ಸಂಗ್ರಹ ಚಿತ್ರ 
ರಾಜ್ಯ

ಉಡುಪಿ ಕೃಷ್ಣ ಮಠಕ್ಕೆ ಭೂಮಿ ಕೊಟ್ಟಿದ್ದು ಮುಸಲ್ಮಾನ: ಕಾಂಗ್ರೆಸ್ ಮುಖಂಡನ ಹೇಳಿಕೆ ವಿವಾದಕ್ಕೆ ಎಡೆ

ಉಡುಪಿಯ ಕೃಷ್ಣಮಠಕ್ಕೆ ಭೂಮಿ ನೀಡಿದ್ದು ಮುಸಲ್ಮಾನರು ಎಂದು ಕಾಂಗ್ರೆಸ್ ಮುಖಂಡರೊಬ್ಬರು ನೀಡಿರುವ ಹೇಳಿಕೆ ಇದೀಗ ವಿವಾದ ಸೃಷ್ಟಿಸಿದೆ.

ಮಂಗಳೂರು/ಉಡುಪಿ: ಉಡುಪಿಯ ಕೃಷ್ಣಮಠಕ್ಕೆ ಭೂಮಿ ನೀಡಿದ್ದು ಮುಸಲ್ಮಾನರು ಎಂದು ಕಾಂಗ್ರೆಸ್ ಮುಖಂಡರೊಬ್ಬರು ನೀಡಿರುವ ಹೇಳಿಕೆ ಇದೀಗ ವಿವಾದ ಸೃಷ್ಟಿಸಿದೆ.

ಕಾಂಗ್ರೆಸ್ ಮುಖಂಡ ಹಾಗೂ ಮೂಡುಬಿದಿರೆ ಕ್ಷೇತ್ರದ ಕಾಂಗ್ರೆಸ್ ಟಿಕೆಟ್ ಆಕಾಂಕ್ಷಿ ಮಿಥುನ್ ರೈ ಅವರು ನೀಡಿರುವ ಹೇಳಿಕೆ ವಿವಾದಕ್ಕೆ ಕಾರಣವಾಗಿದೆ.

ಮೂಡುಬಿದಿರೆಯಲ್ಲಿ ಮಸೀದಿಯೊಂದರಲ್ಲಿ ಮಾತನಾಡಿದ್ದ ರೈ, ಉಡುಪಿ ಮಠಕ್ಕೆ ಜಾಗ ಕೊಟ್ಟಿದ್ದು ಮುಸಲ್ಮಾನ ರಾಜರು ಎಂದು ಹೇಳಿದ್ದಾರೆ. ಈ ಹೇಳಿಕೆಯ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ.

ಈ ಹೇಳಿಕೆ ವಿರುದ್ಧ ಬಿಜೆಪಿ ತೀವ್ರವಾಗಿ ಕಿಡಿಕಾರಿದೆ. ಈ ವಿಡಿಯೋ ಕುರಿತು ಮಂಗಳವಾರ ಪ್ರತಿಕ್ರಿಯಿಸಿರುವ ಉಡುಪಿಯ ಬಿಜೆಪಿ ಶಾಸಕ ರಘುಪತಿ ಭಟ್, ‘ಶ್ರೀಕೃಷ್ಣ ಮಠಕ್ಕೆ ಯಾವುದೇ ಮುಸ್ಲಿಂ ದೊರೆ ಭೂಮಿಯನ್ನು ದಾನ ಮಾಡಿಲ್ಲ, ಒಬ್ಬ ರಾಮಭೋಜ ಮಠಕ್ಕೆ ಭೂಮಿ ನೀಡಿದ್ದಾರೆ. ಭೂಮಿ ಕೊಟ್ಟ ಬಗ್ಗೆ ಉಲ್ಲೇಖಗಳಿವೆ. ಮುಂದೆ ಆ ಭೂಮಿಯೇ ಕೃಷ್ಣ ಮಠಕ್ಕೆ ಬಳಕೆಯಾಗಿದೆ, ಅನಂತೇಶ್ವರ ದೇಗುಲ ನಂತರ ಕೃಷ್ಣ ಮಠ ನಿರ್ಮಾಣಗೊಂಡಿದೆ. ಸದ್ಯದ ಜಾಮಿಯಾ ಮಸೀದಿ ಕೂಡ ಜಂಗಮರ ಮಠದ ಜಾಗದಲ್ಲಿತ್ತು. ಮುಸಲ್ಮಾನರಿಗೂ ಮಸೀದಿ ಕಟ್ಟಲು ಜಂಗಮರ ಮಠ ಜಾಗ ಕೊಟ್ಟಿದೆ, ಶೋಕಮಾತಾ ಚರ್ಚ್ ಕೃಷ್ಣ ಮಠದವರು ಕೊಟ್ಟ ಲೀಸ್ ಭೂಮಿಯಲ್ಲಿದೆ.

