ಅಗ್ನಿ ಅವಘಡ 
ರಾಜ್ಯ

ಬೆಂಗಳೂರಿನ ಸರ್ಜಾಪುರ ರಸ್ತೆಯಲ್ಲಿ ಭಾರಿ ಅಗ್ನಿ ಅವಘಡ; ಹೊತ್ತಿ ಉರಿದ ಕರ್ಲಾನ್ ಶಾಪ್

ಬೆಂಗಳೂರಿನ ಸರ್ಜಾಪುರ ರಸ್ತೆಯ ದೊಡ್ಡಕನೇಲಿಯಲ್ಲಿ ಗುರುವಾರ ಬೆಳಗ್ಗೆ ಭಾರಿ ಅಗ್ನಿ ಅವಘಡ ಸಂಭವಿಸಿದ್ದು, ಕ್ಷಣಾರ್ಧದಲ್ಲೇ ಕರ್ಲಾನ್ ಹಾಸಿಗೆ ಮಳಿಗೆ ಹೊತ್ತಿ ಉರಿದಿದೆ.

ಬೆಂಗಳೂರು: ಬೆಂಗಳೂರಿನ ಸರ್ಜಾಪುರ ರಸ್ತೆಯ ದೊಡ್ಡಕನೇಲಿಯಲ್ಲಿ ಗುರುವಾರ ಬೆಳಗ್ಗೆ ಭಾರಿ ಅಗ್ನಿ ಅವಘಡ ಸಂಭವಿಸಿದ್ದು, ಕ್ಷಣಾರ್ಧದಲ್ಲೇ ಕರ್ಲಾನ್ ಹಾಸಿಗೆ ಮಳಿಗೆ ಹೊತ್ತಿ ಉರಿದಿದೆ.

ಕರ್ಲಾನ್ ಶಾಪ್ ನಲ್ಲಿ ಹೊತ್ತಿಕೊಂಡ ಬೆಂಕಿ ಪಕ್ಕದ ಮಳಿಗೆಗಳಿಗೂ ಹರಡಿದ್ದು, ಈ ಮಳಿಗೆಗಳಲ್ಲಿ ಯಾರೂ ಇಲ್ಲದ ಕಾರಣ ಯಾವುದೇ ಜೀವಹಾನಿಯಾಗಿಲ್ಲ. ಆದರೆ ಕರ್ಲಾನ್ ಮಳಿಗೆಯಲ್ಲಿದ್ದ ವಸ್ತುಗಳು ಸುಟ್ಟು ಕರಕಲಾಗಿವೆ.

ಬೆಂಕಿ ಅವಘಡದ ಮಾಹಿತಿ ಪಡೆದ ಅಗ್ನಿಶಾಮಕ ದಳದ ಸಿಬ್ಬಂದಿ ತಕ್ಷಣ ಸ್ಥಳಕ್ಕೆ ದೌಡಾಯಿಸಿದ್ದು, ಬೆಂಕಿ ನಂದಿಸುವಲ್ಲಿ ಯಶಸ್ವಿಯಾಗಿದ್ದಾರೆ.

ಅಗ್ನಿ ಅವಘಡದಿಂದಾಗಿ ಸರ್ಜಾಪುರ ರಸ್ತೆಯಲ್ಲಿ ಭಾರಿ ಟ್ರಾಫಿಕ್ ಜಾಮ್ ಉಂಟಾಗಿದ್ದು, ಈ ಘಟನೆಯ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈಲರ್ ಆಗಿದೆ.

ಈ ಬೆಂಕಿ ಅವಘಡಕ್ಕೆ ಸ್ಪಷ್ಟ ಕಾರಣ ಇನ್ನೂ ತಿಳಿದು ಬಂದಿಲ್ಲ. ಆದರೆ ಶಾರ್ಟ್ ಸರ್ಕ್ಯೂಟ್ ನಿಂದ ಬೆಂಕಿ ಕಾಣಿಸಿಕೊಂಡಿರುವ ಶಂಕೆ ವ್ಯಕ್ತವಾಗಿದೆ. ಈ ಸಂಬಂಧ ಬೆಳ್ಳಂದೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಅಮೆರಿಕ ನಿಯೋಜಿತ ರಾಯಭಾರಿ ಸೆರ್ಗಿಯೊ ಗೋರ್- ಮೋದಿ, ಜೈಶಂಕರ್ ಭೇಟಿ; Tariff ಒತ್ತಡದ ನಡುವೆ ಭಾರತ-ಅಮೆರಿಕ ಸಂಬಂಧ ಸುಧಾರಣೆಯ ಸೂಚನೆ?

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

ಅಬ್ಬಬ್ಬಾ ರೋಮಾಂಚನ: ಅದ್ಭುತ ಸೃಷ್ಟಿಸಿದ ರಿಷಬ್ ಶೆಟ್ಟಿಗೆ ರಾಷ್ಟ್ರಪ್ರಶಸ್ತಿ ಕೊಡಲೇಬೇಕು - ತಮಿಳು ನಿರ್ದೇಶಕ ಅಟ್ಲೀ

Pakistan: ಇಸ್ರೇಲ್ ವಿರೋಧಿ ಪ್ರತಿಭಟನಾ ಜಾಥಾ, ಪೋಲೀಸರ ಗುಂಡೇಟಿಗೆ 11 ಮಂದಿ ಬಲಿ! Video

ಉತ್ತರ ಪ್ರದೇಶಕ್ಕೆ ಭೇಟಿ ನೀಡಿದ ತಾಲಿಬಾನ್ ಸಚಿವನಿಗೆ ಅದ್ಧೂರಿ ಸ್ವಾಗತ, ಸರ್ಕಾರದ ಭದ್ರತೆ; ಯೋಗಿಗೆ ನಾಚಿಕೆಯಾಗಬೇಕು- SP ಸಂಸದ ಶಫೀಕರ್

SCROLL FOR NEXT