳ ಸಭೆ ನಡೆಸಿದರು. ಈ ವೇಳೆ ಸಾರ್ವಜನಿಕರು ನೀಡಿದ ದೂರುಗಳನ್ನು ಆಲಿಸಿದ ನಾಯಕ್ ಅವರು, ತನಿಖೆ ನಡೆಸಿ ಸೂಕ್ತ ಕ್ರಮ ಕೈಗೊಳ್ಳುವಂತೆ ಅಧಿಕಾರಿಗಳಿಗೆ ಸೂಚನೆ ನೀಡಿದರು.

ಮಧ್ಯಾಹ್ನ 2.15ಕ್ಕೆ ಆರಂಭವಾದ ಸಭೆಯು ಸಂಜೆ 7 ಗಂಟೆಯವರೆಗೂ ನಡೆಯಿತು. ಸಭೆಯಲ್ಲಿ ಉದ್ದೇಶಪೂರ್ವಕವಾಗಿಯೇ ಕೆಲ ಅಧಿಕಾರಿಗಳು ಕಡತಗಳ ವಿವೇವಾರಿಯಲ್ಲಿ ವಿಳಂಬ ಮಾಡುತ್ತಿದ್ದಾರೆಂದು ಸುಮಾರು 83 ದೂರುಗಳು ಬಂದವು.

ಬನಶಂಕರಿ ಆರನೇ ಹಂತದ 175 ನಿವೇಶನದಾರರನ್ನು ಪ್ರತಿನಿಧಿಸುವ ಗುಂಪೊಂದು 2006 ರಿಂದ ನ್ಯಾಯಾಲಯದಲ್ಲಿರುವ ಮಾನವತೆಕಾವಲ್ ಮತ್ತು ತಲಘಟ್ಟಪುರ ಗ್ರಾಮಗಳ ಸಮಸ್ಯೆಗಳನ್ನು ಪರಿಹರಿಸಲು ಬಿಡಿಎ ವಕೀಲರು ಮುಂದೆ ಬರುತ್ತಿಲ್ಲ ಎಂದು ಆರೋಪಿಸಿದರು. ಪರ್ಯಾಯ ಸೈಟ್‌ಗಳ ಅಗತ್ಯ ಕುರಿತು ಕೆಲವರು ಮಾತನಾಡಿದರು.

“ಸ್ವಾಧೀನ ಪ್ರಮಾಣಪತ್ರವನ್ನು ನೀಡಿದ ನಂತರ, ಕೆಲವು ತರಕಾರುಗಳು ಬಂದಿದ್ದೇ ಆದರೆ, ಸ್ವಾಧೀನಪತ್ರ ಪಡೆದುಕೊಂಡಾದ ಸಮಸ್ಯೆಗೆ ಸಿಲುಕಿಕೊಳ್ಳುತ್ತಾನೆ. ಸ್ವಾಧೀನ ಪ್ರಮಾಣಪತ್ರವನ್ನು ಈಗಾಗಲೇ ಹಸ್ತಾಂತರಿಸಿರುವುದರಿಂದ ಬಿಡಿಎ ನಿಯಮ 11 (ಎ) ರ ಪ್ರಕಾರ ಬಿಡಿಎ ಯಾವುದೇ ಪರ್ಯಾಯ ಸೈಟ್ ಅನ್ನು ನೀಡಲು ಸಾಧ್ಯವಾಗುವುದಿಲ್ಲ ಎಂದು ವ್ಯಕ್ತಿಯೊಬ್ಬರು ವಿವರಿಸಿದರು.

ನಿಯಮ 11 (ಎ) ಅನ್ನು ತಿದ್ದುಪಡಿ ಮಾಡಲು ರಾಜ್ಯ ಸರ್ಕಾರಕ್ಕೆ ಅವಕಾಶ ನೀಡುವಂತೆ ಸುಪ್ರೀಂಕೋರ್ಟ್'ಗೆ ಮನವಿ ಮಾಡುವುದು ಬಿಡಿಎಗೆ ಈಗ ಲಭ್ಯವಿರುವ ಏಕೈಕ ಮಾರ್ಗವಾಗಿದೆ ಎಂದಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

'ನಿಮ್ಮ ಭಾಷಣ ನಾಚಿಕೆಯಿಲ್ಲದೆ ಸಮರ್ಥನೆ ಮಾಡಿಕೊಂಡಂತೆ ಇತ್ತು': 1947ರ ಐನ್ ಸ್ಟೈನ್ ನೆಹರೂಗೆ ಬರೆದ ಪತ್ರ ಉಲ್ಲೇಖಿಸಿ Modi ಟೀಕಿಸಿದ ಕಾಂಗ್ರೆಸ್

'ಇಸ್ರೇಲ್‌ ಜೊತೆ ನಮ್ಮ ಸಂಬಂಧ 'ರಕ್ತ ಮತ್ತು ತ್ಯಾಗ'ದಲ್ಲಿ ಬರೆಯಲ್ಪಟ್ಟಿದೆ, ನಾನು ಹುಟ್ಟಿದ ವರ್ಷ ಭಾರತ ಇಸ್ರೇಲ್ ಗೆ ಮಾನ್ಯತೆ ನೀಡಿತು': ಪ್ರಧಾನಿ ಮೋದಿ-Video

ಅಮ್ಮಾ....ಐ ಲವ್ ಯೂ ಸೋ ಮಚ್: ಕುವೈತ್ ನಲ್ಲಿದ್ದ ತಾಯಿಗೆ ಕೊನೆಯ ಸಂದೇಶ ಕಳಿಸಿ ಯೂಟ್ಯೂಬರ್ ಆತ್ಮಹತ್ಯೆ

ಹಗರಣ ರಹಿತ ಹುದ್ದೆ ಭರ್ತಿಗೆ ಕ್ರಮ: ಯುವಕರು ಧೈರ್ಯವಾಗಿರಿ, ನಿಮ್ಮ ಸಮಸ್ಯೆ ಬಗೆಹರಿಸುತ್ತೇವೆ, ಸದ್ಯದಲ್ಲೇ ಸಂದೇಶ ನೀಡುತ್ತೇವೆ; ಡಿ ಕೆ ಶಿವಕುಮಾರ್

ದಲಿತಾಸ್ತ್ರದ ಮೂಲಕ ಕಟ್ಟಿಹಾಕಲು ಸಿದ್ದು ಬಣ ಕಸರತ್ತು: ತೆರಮರೆಯಲ್ಲಿ ಡಿಕೆಶಿ ಬೆಂಬಲಿಗರ ಮಸಲತ್ತು; ಅಂತರ್ಯುದ್ಧದಲ್ಲಿ ಯಾರಿಗಿದೆ ಗೆಲ್ಲುವ ತಾಕತ್ತು?

SCROLL FOR NEXT