ಕ್ರಿಶ್ಚಿಯನ್ಸ್​​​ ಸಮುದಾಯಕ್ಕೆ ಚರ್ಚ್​​ಗೆ ಕೃಷ್ಣಾಪುರ ಮಠ ಭೂಮಿ ನೀಡಿದೆ, ಮಿಥುನ್ ರೈ ಯಾವ ಮುಸಲ್ಮಾನ ರಾಜನ ಬಗ್ಗೆ ಮಾತಾಡಿದ್ದಾರೆಂಬುದು ನನಗೆ ಗೊತ್ತಿಲ್ಲ. ಮಿಥುನ್ ರೈ ಅವಕು ಅಯೋಧ್ಯೆಯ ಪರಿಸ್ಥಿತಿ ಬಗ್ಗೆ ಚಿಂತನೆ ಮಾಡಲಿ ಎಂದು ಹೇಳಿದ್ದಾರೆ.

ಈ ನಡುವೆ ಹೇಳಿಕೆಯನ್ನು ಸಮರ್ಥಿಸಿಕೊಂಡಿರುವ ರೈ, ಪತ್ರಿಕೆಗಳಲ್ಲಿ ಬಂದಿದ್ದ ವರದಿ ನೋಡಿ ನಾನು ಹೇಳಿಕೆ ನೀಡಿದ್ದೇನೆ. ನಾನು ಸೌಹಾರ್ದಯುತ ಹೇಳಿಕೆ ನೀಡಿದ್ದೇನೆ ಎಂದು ಹೇಳಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಅಮೆರಿಕ ನಿಯೋಜಿತ ರಾಯಭಾರಿ ಸೆರ್ಗಿಯೊ ಗೋರ್- ಮೋದಿ, ಜೈಶಂಕರ್ ಭೇಟಿ; Tariff ಒತ್ತಡದ ನಡುವೆ ಭಾರತ-ಅಮೆರಿಕ ಸಂಬಂಧ ಸುಧಾರಣೆಯ ಸೂಚನೆ?

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

ಅಬ್ಬಬ್ಬಾ ರೋಮಾಂಚನ: ಅದ್ಭುತ ಸೃಷ್ಟಿಸಿದ ರಿಷಬ್ ಶೆಟ್ಟಿಗೆ ರಾಷ್ಟ್ರಪ್ರಶಸ್ತಿ ಕೊಡಲೇಬೇಕು - ತಮಿಳು ನಿರ್ದೇಶಕ ಅಟ್ಲೀ

Pakistan: ಇಸ್ರೇಲ್ ವಿರೋಧಿ ಪ್ರತಿಭಟನಾ ಜಾಥಾ, ಪೋಲೀಸರ ಗುಂಡೇಟಿಗೆ 11 ಮಂದಿ ಬಲಿ! Video

ಉತ್ತರ ಪ್ರದೇಶಕ್ಕೆ ಭೇಟಿ ನೀಡಿದ ತಾಲಿಬಾನ್ ಸಚಿವನಿಗೆ ಅದ್ಧೂರಿ ಸ್ವಾಗತ, ಸರ್ಕಾರದ ಭದ್ರತೆ; ಯೋಗಿಗೆ ನಾಚಿಕೆಯಾಗಬೇಕು- SP ಸಂಸದ ಶಫೀಕರ್

SCROLL FOR NEXT